ಮಂಗಳೂರು: ಕಾಶೀ ಮಠಾಧೀಶರ ದಿಗ್ವಿಜಯ ಮಹೋತ್ಸವ; ಗಜ ಪಡೆ ಆಕರ್ಷಣೆ


Team Udayavani, Oct 16, 2022, 12:51 AM IST

ಮಂಗಳೂರು: ಕಾಶೀ ಮಠಾಧೀಶರ ದಿಗ್ವಿಜಯ ಮಹೋತ್ಸವ; ಗಜ ಪಡೆ ಆಕರ್ಷಣೆ

ಮಂಗಳೂರು: ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚಾತುರ್ಮಾಸ ವ್ರತ ಕೈಗೊಂಡಿದ್ದ ಶ್ರೀ ಕಾಶೀಮಠ ಸಂಸ್ಥಾನಾಧೀಶ ಶ್ರೀಮತ್‌ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರ ದಿಗ್ವಿಜಯ ಮಹೋತ್ಸವ ಶನಿವಾರ ಸಂಪನ್ನಗೊಂಡಿತು.

ದೇಶದ ವಿವಿಧೆಡೆಯ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸಿದ್ದರು.

ಕೇರಳದ ಗಜಪಡೆ ಮೆರವಣಿಗೆಯ ವಿಶೇಷ ಆಕರ್ಷಣೆಯಾಗಿತ್ತು. ನೆತ್ತಿಪಟ್ಟೆಂ, ಕೊಂಡಮಾಟೆ ಎನ್ನುವ ಕೇರಳದ ಸಾಂಪ್ರದಾಯಿಕ ಶೈಲಿಯ ವಸ್ತ್ರಾಭರಣಗಳನ್ನು ಧರಿಸಿದ್ದ ಆನೆಯ ಮೇಲೆ ಮಾವುತರ ಕೇರಳದ ಬಣ್ಣಬಣ್ಣದ ಕೊಡೆ ಗಳನ್ನು ಹಿಡಿದು ವಿಶೇಷ ಪ್ರದರ್ಶನ ನೀಡಿದರು. ಉಳಿದಂತೆ ಅಶ್ವಪಡೆ, ವಿಶೇಷ ಸ್ಯಾಕೊÕàಫೋನ್‌ ತಂಡ, ಪಂಚವಾದ್ಯ, ಕೇರಳ ಚೆಂಡೆ, ಆಕರ್ಷಕ ನಾಸಿಕ್‌ ಬ್ಯಾಂಡ್‌ ತಂಡ, ತಾಲೀಮು, ಹುಲಿವೇಷ ತಂಡಗಳು, ವಿವಿಧ ಚಿತ್ರಣಗಳ 20ಕ್ಕೂ ಆಧಿಕ ಸ್ತಬ್ಧಚಿತ್ರಗಳು ಸೇರಿದಂತೆ ಸಾಂಸ್ಕೃತಿಕ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ದೇವಸ್ಥಾನದಿಂದ ಆರಂಭಗೊಂಡ ಮೆರವಣಿಗೆ, ಶ್ರೀ ಮಹಾಮ್ಮಾಯ ದೇವಸ್ಥಾನ ರಸ್ತೆ, ಗದ್ದೆಕೇರಿ, ಮಂಜೇಶ್ವರ ಗೋವಿಂದ ಪೈ ವೃತ್ತ, ಅಮ್ಮೆಂಬಳ ಸುಬ್ಬರಾವ್‌ ಪೈ ರಸ್ತೆ, ಡೊಂಗರಕೇರಿ, ನ್ಯೂಚಿತ್ರ ಜಂಕ್ಷನ್‌, ಬಸವನಗುಡಿ ರಸ್ತೆ, ಚಮ್ಮಾರಗಲ್ಲಿ, ಕೆಳರಥಬೀದಿ, ರಥಬೀದಿಯಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಬಳಿ ಸಮಾಪನಗೊಂಡಿತು. ಹಾದಿಯನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು. ಪಂಜಿನ ಬೆಳಕು ಕೂಡ ಮೆರವಣಿಗೆಗೆ ಮೆರುಗು ನೀಡಿತು.

ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ, ಕಿರಣ್‌ ಪೈ, ಸತೀಶ್‌ ಪ್ರಭು, ಗಣೇಶ್‌ ಕಾಮತ್‌, ಜಗನ್ನಾಥ ಕಾಮತ್‌, ಚಾತುರ್ಮಾಸ ಸಮಿತಿ ಅಧ್ಯಕ್ಷ ಮುಂಡ್ಕೂರು ರಾಮದಾಸ್‌ ಕಾಮತ್‌, ಪದ್ಮನಾಭ ಪೈ, ಸಿ.ಎಲ್‌. ಶೆಣೈ, ಜಯರಾಜ್‌ ಪೈ, ಪ್ರಶಾಂತ್‌ ರಾವ್‌, ಡಾ| ಉಮಾನಂದ ಮಲ್ಯ, ನಾಮದೇವ್‌ ಮಲ್ಯ, ಸುರೇಶ್‌ ವಿ. ಕಾಮತ್‌, ಗಣಪತಿ ಪೈ, ಗುರುದತ್‌ ಕಾಮತ್‌, ಬಿ.ಆರ್‌. ಭಟ್‌, ಮಾರೂರ್‌ ಶಶಿಧರ್‌ ಪೈ, ಶಾಸಕ ಡಿ. ವೇದವ್ಯಾಸ ಕಾಮತ್‌, ಕೊಚ್ಚಿನ್‌ ತಿರುಮಲ ದೇವಸ್ಥಾನದ ಜಗನ್ನಾಥ ಶೆಣೈ, ಜಿಎಸ್‌ಬಿ ಸೇವಾ ಮಂಡಲದ ಆರ್‌.ಜಿ. ಭಟ್‌, ರಘುವೀರ್‌ ಭಂಡಾರ್ಕರ್‌, ದಿನೇಶ್‌ ಕಾಮತ್‌ ಕೋಟೇಶ್ವರ ಮೊದಲಾದವರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.