ಕುಕ್ಕೆ ಪೇಟೆಯಲ್ಲಿ ಕಾಡಾನೆ ವಿಹಾರ!
Team Udayavani, Feb 21, 2020, 1:16 AM IST
ಸುಬ್ರಹ್ಮಣ್ಯ: ಪ್ರಸಿದ್ಧ ಯಾತ್ರಾ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಕಾಡಾನೆಯೊಂದು ಗುರುವಾರ ಬೆಳಗ್ಗೆ ಸಂಚರಿಸಿ ಜನತೆಯಲ್ಲಿ ಆತಂಕವನ್ನುಂಟು ಮಾಡಿತು. ಒಂಟಿ ಸಲಗವು ಗುರುವಾರ ಬೆಳಗ್ಗಿನ ಜಾವ ಕಾಶಿಕಟ್ಟೆ ಗಣಪತಿ ದೇವಸ್ಥಾನ ಸಮೀಪದಿಂದ ಸಂಚರಿಸಿ ಮಯೂರ ವಸತಿಗೃಹದ ಮಾರ್ಗವಾಗಿ ನೂಚಿಲ ಕಡೆಗೆ ರಸ್ತೆಯಲ್ಲೇ ತೆರಳಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ವಾಹನ ಸಂಚಾರವಿರುವಾಗಲೇ ರಾಜ ಗಾಂಭೀರ್ಯದಿಂದ ಆನೆ ನಡೆದಾಡಿದೆ. ಮೊದಲಿಗೆ ಕ್ಷೇತ್ರದ ಆನೆಯಾಗಿರಬಹುದೆಂದು ಭಾವಿಸಿದ ಭಕ್ತರಿಗೆ ಬಳಿಕ ಅದು ಕಾಡಾನೆ ಎಂದು ಅರಿವಾದಾಗ ಭಯಭೀತರಾದರು. ಆನೆ ಪೇಟೆ ಸವಾರಿ ಮಾಡಿದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೆಲವು ವಾರಗಳ ಹಿಂದೆ ಹರಿಹರ ಪಳ್ಳತ್ತಡ್ಕ ಪೇಟೆಯಲ್ಲಿ ಕಾಡಾನೆ ಸಂಚರಿಸಿದ ಬಗ್ಗೆ ಪೇಟೆಯ ಸಿಸಿಟಿವಿಯಲ್ಲಿ ದಾಖಲಾಗಿತ್ತು. ಆದಾದ ಬಳಿಕ ಬೆಳಗ್ಗಿನ ಜಾವ ಸುಬ್ರಹ್ಮಣ್ಯ-ಮಂಜೇಶ್ವರ ರಸ್ತೆಯಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದ ಕಾಲೇಜು ಸಿಬಂದಿಯೋರ್ವರಿಗೆ ಅರಂಪಾಡಿ ಬಳಿ ಆನೆ ರಸ್ತೆ ದಾಟುತ್ತಿರುವುದು ಕಂಡುಬಂದಿತ್ತು. ಇದೀಗ ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲೇ ಕಾಡಾನೆ ಸಂಚರಿಸಿರುವುದು ಆತಂಕಕ್ಕೆಡೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.