ಕ್ಯಾನ್ಸರ್‌ಗೆ ಸುಧಾರಿತ ಚಿಕಿತ್ಸೆ ಲಭ್ಯ: ಡಾ| ಭಟ್ನಗರ್‌

ಮಾಹೆ ವಿಶ್ವವಿದ್ಯಾನಿಲಯ: ಜಾಗತಿಕ ಕ್ಯಾನ್ಸರ್‌ ಒಕ್ಕೂಟದ ಸಮ್ಮೇಳನ

Team Udayavani, Jan 8, 2023, 6:33 AM IST

ಕ್ಯಾನ್ಸರ್‌ಗೆ ಸುಧಾರಿತ ಚಿಕಿತ್ಸೆ ಲಭ್ಯ: ಡಾ| ಭಟ್ನಗರ್‌

ಮಣಿಪಾಲ: ಪ್ರತೀ ರೋಗಿಯ ರೋಗದ ಹಿನ್ನೆಲೆ ಮತ್ತು ಜೀನ್‌ ವಿಭಿನ್ನವಾಗಿರುತ್ತದೆ. ಇದನ್ನರಿತು ಚಿಕಿತ್ಸೆ ನೀಡಬೇಕಾಗುತ್ತದೆ. ಕ್ಯಾನ್ಸರ್‌ ಎರಡನೇ ಹಂತಕ್ಕೆ ತಲುಪಿದರೂ ಚಿಕಿತ್ಸೆ ನೀಡಬಹುದಾದ ತಂತ್ರಜ್ಞಾನ ಪ್ರಸ್ತುತ ಅಭಿವೃದ್ಧಿಯಾಗಿದೆ ಎಂದು ಕೇಂದ್ರ ಸರಕಾರದ ನ್ಯಾಶನಲ್‌ ಕ್ಯಾನ್ಸರ್‌ ಸೆಂಟರ್‌ನ ಮುಖ್ಯಸ್ಥೆ ಡಾ| ಸುಷ್ಮಾ ಭಟ್ನಗರ್‌ ಹೇಳಿದರು.

ಮಣಿಪಾಲ ಸಮಗ್ರ ಕ್ಯಾನ್ಸರ್‌ ಕೇರ್‌ ಸೆಂಟರ್‌, ಕಸ್ತೂರ್ಬಾ ವೈದ್ಯಕೀಯ ಆಸ್ಪತ್ರೆ, ಗ್ಲೋಬಲ್‌ ಕ್ಯಾನ್ಸರ್‌ ಒಕ್ಕೂಟದ ಆಶ್ರಯದಲ್ಲಿ ಶನಿವಾರ ವ್ಯಾಲಿ ವ್ಯೂ ಹೊಟೇಲ್‌ನಲ್ಲಿ ಹಮ್ಮಿಕೊಂಡಿದ್ದ 2ನೇ ಅಂತಾರಾಷ್ಟ್ರೀಯ ಗ್ಲೋಬಲ್‌ ಕ್ಯಾನ್ಸರ್‌ ಒಕ್ಕೂಟ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ಕ್ಯಾನ್ಸರ್‌ ಚಿಕಿತ್ಸಾ ವಿಧಾನದಲ್ಲಿ ಸಾಕಷ್ಟು ಸುಧಾರಣೆಗಳಾಗಿವೆ. ಆರಂಭಿಕ ಹಂತ ಮೀರಿ ಹೋದ ಅನಂತರದಲ್ಲಿಯೂ ಚಿಕಿತ್ಸೆ ನೀಡಬಹುದಾದ ತಂತ್ರ ಜ್ಞಾನಗಳು ಅಭಿವೃದ್ಧಿಯಾಗಿವೆ. ಇದೆಲ್ಲವನ್ನು ಸಮರ್ಪಕವಾಗಿ ಬಳಸಿಕೊಂಡು ರೋಗಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ದೊರೆಯುವಂತೆ ಆಗಬೇಕು ಎಂದರು.

