![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 23, 2021, 5:18 AM IST
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ ಆಚರಣೆ ಅ. 24ರಂದು ರವಿವಾರ ಸರಳವಾಗಿ ನಡೆಯಲಿದೆ.
ಆ ದಿನ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಲಿದೆ. ಸಂಜೆ 5ಕ್ಕೆ ಮಹೋತ್ಸವ ಸಭಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ತುಮಕೂರಿನ ನಿವೃತ್ತ ಜಿಲ್ಲಾಧಿಕಾರಿ ಸಿ. ಸೋಮಶೇಖರ್ ಅಭಿನಂದನ ಭಾಷಣ ಮಾಡುವರು. ಆ ಬಳಿಕ ಡಾ| ಹೆಗ್ಗಡೆಯವರು ಮುಂದಿನ ವರ್ಷದ ಹೊಸ ಯೋಜನೆಗಳನ್ನು ಪ್ರಕಟಿಸುವರು.
ಹಿರಿಯ ನೌಕರರಾದ ಶುಭಚಂದ್ರರಾಜ ಮತ್ತು ತೋಟಗಾರಿಕಾ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಪೂಜಾರಿ ಅವರನ್ನು ಹೆಗ್ಗಡೆಯವರು ಸಮ್ಮಾನಿಸುವರು.
ಇದನ್ನೂ ಓದಿ:ಕೇರಳದಲ್ಲಿ ಇನ್ನೂ 2 ವಾರ ಮಳೆ; 9 ಆಣೆಕಟ್ಟಿಗೆ ರೆಡ್, 7 ಜಿಲ್ಲೆಗೆ ಯೆಲ್ಲೋ ಅಲರ್ಟ್
ಅಪೂರ್ವ ಸಾಧನೆಗಳ ಸರದಾರ 1968ರ ಅ. 24ರಂದು ನೆಲ್ಯಾಡಿಬೀಡಿನಲ್ಲಿ 21ನೇ ಧರ್ಮಾಧಿಕಾರಿಯಾಗಿ ತನ್ನ 20ನೇ ವರ್ಷದಲ್ಲಿ ಪಟ್ಟಾಭಿಷಿಕ್ತರಾದ ಡಾ| ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ. ವಿನೂತನ ಯೋಜನೆಗಳ ಮೂಲಕ ಡಾ| ಹೆಗ್ಗಡೆಯವರ ಚಿಂತನ-ಮಂಥನದಿಂದ ಯಶಸ್ವಿಯಾಗಿ ಲೋಕಕಲ್ಯಾಣಕ್ಕಾಗಿ ಅನೇಕಾನೇಕ ಸೇವಾ ಕಾರ್ಯಗಳು ಮೂಡಿಬಂದಿವೆ. ಅವರ ಕೆಲವುಯೋಜನೆಗಳಿಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಮಾನ್ಯತೆ ನೀಡಿ ಅನುಷ್ಠಾನಗೊಳಿಸಿವೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.