Mangalore: ಅರಣ್ಯಾಧಿಕಾರಿ ವಿರುದ್ಧದ ಇಡಿ ಪ್ರಕರಣ ವಜಾ
Team Udayavani, Aug 3, 2024, 8:01 PM IST
ಮಂಗಳೂರು: ಅರಣ್ಯಾಧಿಕಾರಿ ರಾಘವ ಪಾಟಾಳಿ, ಅವರ ಪತ್ನಿ ಮತ್ತು ಪುತ್ರಿಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣವನ್ನು ವಜಾಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ.
2016ರಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ರಾಘವ ಪಾಟಾಳಿ ಅವರ ಮನೆಯ ಮೇಲೆ ಇಡಿ ದಾಳಿ ನಡೆಸಿ ಅವರ ಹಾಗೂ ಅವರ ಪತ್ನಿ, ಪುತ್ರಿಯ ವಿರುದ್ಧ ಪ್ರಕರಣ ದಾಖಲಿಸಿತ್ತು.
ಪ್ರಕರಣದ ವಿಚಾರಣೆ ನಡೆಸಿದ ನಗರದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶೆ ಹಾಗೂ ವಿಶೇಷ ನ್ಯಾಯಾಧೀಶೆ ಸಂಧ್ಯಾ ಅವರು ಪ್ರಕರಣವನ್ನು ಸಾಬೀತುಪಡಿಸವಲ್ಲಿ ಜಾರಿ ನಿರ್ದೇಶನಾಲಯ ವಿಫಲವಾಗಿದೆಯೆಂದು ಪ್ರಕರಣವನ್ನು ವಜಾಗೊಳಿಸಿ ಆರೋಪಿಗಳನ್ನು ಬಿಡುಗಡೆಗೊಳಿಸಿ ಅದೇಶಿಸಿದ್ದಾರೆ ಹಾಗೂ ಜಪ್ತಿಪಡಿಸಿಕೊಂಡ ನಗದು ಮತ್ತು ಮುಟ್ಟುಗೊಲು ಮಾಡಿದ್ದ ಕಟ್ಟಡಗಳನ್ನು ರಾಘವ ಪಾಟಾಳಿ ಹಾಗೂ ಕುಟುಂಬದವರಿಗೆ ಹಸ್ತಾಂತರ ಮಾಡುವಂತೆ ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಿದ್ದಾರೆ.
ರಾಘವ ಪಾಟಾಳಿ ಹಾಗೂ ಇತರರ ಪರವಾಗಿ ಬೆಂಗಳೂರಿನ ನ್ಯಾಯವಾದಿ ಶಂಕರ್ ಪಿ. ಹೆಗ್ಡೆ ಹಾಗೂ ಮಂಗಳೂರಿನ ನ್ಯಾಯಾವಾದಿ ಜಲಜಾಕ್ಷಿ ಎಂ. ಎಂ. ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.