Mangaluru: ಸಂಚಾರ ನಿಯಮ ಉಲ್ಲಂಫಿಸಿದರೆ ಡಿಎಲ್‌ ಅಮಾನತು!


Team Udayavani, Sep 15, 2024, 7:30 AM IST

Mangaluru: ಸಂಚಾರ ನಿಯಮ ಉಲ್ಲಂಫಿಸಿದರೆ ಡಿಎಲ್‌ ಅಮಾನತು!

ಮಂಗಳೂರು: ಇನ್ನು ಮುಂದೆ  ಸಂಚಾರ ನಿಯಮ ಉಲ್ಲಂಘಿಸುವ ಮೊದಲು ವಾಹನ ಚಾಲಕರು ಸಾಕಷ್ಟು ಚಿಂತಿಸಬೇಕಾಗಿದೆ. ಸಿಕ್ಕಿಬಿದ್ದರೆ ದಂಡ ಪಾವತಿಸಿ ಸುಮ್ಮನಾಗಬಹುದು ಎಂದು ಭಾವಿಸಿದ್ದರೆ ಆಪಾಯ ಖಚಿತ. ಯಾಕೆಂದರೆ ಪೊಲೀಸರು  ಇಂಥವರ ಚಾಲನಾ ಪರವಾನಿಗೆಯನ್ನು ಅಮಾನತು ಮಾಡುವ ಕ್ರಮಕ್ಕೆ ಮುಂದಾಗಿದ್ದಾರೆ!

ಸಂಚಾರ ನಿಯಮ ಉಲ್ಲಂಘನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು “ಡಿಎಲ್‌ ಅಮಾನತು’  ಅಸ್ತ್ರವನ್ನು ಹೆಚ್ಚಾಗಿ ಪ್ರಯೋಗಿಸಲು ಮುಂದಾಗಿದ್ದಾರೆ.  ದ.ಕ. ಮಾತ್ರವಲ್ಲದೆ ಉಡುಪಿ ಜಿಲ್ಲೆಯ ಪೊಲೀಸರು ಕೂಡ “ಡಿಎಲ್‌ ಅಮಾನತು’ಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಒಂದು ವರ್ಷದಲ್ಲಿ ಸಾವಿರಕ್ಕೂ ಅಧಿಕ ಡಿಎಲ್‌ಗ‌ಳನ್ನು ಅಮಾನತು ಮಾಡಲಾಗಿದೆ.

ಯಾವ ಪ್ರಕರಣಗಳಲ್ಲಿ ಅಮಾನತು?:

ಯಾವುದೇ ರೀತಿಯ ವಾಹನ ಸಂಚಾರ ನಿಯಮ ಉಲ್ಲಂಘನೆಯಾದರೂ ಡಿಎಲ್‌ ಅಮಾನತಿಗೆ ಪೊಲೀಸರು ಪ್ರಾದೇಶಿಕ ಸಾರಿಗೆ ಆಯುಕ್ತರಿಗೆ ಶಿಫಾರಸು ಮಾಡಬಹುದಾಗಿದೆ. ದ.ಕ. ಜಿಲ್ಲಾ ಪೊಲೀಸ್‌, ಮಂಗಳೂರು ಪೊಲೀಸ್‌ ಕಮಿಷನರೆಟ್‌ ಹಾಗೂ ಉಡುಪಿ ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ಹೆಚ್ಚಾಗಿ ಮದ್ಯ ಸೇವಿಸಿ ವಾಹನ ಚಾಲನೆ, ಅಪಘಾತದಿಂದ ಸಾವು ಸಂಭವಿಸುವಂಥ ಗಂಭೀರ ಪ್ರಕರಣಗಳು, ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ, ಏಕಮುಖೀ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವುದು, ಪದೇಪದೆ ಸಂಚಾರ ನಿಯಮ ಉಲ್ಲಂ ಸುವುದು ಮುಂತಾದ ಪ್ರಕರಣಗಳಲ್ಲಿ ಡಿಎಲ್‌ ಅಮಾನತು ಮಾಡಲಾಗುತ್ತಿದೆ.

ಅಮಾನತು ಅವಧಿ :

ಅಮಾನತು ಅವಧಿ ಪ್ರಕರಣದಿಂದ ಪ್ರಕರಣಕ್ಕೆ ಭಿನ್ನವಾಗಿದೆ. ಕನಿಷ್ಠ 1ರಿಂದ 6 ತಿಂಗಳ ಅವಧಿ ಇರುತ್ತದೆ. ಸಾವು ಸಂಭವಿಸುವಂಥ ಪ್ರಕರಣಗಳಲ್ಲಿ 6 ತಿಂಗಳವರೆಗೂ ಡಿಎಲ್‌ ಅಮಾನತು ಮಾಡಲಾಗುತ್ತಿದೆ. ಪೊಲೀಸರು ನೀಡುವ ಶಿಫಾರಸಿನ ಬಳಿಕ ಆರ್‌ಟಿಒ ಅಧಿಕಾರಿಗಳು ನೋಟಿಸ್‌ ಪ್ರಕ್ರಿಯೆ ನಡೆಸಿ ಅಮಾನತುಗೊಳಿಸುತ್ತಾರೆ.

