ಮಂಗಳೂರು-ಮೈಸೂರು ಹಳಿ ವಿದ್ಯುದೀಕರಣಕ್ಕೆ ಹಸಿರು ನಿಶಾನೆ

ಕರಾವಳಿ ರೈಲ್ವೇ ವಲಯದಲ್ಲಿ ಹೊಸ ನಿರೀಕ್ಷೆ 2 ಹಂತಗಳಲ್ಲಿ ಕಾಮಗಾರಿ ಸಾಧ್ಯತೆ

Team Udayavani, Apr 27, 2019, 10:36 AM IST

train

ಮಂಗಳೂರು: ರಾಜಧಾನಿಯಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ಬೆಂಗಳೂರು-ಮಂಗಳೂರು ಮಾರ್ಗದ ಮೈಸೂರು- ಹಾಸನ- ಮಂಗಳೂರು ಮಾರ್ಗ ವಿದ್ಯುದೀಕರಣ ಯೋಜನೆ ಎರಡು ಹಂತಗಳಲ್ಲಿ ಇದು ಶೀಘ್ರ ಕಾರ್ಯರೂಪಕ್ಕೆ ಬರುವ ನಿರೀಕ್ಷೆ ಇದೆ.

ರೈಲ್ವೇ ಇಲಾಖೆಯ ಅಧೀನದಲ್ಲಿ ರುವ ಅಲಹಾಬಾದ್‌ನ ಸೆಂಟ್ರಲ್‌ ಆರ್ಗನೈಸೇಶನ್‌ ಫಾರ್‌ ರೈಲ್ವೇ ಎಲೆಕ್ಟ್ರಿಫಿಕೇಶನ್‌ ವಿಭಾಗವು ಇದನ್ನು ನಿರ್ವಹಿಸಲಿದ್ದು, ಸದ್ಯ ಸರ್ವೆ ನಡೆಸಿ ಪ್ರಾರಂಭಿಕ ಸಿದ್ಧತೆ ಕೈಗೊಳ್ಳುತ್ತಿದೆ.
316 ಕೋ.ರೂ. ಮೀಸಲು ರೈಲ್ವೇ ಮೂಲಗಳ ಪ್ರಕಾರ ಕೇಂದ್ರ ಬಜೆಟ್‌ನಲ್ಲಿ ಮೈಸೂರು- ಹಾಸನ-ಮಂಗಳೂರು ಮಾರ್ಗ ವಿದ್ಯುದೀಕರಣಕ್ಕೆ 316 ಕೋ.ರೂ. ಮೀಸಲಿಡಲಾಗಿದೆ. ಮಂಗಳೂರು-ಹಾಸನ ಕಾಮಗಾರಿ ಮೊದಲಿಗೆ ಆರಂಭಿಸಿ, ಬಳಿಕ ಹಾಸನ-ಮೈಸೂರು ಕೆಲಸ ಕೈಗೊಳ್ಳುವ ಸಾಧ್ಯತೆ ಇದೆ. ಜತೆಗೆ ಹಾಸನ -ಅರಸೀಕೆರೆ ಮಾರ್ಗವನ್ನೂ ವಿದ್ಯುದೀಕರಣಕ್ಕೆ ಪರಿಗಣಿಸಲಾಗಿದೆ. ಅಂತಿಮ ತೀರ್ಮಾನ ಪ್ರಕಟಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಪಡೀಲ್‌ನಿಂದ ಬಂಟ್ವಾಳ, ಕಬಕ ಪುತ್ತೂರು, ಎಡಮಂಗಲ, ಸುಬ್ರಹ್ಮಣ್ಯ ಘಾಟಿ, ಸಕಲೇಶಪುರ-ಹಾಸನ ಹಳಿಯು ವಿದ್ಯುದೀಕರಣಗೊಳ್ಳಬೇಕಿದೆ.

