ಧೂಳು ಸಮಸ್ಯೆ: ನಿಧಾನಗತಿ ಕಾಮಗಾರಿ ಆರೋಪ

ಬಂಟ್ವಾಳ-ಸಿದ್ದಕಟ್ಟೆ ರಸ್ತೆ ಅಭಿವೃದ್ಧಿ ಕಾಮಗಾರಿ

Team Udayavani, Dec 17, 2019, 5:07 AM IST

1412PKT1

ಪುಂಜಾಲಕಟ್ಟೆ: ಬಂಟ್ವಾಳ- ಸಿದ್ದಕಟ್ಟೆ- ಮೂಡುಬಿದಿರೆ ರಸ್ತೆಯಲ್ಲಿ ಬಂಟ್ವಾಳದಿಂದ ಸೊರ್ನಾಡು ವರೆಗೆ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ನಿಧಾನ ಗತಿಯಿಂದಾಗಿ ಸಾರ್ವಜನಿಕರು ಹಲವಾರು ಸಮಸ್ಯೆ ಗಳನ್ನು ಎದುರಿಸುವಂತಾಗಿದೆ.

ಸಿಆರ್‌ಎಫ್‌ ನಿಧಿಯಿಂದ 5 ಕೋ. ರೂ. ವೆಚ್ಚದಲ್ಲಿ ಈ ರಸ್ತೆಯ ಅಭಿವೃದ್ಧಿ ಕಾಮಗಾರಿ ಕಳೆದ ಎರಡು ತಿಂಗಳುಗಳಿಂದ ನಡೆಯುತ್ತಿದ್ದು, ಹಿಂದಿನ ರಸ್ತೆಯನ್ನು ವಿಸ್ತರಣೆಗೊಳಿಸಲಾಗುತ್ತಿದೆ. ರಸ್ತೆ ಇಕ್ಕೆಲಗಳಲ್ಲಿ ಮಣ್ಣು ತೆಗೆದು ಜಲ್ಲಿ ಕಲ್ಲು ಮತ್ತು ಜಲ್ಲಿ ಹುಡಿ ಹಾಕಲಾಗಿದೆ. ಪ್ರಸ್ತುತ ಇದುವೇ ದೊಡ್ಡ ಸಮಸ್ಯೆಯಾಗಿದೆ. ವಿಸ್ತರಣೆಗೆ ಹಾಕಿದ ಜಲ್ಲಿ ಕಲ್ಲು ರಸ್ತೆಯಲ್ಲಿ ಹರಡಿಕೊಂಡಿದೆ. ಜಲ್ಲಿ ಹುಡಿ ಧೂಳಿನಿಂದ ಪರಿಸರ ಮಾಲಿನ್ಯ ಉಂಟಾಗಿದೆ.

ಧೂಳಿನಿಂದಾಗಿ ವ್ಯವಹಾರ ನಡೆಸಲು ಕಷ್ಟವಾಗಿದೆ ಎಂದು ವ್ಯಾಪಾರಸ್ಥರು ದೂರಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸುವವರಿಗೆ ಧೂಳಿನಿಂದಾಗಿ ಅನಾರೋಗ್ಯ ಕಟ್ಟಿಟ್ಟ ಬುತ್ತಿಯಾಗಿದೆ ಎಂದು ನಿತ್ಯ ಪ್ರಯಾಣಿಕರು ಅಲವತ್ತು ಕೊಳ್ಳುತ್ತಿದ್ದಾರೆ. ರಸ್ತೆಯಲ್ಲಿ ಹರಡಿದ ಜಲ್ಲಿ ಕಲ್ಲುಗಳಿಂದಾಗಿ ದ್ವಿಚಕ್ರ ವಾಹನ ಸವಾರರು ಅಪಘಾತ ಕ್ಕೀಡಾಗುವ ಸಾಧ್ಯತೆ ಇದೆ. ರಸ್ತೆ ಬದಿ ಜಲ್ಲಿ ಕಲ್ಲು ಹಾಕಿರುವುದರಿಂದ ನಡೆದಾಡಲೂ ಅಸಾಧ್ಯವಾಗಿದೆ. ಮತ್ತೂಂದೆಡೆ ರಸ್ತೆ ಬದಿ ಕೇಬಲ್‌ ಅಳವಡಿಕೆಗೆ ಹೊಂಡ ತೋಡ ಲಾಗಿದೆ. ಇದರಿಂದಾಗಿ ಧೂಳು ಪರಿಸರ ವ್ಯಾಪಿಸಿದೆ.

ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಈ ರಸ್ತೆ ಜಿಲ್ಲಾ ಮುಖ್ಯ ರಸ್ತೆಯಾಗಿದ್ದು, ಕಾರ್ಕಳ-ಬಂಟ್ವಾಳ ರಾ.ಹೆ.ಯಾಗಿ ಮೇಲ್ದರ್ಜೆಗೇರಲಿದೆ ಎಂದು ಘೋಷಣೆ ಯಾಗಿದೆ. ಪ್ರಸ್ತುತ ಸಾವಿರಾರು ವಾಹನಗಳು ಈ ರಸ್ತೆ ಯಲ್ಲಿ ಸಂಚರಿಸುತ್ತಿವೆ. ರಾ.ಹೆ. ಇಲಾಖೆ ಈ ಕಾಮಗಾರಿ ನಡೆಸುತ್ತಿದ್ದು, ಬಳಿಕ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಲಿದೆ.

ರಸ್ತೆಗೆ ಮರು ಡಾಮರು ಕಾಮಗಾರಿ ಆಗು ವುದೆಂದು ಭಾವಿಸಲಾಗಿತ್ತು. ರಸ್ತೆಯ ತಿರುವುಗಳನ್ನು ಸರಿಪಡಿಸುವಂತೆ ಲೊರೆಟ್ಟೋ ಹಿಲ್‌ ರೋಟರಿ ಕ್ಲಬ್‌ ಡಿಸಿಯವರಿಗೆ ಮನವಿ ಮಾಡಿತ್ತು. ಸಾರ್ವಜನಿ ಕರೂ ಆಗ್ರಹಿಸಿದ್ದರು. ಆದರೆ ಕಾಮಗಾರಿ ಆರಂಭಿಸಿ ತಿಂಗಳುಗಳು ಕಳೆದರೂ ರಸ್ತೆಯ ದುರವಸ್ಥೆ ಹೆಚ್ಚಾಗುತ್ತಿದೆ.

ಪ್ರಸ್ತುತ ಈ ಕಾಮಗಾರಿಯಲ್ಲಿ ರಸ್ತೆ ಇದ್ದ ಸ್ಥಿತಿಯಲ್ಲಿ ವಿಸ್ತರಣೆ ಮಾತ್ರ ನಡೆಯುತ್ತಿದೆ. ಭೂಸ್ವಾಧೀನ, ವಿದ್ಯುತ್‌ ಕಂಬ, ಮರಗಳ ತೆರವು ಮೊದಲಾದ ಯಾವುದೇ ಕಾರ್ಯಗಳಿಗೆ ಅವಕಾಶವಿಲ್ಲ ಎಂದು ಸಂಬಂಧಿಸಿದ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಿದ್ದೂ ನಿಧಾನಗತಿಯ ಕಾಮಗಾರಿಯಿಂದಾಗಿ ಈ ದುರವಸ್ಥೆಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಿ ಶೀಘ್ರ ಕಾಮ ಗಾರಿ ನಡೆಯುವಂತೆ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

 ಕ್ರಮ ಅಗತ್ಯ
ರಸ್ತೆಯುದ್ದಕ್ಕೂ ಜಲ್ಲಿ ಕಲ್ಲು ಹರಡಿದ್ದು, ಧೂಳು ತುಂಬಿದ ಹೊಂಡಗಳಿರುವ ಕಾರಣ ನಿತ್ಯ ಪ್ರಯಾಣ ಕಷ್ಟವಾಗಿದೆ. ಸಂಬಂಧಿತ ಇಲಾಖೆ ಈ ಬಗ್ಗೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಬೇಕು
– ರಾಮಚಂದ್ರ ಶೆಟ್ಟಿಗಾರ್‌, ಅಣ್ಣಳಿಕೆ

 ಅನಾರೋಗ್ಯ ಭೀತಿ
ವಾಹನಗಳು ಸಂಚರಿಸುವಾಗ ವಾತಾವರಣ ಧೂಳುಮಯವಾಗಿ ವ್ಯಾಪಾರ ಕಷ್ಟವಾಗಿದೆ. ಪರಿಸರದ ಎಲ್ಲರಿಗೆ ಅನಾರೋಗ್ಯ ಬಾಧಿಸುವಂತಾಗಿದೆ.
– ರಾಮಣ್ಣ, ವ್ಯಾಪಾರಸ್ಥರು, ಬಂಡಸಾಲೆ

 ಶೀಘ್ರ ಕಾಮಗಾರಿಗೆ ಸೂಚನೆ
ಬಂಟ್ವಾಳದಿಂದ ಸೊರ್ನಾಡುವರೆಗೆ 4 ಕಿ.ಮೀ. ರಸ್ತೆಯ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, 5 ಮೀ. ಅಗಲದಿಂದ 7 ಮೀ.ಗೆ ವಿಸ್ತರಿಸಲಾಗುತ್ತಿದೆ. ಶೀಘ್ರ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ.
– ಮುರುಘೇಶ್‌, ಅಭಿಯಂತರು, ರಾಷ್ಟ್ರೀಯ ಹೆದ್ದಾರಿ ಇಲಾಖೆ

– ರತ್ನದೇವ್‌ ಪುಂಜಾಲಕಟ್ಟೆ

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.