ಎಲ್ಲಿ, ಎಷ್ಟು?

ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ 2023ರಲ್ಲಿ 1,400 ಮತ್ತು 2024ರ ಆಗಸ್ಟ್‌ ವರೆಗೆ 900 ಡಿಎಲ್‌ಗ‌ಳ ಅಮಾನತಿಗೆ ಪೊಲೀಸರು ಆರ್‌ಟಿಒಗೆ ಶಿಫಾರಸು ಮಾಡಿದ್ದಾರೆ. ಇದರಲ್ಲಿ 1,200 ಮಂದಿ ದ್ವಿಚಕ್ರ ವಾಹನ ಸವಾರರು. ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ 2023ರಲ್ಲಿ 285 ಹಾಗೂ 2024ರ ಆಗಸ್ಟ್‌ ವರೆಗೆ 197 ಚಾಲನಾ ಪರವಾನಿಗೆಗಳ ರದ್ದತಿಗೆ ಆರ್‌ಟಿಒಗೆ ಶಿಫಾರಸು ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ  2023ರಲ್ಲಿ ಪೊಲೀಸರು 188 ಡಿಎಲ್‌ಗ‌ಳ ಅಮಾನತಿಗೆ ಶಿಫಾರಸು ಮಾಡಿದ್ದು, ಅದರಲ್ಲಿ ಎಲ್ಲವೂ ಅಮಾನತಾಗಿದೆ. 2024ರ ಜೂನ್‌ ವರೆಗೆ 92 ಶಿಫಾರಸು ಮಾಡಿದ್ದು, ಈ ಪೈಕಿ  89 ಅಮಾನತಾಗಿದೆ.  ಮಂಗಳೂರು ಆರ್‌ಟಿಒ ವ್ಯಾಪ್ತಿಯಲ್ಲಿ 2021-22ನೇ ಸಾಲಿನಲ್ಲಿ 456 ಡಿಎಲ್‌ಗ‌ಳು, 2022-23ನೇ ಸಾಲಿನಲ್ಲಿ 225 ಡಿಎಲ್‌ಗ‌ಳು, 2023-24ರಲ್ಲಿ 90 ಸಹಿತ ಒಟ್ಟು 771 ಡ್ರೈವಿಂಗ್‌ ಲೈಸನ್ಸ್‌ ಅಮಾನತು ಮಾಡಲಾಗಿದೆ. ಮದ್ಯ ಸೇವಿಸಿ ವಾಹನ ಚಲಾಯಿಸಿದ 62 ಮಂದಿಯ ಡ್ರೈವಿಂಗ್‌ ಲೈಸನ್ಸ್‌ ರದ್ದು ಮಾಡಲಾಗಿದೆ. ಶಿಫಾರಸು ಆಗಿರುವ ವರದಿಗಳಲ್ಲಿ ಇನ್ನೂ 1,150 ಪರವಾನಿಗೆಗಳ ಅಮಾನತು ಪ್ರಕ್ರಿಯೆ ಜಾರಿಯಲ್ಲಿದೆ. ಪುತ್ತೂರು ಆರ್‌ಟಿಒ ವ್ಯಾಪ್ತಿಯಲ್ಲಿ 2023-24ರಲ್ಲಿ 127, ಈ ಸಾಲಿನಲ್ಲಿ ಆಗಸ್ಟ್‌ ವರೆಗೆ 50 ಡಿಎಲ್‌ಗ‌ಳನ್ನು ಅಮಾನತು ಮಾಡಲಾಗಿದ್ದು, ಪೊಲೀಸರಿಂದ ಶಿಫಾರಸು ಆಗಿರುವ ಡಿಎಲ್‌ಗ‌ಳ ಪೈಕಿ ಇನ್ನೂ ಸುಮಾರು 110ರಷ್ಟು ಅಮಾನತು ಬಾಕಿ ಇದೆ. ಬಂಟ್ವಾಳದಲ್ಲಿ 2023-24ರಲ್ಲಿ 125 ಹಾಗೂ 24-25ನೇ ಸಾಲಿನಲ್ಲಿ ಆಗಸ್ಟ್‌ ವರೆಗೆ 53 ಲೈಸನ್ಸ್‌ ಅಮಾನತುಗೊಳಿಸಲಾಗಿದೆ.

