ಚರಂಡಿ ಸ್ಲ್ಯಾಬ್ ಅವೈಜ್ಞಾನಿಕ ಜೋಡಣೆ: ಪರಿಶೀಲನೆ 


Team Udayavani, Apr 24, 2018, 11:15 AM IST

24-April-6.jpg

ಸುಳ್ಯ : ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಸುಳ್ಯ ನಗರದಲ್ಲಿ ಚರಂಡಿ ಸ್ಲ್ಯಾಬ್ ಗಳು ಸಮರ್ಪಕವಾಗಿ ಅಳವಡಿಕೆ
ಆಗದಿರುವ ಕುರಿತ ದೂರಿನ ಹಿನ್ನೆಲೆಯಲ್ಲಿ ಕೆಆರ್‌ಡಿಸಿಎಲ್‌ ಪ್ರಭಾರ ಮುಖ್ಯ ಎಂಜಿನಿಯರ್‌ ನಂಜುಂಡಪ್ಪ ಹಾಗೂ ಇತರ ಅಧಿಕಾರಿಗಳು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯ ಹೆದ್ದಾರಿಗಳಲ್ಲಿ ಚರಂಡಿ ಕಾಮಗಾರಿ ಅವೈಜ್ಞಾನಿಕವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಡಿ.ಎಂ. ಶಾರೀಖ್‌ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮುಖ್ಯ ರಸ್ತೆ ಬದಿಗಳಲ್ಲಿನ ಚರಂಡಿಯ ಸ್ಲ್ಯಾಬ್ ಗಳ ಪರಿಶೀಲನೆ ನಡೆಯಿತು.

ಸರಿಪಡಿಸಲು ತಾಕೀತು
ಪೈಚಾರ್‌ನಿಂದ ಗಾಂಧಿ ನಗರದ ತನಕ ಪರಿಶೀಲನೆ ನಡೆಸಿದರು. ಸ್ಲ್ಯಾಬ್  ಅವ್ಯವಸ್ಥೆಯನ್ನು ತತ್‌ಕ್ಷಣ ಸರಿಪಡಿಸಬೇಕು. ಮುಂದಿನ ಮಳೆಗಾಲದ ಒಳಗೆ ಕಾಮಗಾರಿ ವ್ಯವಸ್ಥಿತವಾಗಿ ಪೂರ್ಣಗೊಳ್ಳಬೇಕು ಎಂದು ಅವರು ಗುತ್ತಿಗೆದಾರರಿಗೆ ತಾಕೀತು ಮಾಡಿದರು. ಈ ಬಗ್ಗೆ ನಿಗಾ ಇಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಾಂಧಿನಗರದ ಅರಣ್ಯ ಇಲಾಖೆ ಕಚೇರಿ ಬಳಿ ಒಂದು ಬದಿಯಲ್ಲಿ ಮಾತ್ರ ಚರಂಡಿ ನಿರ್ಮಿಸಲಾಗಿದೆ. ಇದರಿಂದ ಮಳೆಗಾಲದಲ್ಲಿ ನೀರು ರಸ್ತೆಯಲ್ಲಿಯೇ ಹರಿದು ಪಾದಚಾರಿಗಳಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಇದನ್ನು ತತ್‌ಕ್ಷಣ ಸರಿಪಡಿಸುವಂತೆ ಸ್ಥಳೀಯ ನಿವಾಸಿ ಅಬ್ದುಲ್ಲ ಗಾಂಧಿನಗರ ಅವರು ಎಂಜಿನಿಯರ್‌ ಗಮನಕ್ಕೆ ತಂದರು. 

ಆರಂಭದಲ್ಲಿ ಕೆಆರ್‌ಡಿಸಿಎಲ್‌ ವತಿ ಯಿಂದ ಚರಂಡಿ ನಿರ್ಮಾಣ ನಡೆಯುತ್ತಿದ್ದ ಸಂದರ್ಭ ಕಾಮಗಾರಿ ಗುಣ ಮಟ್ಟದಿಂದ ಕೂಡಿತ್ತು. ಆಂದ್ರಪ್ರದೇಶದ ಕಂಪೆನಿಗೆ ಸಬ್‌ ಗುತ್ತಿಗೆ ನೀಡಿದ ಬಳಿಕ ಕಾಮಗಾರಿ ಅವೈಜ್ಞಾನಿಕವಾಗಿ ಕೂಡಿದೆ ಎಂದು ಸಾರ್ವಜನಿಕರು ದೂರಿದರು.

ರಾಜ್ಯ ಹೆದ್ದಾರಿಯ ಕಲ್ಲುಗುಂಡಿ ಭಾಗದಲ್ಲಿ ರಸ್ತೆಯಲ್ಲಿ ನಿರ್ಮಿಸಲಾದ ಹಂಪ್‌ಗ್ಳು ಅವೈಜ್ಞಾನಿಕ ಸ್ಥಿತಿಯಲ್ಲಿರುವ ಬಗ್ಗೆ ಉತ್ತರಿಸಿದ ಕೆಎಂಸಿ ಎಂಜಿನಿಯರ್‌ ಸುನೀಲ್‌, ಸುಳ್ಯ ಪೊಲೀಸ್‌ ಠಾಣೆಯ ಕೋರಿಕೆ ಮೇರೆಗೆ ಹಂಪ್‌ ನಿರ್ಮಿಸಲಾಗಿತ್ತು. ಅಲ್ಲಿ ಅಪಘಾತ ಸಂಭವಿಸಿದ ಕಾರಣದಿಂದ ಹಂಪ್‌ಗೆ ಬಣ್ಣ ಬಳಿಯಲಾಗಿದೆ ಎಂದು ಮಾಹಿತಿ ನೀಡಿದರು. ಈಗಿರುವ ಹಂಪ್‌ ಎತ್ತರ 6 ಇಂಚು ಇದ್ದಲ್ಲಿ, ಅದನ್ನು 3 ಇಂಚಿಗೆ ಇಳಿಸಬೇಕು. ರಾಜ್ಯ ಹೆದ್ದಾರಿಗಳಲ್ಲಿ ಹಂಪ್‌ ನಿರ್ಮಿಸುವ ಮೊದಲು ನಮ್ಮ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು. ಕೆಆರ್‌ಡಿಸಿಎಲ್‌ ಎಕ್ಸಕ್ಯೂಟಿವ್‌ ಎಂಜಿನಿಯರ್‌ ಲಕ್ಷ್ಮೀಶ ಮೈಸೂರು, ದೂರುದಾರ ಡಿ.ಎಂ. ಶಾರೀಕ್‌, ಸಂಶುದ್ದೀನ್‌ ಮೊದಲಾದವರು ಉಪಸ್ಥಿತರಿದ್ದರು.

ಸುದಿನ ವರದಿ ಫಲಶ್ರುತಿ
ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಹಾಗೂ ಚರಂಡಿ ಅವ್ಯವಸ್ಥೆ ಕುರಿತು ಕೆಲ ತಿಂಗಳ ಹಿಂದೆ ಉದಯವಾಣಿ ಸುದಿನ ವಿಸ್ತೃತ ವರದಿ ಪ್ರಕಟಿಸಿತ್ತು. ಈ ಬಗ್ಗೆ ಸಾಮಾಜಿಕ ಹೋರಾಟಗಾರ ಡಿ.ಎಂ. ಶಾರೀಕ್‌ ಅವರು ದೂರು ನೀಡಿದ್ದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.