![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 3, 2023, 6:20 AM IST
ಕಾಸರಗೋಡು: ಮುಳಿಯಾರಿನಲ್ಲಿ ಆರಂಭಗೊಂಡಿರುವ ಎಂಡೋಸಲ್ಫಾನ್ ಪುನರ್ವಸತಿ ಗ್ರಾಮದ ಪ್ರಥಮ ಹಂತದ ಕಾಮಗಾರಿ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಯೋಜನ ಪ್ರದೇಶಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸಾಮಾಜಿಕ ನ್ಯಾಯ ಮತ್ತು ಉನ್ನತ ಶಿಕ್ಷಣ ಸಚಿವೆ ಡಾ| ಆರ್. ಬಿಂದು ಹೇಳಿದರು.
ಈ ಕೇಂದ್ರದಲ್ಲಿ ಎಲ್ಲ ರೀತಿಯ ಥೆರಫಿ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರಿಗೆ ಬೆಂಬಲ ಸೌಲಭ್ಯಗಳನ್ನು ಒದಗಿಸುವ ಪುನರ್ವಸತಿ ಗ್ರಾಮ ಇಲ್ಲಿ ಬರಲಿದೆ. ಸವಿವರಗಳನ್ನೊಳಗೊಂಡ ಯೋಜನೆ ಸಿದ್ಧಪಡಿಸಿ ಅಗತ್ಯವಿರುವ ನಿಧಿ ಸಂಗ್ರಹಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಅವರು ಹೇಳಿದರು.
ಪ್ರಸ್ತುತ ನಿರ್ಮಾಣ ಹಂತದಲ್ಲಿರುವ ಕಟ್ಟಡದ ನಕ್ಷೆಯನ್ನು ಪರಿಶೀಲಿಸಿದ ಸಚಿವರು ಪುನರ್ವಸತಿ ಗ್ರಾಮ ಯೋಜನೆಯಲ್ಲಿ ಆಗುತ್ತಿರುವ ನಿರ್ಮಾಣಗಳ ಬಗೆಗಿನ ಮಾಹಿತಿಯನ್ನು ಕೇಳಿ ತಿಳಿದರು. ಸಕಾಲದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಿದರು.
ಶಾಸಕ ಸಿ.ಎಚ್. ಕುಂಞಂಬು, ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿ ಶೀಬಾ ಮುಮ್ತಾಜ್, ಕೆ.ಪಿ. ಬೀನಾ, ಎಂ.ಅಬ್ದುಲ್ಲಾ, ಎ. ಮುಹಮ್ಮದ್ ನೌಫಲ್, ಕಂದಾಯ ಅಧಿಕಾರಿಗಳು, ಗುತ್ತಿಗೆದಾರ, ಪ್ರತಿನಿಧಿಗಳು ಜತೆಗಿದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.