ಪರಿಸರ ಸೂಕ್ಷ್ಮ ಪ್ರದೇಶ
ಸುಬ್ರಹ್ಮಣ್ಯ – ಸಕಲೇಶಪುರ ಮಾರ್ಗವು ಪರಿಸರ ಸೂಕ್ಷ್ಮ ಹಿನ್ನೆಲೆಯಲ್ಲಿ ಹಲವು ನಿರ್ಬಂಧಗಳನ್ನು ಹೊಂದಿದೆ. ತಿರುವುಗಳು ಅಧಿಕವಿದ್ದು, ಸುರಕ್ಷಿತ ಯಾನದ ನೆಲೆಯಲ್ಲೂ ಇಲ್ಲಿ ಹೆಚ್ಚು ರೈಲು ಓಡಾಟಕ್ಕೆ ಅವಕಾಶವಿಲ್ಲ. ವೇಗವೂ ನಿಯಂತ್ರಿತ. ಹೀಗಾಗಿ ಇಲ್ಲಿ ಹಳಿ ವಿದ್ಯುದೀಕರಣ ಸವಾಲಿನ ಕಾರ್ಯ. ವಿದ್ಯುದೀಕರಣಗೊಂಡ ಬಳಿಕವೂ ಇಲ್ಲಿ ರೈಲು ಮಿತ ವೇಗದಲ್ಲೇ ಸಂಚರಿಸಬೇಕಿದೆ. ವಿದ್ಯುದೀಕರಣಗೊಂಡರೆ ಡೀಸೆಲ್‌ ಬಳಕೆಯಿಂದಾಗುವ ಪರಿಸರ ಮಾಲಿನ್ಯ ತಪ್ಪುತ್ತದೆ ಮತ್ತು ಖರ್ಚು ಕಡಿಮೆ ಎನ್ನುತ್ತಾರೆ ಪಶ್ಚಿಮ ಕರಾವಳಿ ರೈಲ್ವೇ ಯಾತ್ರಿ ಅಭಿವೃದ್ಧಿ ಸಮಿತಿಯ ತಾಂತ್ರಿಕ ಸಲಹೆಗಾರ ಅನಿಲ್‌ ಹೆಗ್ಡೆ.  ಕೊಂಕಣ ರೈಲ್ವೇಯಲ್ಲಿ ಸುರತ್ಕಲ್‌ ಸಮೀಪದ ತೋಕೂರಿನಿಂದ ಮಹಾರಾಷ್ಟ್ರದ ರೋಹಾವರೆಗಿನ ಒಟ್ಟು 741 ಕಿ.ಮೀ. ಮಾರ್ಗದ ವಿದ್ಯು ದೀಕರಣ ನಡೆಯುತ್ತಿದೆ.

ದಕ್ಷಿಣ ರೈಲ್ವೇ ವತಿಯಿಂದ ಕೇರಳದ ಶೋರ್ನೂರು ಮತ್ತು ಮಂಗಳೂರು ನಡುವಣ 328 ಕಿ.ಮೀ. ಮಾರ್ಗದ ವಿದ್ಯುದೀಕರಣ ಈಗಾಗಲೇ ಮಂಗಳೂರು ಜಂಕ್ಷನ್‌ (ಕಂಕನಾಡಿ)ವರೆಗೆ ಪೂರ್ಣಗೊಂಡಿದ್ದು, ತೋಕೂರು ವರೆಗೆ ಮುಂದುವರಿಯ ಲಿದೆ. ಕರಾವಳಿಯ ಎರಡು ರೈಲ್ವೇ ಸಂಪರ್ಕ ಹಳಿಗಳು ಉನ್ನತಿಗೆ ಏರುತ್ತಿರುವಾಗಲೇ ಮೈಸೂರು-ಹಾಸನ-ಮಂಗಳೂರು ಮಾರ್ಗ ವಿದ್ಯುದೀಕರಣಕ್ಕೆ ನೈಋತ್ಯ ರೈಲ್ವೇ ಮುಂದಡಿ ಇಟ್ಟಿದೆ.

ಬೆಂಗಳೂರಿನಿಂದ ಮೈಸೂರು ವರೆಗೆ ಈಗಾಗಲೇ ವಿದ್ಯುದೀಕರಣಗೊಂಡಿದ್ದು, ಅಲ್ಲಿಂದ ಮಂಗಳೂರು ವರೆಗಿನ ಸುಮಾರು 310 ಕಿ.ಮೀ. ಮಾರ್ಗ ಬಾಕಿಯಿದೆ. ಈ ಪೈಕಿ ಮಂಗಳೂರು-ಹಾಸನ ವಿದ್ಯುದೀಕರಣಕ್ಕೆ ಮೊದಲ ಮಂಜೂರಾತಿ ದೊರಕಿದೆ ಎಂದು ಮೂಲಗಳು ತಿಳಿಸಿವೆ.

ಮಂಗಳೂರು- ಹಾಸನ ಮಂಜೂರು
ಮಂಗಳೂರು-ಹಾಸನ ರೈಲ್ವೇ ವಿದ್ಯುದೀಕರಣ ಯೋಜನೆಗೆ ಮಂಜೂರಾತಿ ದೊರಕಿದೆ. ಅಲಹಾಬಾದ್‌ನ ಸೆಂಟ್ರಲ್‌ ಆರ್ಗನೈಸೇಶನ್‌ ಫಾರ್‌ ರೈಲ್ವೇ ಎಲೆಕ್ಟ್ರಿಫಿಕೇಶನ್‌ ವಿಭಾಗವು ಇದರ ನಿರ್ವಹಿಸಲಿದೆ.
ಅಪರ್ಣಾ ಗರ್ಗ್‌, ರೈಲ್ವೇ ವ್ಯವಸ್ಥಾಪಕರು, ಮೈಸೂರು ವಿಭಾಗ

ದಿನೇಶ್‌ ಇರಾ

ಟಾಪ್ ನ್ಯೂಸ್

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

2

Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

6

Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್‌ ಡಿಕ್ಕಿ: ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.