ಉಡುಪಿಯಲ್ಲಿ ಅತ್ಯಧಿಕ :

ಕಳೆದ ಸಾಲಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಡಿಎಲ್‌ ಅಮಾನತು ಮಾಡಲಾಗಿದೆ. ಅಪಘಾತ ಸಂದರ್ಭ ಮಾತ್ರವಲ್ಲದೆ ಸಂಚಾರ ನಿಯಮ ಪದೇಪದೆ ಉಲ್ಲಂಘನೆ, ಉದ್ದೇಶಪೂರ್ವಕವಾಗಿ ಉಲ್ಲಂಘನೆ ಮೊದಲಾದ ಪ್ರಕರಣಗಳಲ್ಲೂ ಡಿಎಲ್‌ ಅಮಾನತು ಮಾಡಲು ಆರ್‌ಟಿಒಗೆ ಶಿಫಾರಸು ಮಾಡುತ್ತಿದ್ದೇವೆ. ಡಿಎಲ್‌ ಮಾತ್ರವಲ್ಲದೆ, 2023ರಲ್ಲಿ 4 ಹಾಗೂ 2024ರ ಜೂನ್‌ ವರೆಗೆ 8 ಆರ್‌ಸಿಗಳನ್ನು ಕೂಡ ಅಮಾನತು ಮಾಡಲಾಗಿದೆ.– ಡಾ| ಅರುಣ್‌ ಕೆ., ಎಸ್‌ಪಿ, ಉಡುಪಿ  

ಹಲವು ಕಡೆಗಳಿಂದ ಶಿಫಾರಸು:

ಉಡುಪಿ ಜಿಲ್ಲೆಯ ಪೊಲೀಸರು ಮಾತ್ರವಲ್ಲದೆ, ಉಡುಪಿ ಜಿಲ್ಲೆಯಲ್ಲಿ ನೋಂದಾಯಿತ ವಾಹನಗಳು ಬೇರೆ ಜಿಲ್ಲೆಗಳಿಗೆ ಹೋಗಿ ಅಲ್ಲಿ ವಾಹನ ಸಂಚಾರ ನಿಯಮ ಉಲ್ಲಂಘನೆಯಾದ ಸಂದರ್ಭಗಳಲ್ಲಿ ಅಲ್ಲಿನ ಪೊಲೀಸರು ಕೂಡ ಉಡುಪಿ ಆರ್‌ಟಿಒಗೆ ಡಿಎಲ್‌ ಅಮಾನತಿಗೆ ಶಿಫಾರಸು ಮಾಡುತ್ತಿದ್ದಾರೆ. ಆರ್‌ಟಿಒ ಕೂಡ ಸ್ವಯಂ ಪ್ರಕರಣ ದಾಖಲಿಸಿ ಡಿಎಲ್‌ ಅಮಾನತು ಮಾಡಬಹುದಾಗಿದೆ.-ಎಲ್‌.ಪಿ.ನಾಯಕ್‌  ಆರ್‌ಟಿಒ, ಉಡುಪಿ

ಡಿಎಲ್‌ ಅಮಾನತಿಗೆ ಆದ್ಯತೆ

ವಾಹನ ಸಂಚಾರ ನಿಯಮ ಉಲ್ಲಂಘನೆಗೆ ಕೇವಲ ದಂಡ ವಸೂಲಿ, ಪ್ರಕರಣ ದಾಖಲು ಮಾತ್ರವಲ್ಲದೆ ಡಿಎಲ್‌ ಅಮಾನತನ್ನು ಕೂಡ ಹೆಚ್ಚೆಚ್ಚು ಮಾಡಲಾಗುತ್ತಿದೆ. ಸದ್ಯ ದ.ಕ. ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ, ಅಪಘಾತದಿಂದ ಮೃತಪಟ್ಟ ಪ್ರಕರಣಗಳ ಸಂದರ್ಭ(106 ಬಿಎನ್‌ಎಸ್‌) ಮೊದಲ ಬಾರಿಗೆ ಡಿಎಲ್‌ ಅಮಾನತು ಮಾಡುತ್ತಿದ್ದೇವೆ. ಅತಿವೇಗ, ನಿರ್ಲಕ್ಷ್ಯದ ಚಾಲನೆ ಮೊದಲಾದ ಇತರ ಸಂಚಾರ ನಿಯಮಗಳ ಉಲ್ಲಂಘನೆ ಪುನರಾವರ್ತನೆಯಾದರೆ ಡಿಎಲ್‌  ಅಮಾನತು ಮಾಡುತ್ತಿದ್ದೇವೆ. - ಯತೀಶ್‌ ಎನ್‌.  ಎಸ್‌ಪಿ, ದ.ಕ. ಜಿಲ್ಲೆ  

– ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

adike

Bhutan ಅಡಿಕೆ ಆಮದು ನಮ್ಮ ಬೆಳೆಗಾರರ ಮೇಲೆ ಪರಿಣಾಮ ಬೀರದು: ಕಿಶೋರ್ ಕುಮಾರ್ ಕೊಡ್ಗಿ

Chikkamagaluru: Dress code enforced at Horanadu Annapoorneshwari temple

Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.