ಸುಳ್ಯದಲ್ಲಿ ನೀರಿಗೆ ಬರ: 15 ದಿನಕ್ಕಷ್ಟೆ ಸಂಗ್ರಹ

ಕಟ್ಟಡ ಕಾಮಗಾರಿ, ಕೃಷಿಗೆ ಕುಡಿಯುವ ನೀರು ಬಳಕೆಗೆ ನಿಷೇಧ!

Team Udayavani, May 19, 2019, 6:00 AM IST

a-8

ಸುಳ್ಯ: ಬೇಸಗೆ ಬಿಸಿಯ ಪರಿಣಾಮ ನಗರದಲ್ಲಿ ನೀರಿನ ಕೊರತೆ ಎದುರಾಗಿದ್ದು, ನ.ಪಂ. ನಳ್ಳಿ ವ್ಯವಸ್ಥೆ ಮೂಲಕ ಪೂರೈಕೆ ಮಾಡುವ ಕುಡಿಯುವ ನೀರನ್ನು ಕಟ್ಟಡ ಕಾಮಗಾರಿ, ಕೃಷಿ ತೋಟಕ್ಕೆ ಬಳಸುವುದನ್ನು ನಗರಾಡಳಿತ ನಿಷೇಧಿಸಿದೆ!

ನಗರಕ್ಕೆ ನೀರು ಸರಬರಾಜಿನ ಮೂಲ ಪಯಸ್ವಿನಿ ನದಿಯಲ್ಲಿ ನೀರಿನ ಹರಿವು ಕಡಿಮೆ ಆಗುತ್ತಿರುವುದರಿಂದ ಮತ್ತು ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಇಳಿಕೆ ಆಗುತ್ತಿರುವ ಕಾರಣ ಮುನ್ನೆಚ್ಚೆರಿಕೆ ಕ್ರಮವಾಗಿ ಈ ಸೂಚನೆ ನೀಡಲಾಗಿದೆ. ಕುಡಿಯುವ ನೀರನ್ನು ಕಟ್ಟಡ ರಚನೆ, ಗಿಡ ಮರಗಳಿಗೆ ಉಪಯೋಗ ಮಾಡುವುದನ್ನು ಸದ್ಯಕ್ಕೆ ನಿಷೇಧಿಸಲಾಗಿದೆ ಎಂದು ನಗರಾಡಳಿತ ಸಾರ್ವಜನಿಕ ಪ್ರಕಟನೆ ಮೂಲಕ ಜನರ ಗಮನಕ್ಕೆ ತರಲು ಮುಂದಾಗಿದೆ.

15 ದಿನದಲ್ಲೇ ಬರಿದು
ನಗರದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಇಲ್ಲದ ಕಾರಣ ವರ್ಷಂಪ್ರತಿ ಬೇಸಗೆ ಕಾಲದಲ್ಲಿ ಕಲ್ಲುಮುಟ್ಲು ಬಳಿ ಪಯಸ್ವಿನಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ತಾತ್ಕಾಲಿಕ ಮರಳು ಕಟ್ಟವೇ ನೀರು ಪೂರೈಕೆಗಿರುವ ಆಧಾರ. ಈ ಬಾರಿ ಮೇ ಮೊದಲ ವಾರದಲ್ಲಿ ಕೊಡಗು ಪರಿಸರದಲ್ಲಿ ಮಳೆ ಉಂಟಾದ ಕಾರಣ ಪಯಸ್ವಿನಿಯಲ್ಲಿ ನೀರಿನ ಹರಿವು ಉಂಟಾಗಿ ಮರಳುಕಟ್ಟ ತುಂಬಿತ್ತು. ಆದರೆ ಅನಂತರ ಮಳೆ ಬಾರದ ಕಾರಣ ಹರಿವಿನ ಪ್ರಮಾಣ ಕ್ಷೀಣಿಸಿದೆ. ಸದ್ಯದ ಸ್ಥಿತಿಯಲ್ಲಿ ಮರಳು ಕಟ್ಟದಲ್ಲಿ 15 ದಿನಗಳಿಗೆ ಪೂರೈಕೆಗೆ ಸಾಕಾಗುವಷ್ಟು ನೀರು ಲಭ್ಯವಿದ್ದು, ಮಳೆ ಬಾರದಿದ್ದರೆ ನೀರಿಗಾಗಿ ತತ್ವಾರ ಪಡುವ ಆತಂಕವಿದೆ. ಮರಳು ಕಟ್ಟದಿಂದ ಕೆಳಭಾಗಕ್ಕೆ ಹೆಚ್ಚುವರಿಯಾಗಿ ಹರಿಯುತ್ತಿದ್ದ ನೀರನ್ನು ಚೀಲವಿಟ್ಟು ತಡೆಯುವ ಕಾಮಗಾರಿ ಪ್ರಾರಂಭಿಸಲಾಗಿದೆ.