ಜಾಗೃತಿ ಕಾರ್ಯ ಯುಎಸ್‌ಎ ಕೆನ್‌ಟೂಕೀ ವಿಶ್ವ ವಿದ್ಯಾನಿಲಯದ ಮಾರ್ಕಿ ಕ್ಯಾನ್ಸರ್‌ ಸೆಂಟರ್‌ನ ಟ್ರಾನ್ಸ್‌ಡಿಸಿಪ್ಲಿನರಿ ಕೊಲಾಬ್ರೆಷನ್‌ನ ಸಹ ನಿರ್ದೇಶಕ ಡಾ| ವಿವೇಕ್‌ ಎಂ. ರಂಗ್ನೇಕರ್‌ ಮಾತನಾಡಿ, ಗ್ಲೋಬಲ್‌ ಕ್ಯಾನ್ಸರ್‌ ಒಕ್ಕೂಟವು ಕ್ಯಾನ್ಸರ್‌ ಕುರಿತಾಗಿ ಶಿಕ್ಷಣ, ಸಂಶೋಧನೆ ಹಾಗೂ ಸಮುದಾಯಗಳಲ್ಲಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದೆ. ಮಹೆ ವಿ.ವಿ. ಸಹಿತವಾಗಿ ಜಾಗತಿಕ ಮಟ್ಟದಲ್ಲಿ ಕೆಲವು ವಿ.ವಿ.ಗಳು ಇದರಲ್ಲಿವೆ. ಕ್ಯಾನ್ಸರ್‌ಗೆ ಚಿಕಿತ್ಸೆ ನೀಡುವುದು ಮಾತ್ರವಲ್ಲ. ಅಡ್ಡಪರಿಣಾಮಗಳು ಆಗದಂತೆ ಜಾಗ್ರತೆ ವಹಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.
ಮಾಹೆ ಹೆಲ್ತ್‌ಸೈನ್ಸ್‌ ವಿಭಾಗದ ಸಹ ಕುಲಪತಿ ಡಾ| ಶರತ್‌ ಕುಮಾರ್‌ ರಾವ್‌ ಮಾತನಾಡಿ, ಮಾಹೆ ಮತ್ತು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಕ್ಯಾನ್ಸರ್‌ ಚಿಕಿತ್ಸೆ ಹಾಗೂ ಅರಿವು ನಿಟ್ಟಿನಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳುತ್ತಿದೆ ಎಂದು ವಿವರಿಸಿದರು.

ಆಂಕಾಲಜಿ ವಿಭಾಗದ ಮುಖ್ಯಸ್ಥ ಹಾಗೂ ಸಮ್ಮೇಳನದ ಅಧ್ಯಕ್ಷ ಡಾ| ಕಾರ್ತಿಕ್‌ ಎಸ್‌. ಉಡುಪ, ವೈದ್ಯಕೀಯ ಕ್ಯಾನ್ಸರ್‌ ವಿಭಾಗದ ಸಹ ಪ್ರಾಧ್ಯಾಪಕ ಡಾ| ಅನಂತ ಪೈ ಉಪಸ್ಥಿತರಿದ್ದರು.
ಕೆಎಂಸಿ ಡೀನ್‌ ಡಾ| ಪದ್ಮರಾಜ್‌ ಹೆಗ್ಡೆ ಸ್ವಾಗತಿಸಿದರು. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ ವಂದಿಸಿದರು. ಡಾ| ಕೃತಿಕಾ ನಿರೂಪಿಸಿದರು.

ಸಾವಿನ ಭೀತಿ ಅನಗತ್ಯ: ಡಾ| ಬಲ್ಲಾಳ್‌
ಅಧ್ಯಕ್ಷತೆ ವಹಿಸಿದ್ದ ಮಾಹೆ ವಿ.ವಿ.ಯ ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಮಾತನಾಡಿ, ಕ್ಯಾನ್ಸರ್‌ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾಹೆ ವಿ.ವಿ. ಹಾಗೂ ಕಸ್ತೂರ್ಬಾ ಆಸ್ಪತ್ರೆ ಸಾಕಷ್ಟು ಕೆಲಸ ಮಾಡುತ್ತಿದೆ. ಗ್ರಾಮೀಣ ಭಾಗದಲ್ಲಿ ಕ್ಯಾನ್ಸರ್‌ ಬಗ್ಗೆ ಹೆಚ್ಚೆಚ್ಚು ಅರಿವು ಮೂಡಿಸುವ ಕಾರ್ಯ ಆಗಬೇಕಿದೆ. ಕ್ಯಾನ್ಸರ್‌ ಬಂತು ಎಂದರೆ ಸಾವು ಬಂತು ಎಂಬ ಕಲ್ಪನೆ ಸರಿಯಲ್ಲ. ಚಿಕಿತ್ಸೆ ನೀಡುವ ಅನೇಕ ಸುಧಾರಿತ ತಂತ್ರಜ್ಞಾನಗಳು ಅಭಿವೃದ್ಧಿಯಾಗಿವೆ. ಮಾಹೆ ವಿ.ವಿ. ಪ್ರತೀ ವರ್ಷ ಕ್ಯಾನ್ಸರ್‌ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮ್ಯಾರಥಾನ್‌
ಕೂಡ ನಡೆಸಿಕೊಂಡು ಬರುತ್ತಿದೆ ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.