ವೈದ್ಯರ ದಿನಾಚರಣೆ: ‘ಕ್ಷೇಮ’ದಲ್ಲಿ ವೈದ್ಯರಿಗೆ ಸಮ್ಮಾನ
Team Udayavani, Jul 3, 2017, 3:00 AM IST
ಉಳ್ಳಾಲ: ನಿಟ್ಟೆ ವಿಶ್ವವಿದ್ಯಾನಿಲಯದ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ (ಕ್ಷೇಮ)ಯ ಕೆ.ಎಸ್. ಹೆಗ್ಡೆ ಆಸ್ಪತ್ರೆ ಆಶ್ರಯದಲ್ಲಿ ಭಾರತ ರತ್ನ ಡಾ| ಬಿ.ಸಿ.ರಾಯ್ ಜನ್ಮ ದಿನಾಚರಣೆಯ ಅಂಗವಾಗಿ ಕ್ಷೇಮ ಸೆಮಿನಾರ್ ಹಾಲ್ನಲ್ಲಿ ಶನಿವಾರ ಏರ್ಪಡಿಸಲಾಗಿದ್ದ ‘ವೈದ್ಯರ ದಿನಾಚರಣೆ’ಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವ ಖ್ಯಾತ ವೈದ್ಯರಾದ ಡಾ| ಎಂ.ಪಿ. ಶೆಟ್ಟಿ ಸಿದ್ಧಾಪುರ, ಡಾ| ಬಿ. ವಸಂತ ಬಾಳಿಗಾ ಬಂಟ್ವಾಳ, ಡಾ| ಹರಿದಾಸ್ ವೆರ್ ಕೋಟ್ ನೀಲೇಶ್ವರ ಅವರನ್ನು ಸಮ್ಮಾನಿಸಲಾಯಿತು.
ನಿಟ್ಟೆ ವಿ.ವಿ. ಸಹ ಕುಲಾಧಿಪತಿ ಡಾ| ಶಾಂತಾರಾಮ ಶೆಟ್ಟಿ ಸಮ್ಮಾನ ನೆರವೇರಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ವೈದ್ಯರು ಪ್ರಾಮಾಣಿಕ ಸೇವೆ ಸಲ್ಲಿಸಿದಾಗ ಅವರನ್ನು ದೇವರ ಸ್ಥಾನದಲ್ಲಿ ಇಟ್ಟು ಗೌರವಿಸುತ್ತಾರೆ. ಅವರ ಕ್ಲಿನಿಕ್ಗಳ ಮುಂದೆ ರೋಗಿಗಳು ಸರತಿ ಸಾಲಿನಲ್ಲಿ ನಿಂತರೆ ವೈದ್ಯರು ರೋಗಿಗಳಿಗೆ ನೀಡುತ್ತಿರುವ ಪ್ರಾಮಾಣಿಕ ಸೇವೆ ಹಾಗೂ ರೋಗಿ ವೈದ್ಯರ ಜತೆಗೆ ಇಟ್ಟುಕೊಂಡಿರುವ ಅವಿನಾಭಾವ ಸಂಬಂಧದ ಕುರುಹು ಆಗಿದೆ. ಇಲ್ಲಿ ಸಮ್ಮಾನಿಸಲ್ಪಟ್ಟ ವೈದ್ಯರು ತಮ್ಮ ಸೇವೆಯಿಂದ ಜನಪ್ರಿಯರಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಸೇವೆ ಇವರಿಂದ ಗ್ರಾಮೀಣ ಪ್ರದೇಶದ ಜನರಿಗೆ ಲಭಿಸುವಂತಾಗಲಿ ಎಂದು ಹಾರೈಸಿದರು.
ಸಮ್ಮಾನಿತ ವೈದ್ಯರಾದ ಡಾ| ಎಂ.ಪಿ. ಶೆಟ್ಟಿ ಸಿದ್ಧಾಪುರ, ಡಾ| ಬಿ. ವಸಂತ ಬಾಳಿಗಾ ಬಂಟ್ವಾಳ, ಡಾ| ಹರಿದಾಸ್ ವೆರ್ ಕೋಟ್ ನೀಲೇಶ್ವರ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ದೇರಳಕಟ್ಟೆಯ ಎ.ಬಿ. ಶೆಟ್ಟಿ ಸ್ಮಾರಕ ದಂತ ವೈದ್ಯಕೀಯ ಕಾಲೇಜಿನ ಡೀನ್ ಹಾಗೂ ಪ್ರಾಂಶುಪಾಲ ಡಾ| ಕೃಷ್ಣ ನಾಯಕ್, ವಿಶ್ರಾಂತ ಡೀನ್ ಡಾ| ಶ್ರೀಧರ್ ಶೆಟ್ಟಿ ಉಪಸ್ಥಿತರಿದ್ದರು. ಕ್ಷೇಮ ಡೀನ್ ಪ್ರೊ| ಡಾ| ಸತೀಶ್ ಕುಮಾರ್ ಭಂಡಾರಿ ಸ್ವಾಗತಿಸಿದರು. ಡಾ| ವಿಕ್ರಮ್ ಶೆಟ್ಟಿ, ಡಾ| ರಾಜೀವ್, ಡಾ| ತನ್ಮಯ ಭಟ್ ಸಮ್ಮಾನಿತರ ವಿವರ ನೀಡಿದರು. ಕ್ಷೇಮ ವೈದ್ಯಕೀಯ ಅಧೀಕ್ಷಕ ಡಾ| ಶಿವಕುಮಾರ್ ಹಿರೇಮಠ ವಂದಿಸಿದರು. ಡಾ| ಸಿದ್ಧಾರ್ಥ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Thumbe: ಅಗೆದಲ್ಲಿ ಕಡೆಗೂ ಡಾಮರು
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.