ನೀರೆತ್ತಲು ಅಸಾಧ್ಯ!
ಕಲ್ಲುಮಟ್ಲು ಪಂಪ್‌ಹೌಸ್‌ ಬಳಿಯಲ್ಲಿ 50 ಎಚ್ಪಿ1 ಮತ್ತು 45 ಎಚ್ಪಿ 2 ಪಂಪ್‌ ಇರಿಸಲಾದ ನದಿ ಆಳದಲ್ಲಿ ಸಾಕಷ್ಟು ನೀರು ಲಭ್ಯವಿರದಿದ್ದರೆ ನೀರೆತ್ತಲು ಸಾಧ್ಯವಾಗುವುದಿಲ್ಲ. ಕೆಲವು ದಿನಗಳಲ್ಲಿ ಆ ಪರಿಸ್ಥಿತಿ ಬಂದೊದಗುವ ಚಿತ್ರಣ ಕಂಡು ಬಂದಿದೆ. ಇದರಿಂದ ನಗರದ ಮನೆ ಹಾಗೂ ಗೃಹೇತರ ಕಟ್ಟಡಗಳಿಗೆ ನಳ್ಳಿ ಸಂಪರ್ಕದ ಮುಖಾಂತರ ನೀರು ಹರಿಸುವುದು ಅಸಾಧ್ಯವೆನಿಸಲಿದೆ. ನಗರದ ವಿವಿಧ ಭಾಗದಲ್ಲಿರುವ 42 ಕೊಳವೆಬಾವಿ ಪೈಕಿ ಹಲವು ನೀರಿನ ಸಂಕಟ ಎದುರಿಸುತ್ತಿವೆ.

15 ದಿನಕ್ಕಷ್ಟೆ ನೀರಿದೆ
ಪಯಸ್ವಿನಿ ಹರಿವು ಮತ್ತು ಕೊಳವೆಬಾವಿ ನೀರಿನ ಪ್ರಮಾಣ ಇಳಿಕೆ ಆಗಿದೆ. ಈಗಿರುವ ಸಂಗ್ರಹ 15 ದಿನಕ್ಕೆ ಸಾಕಾಗಬಹುದು. ಹೀಗಾಗಿ ಮಿತ ಬಳಕೆ ನಿಟ್ಟಿನಲ್ಲಿ ಕಟ್ಟಡ ಕಾಮಗಾರಿ, ಗಿಡ, ಇತರ ಕೃಷಿ ಕಾರ್ಯಗಳಿಗೆ ಕುಡಿಯುವ ನೀರು ಬಳಸದಂತೆ ಮನವಿ ಮಾಡಲಾಗಿದೆ. ಜತೆಗೆ ನೀರಿನ ಪೂರೈಕೆಯನ್ನು ಎರಡು ದಿನಕ್ಕೊಮ್ಮೆ ನಿಗದಿಪಡಿಸಲಾಗಿದೆ.
– ಶಿವಕುಮಾರ್‌, ಮುಖ್ಯ ಎಂಜಿನಿಯರ್‌, ನ.ಪಂ.ಸುಳ್ಯ

ಟಾಪ್ ನ್ಯೂಸ್

Kaup: ದಂಡತೀರ್ಥ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ಪ್ರಯಾಣಿಕರು ಪಾರು

Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

BC-Road

Audio controversy: ಬಿ.ಸಿ.ರೋಡ್‌: ಉದ್ವಿಗ್ನಗೊಂಡು ತಿಳಿಯಾದ ಪರಿಸ್ಥಿತಿ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kaup: ದಂಡತೀರ್ಥ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ಪ್ರಯಾಣಿಕರು ಪಾರು

Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.