ಬೋರ್‌ವೆಲ್‌ ನೀರಿನಲ್ಲಿ ಎಂಡೋ ಅಂಶ


Team Udayavani, Nov 3, 2018, 11:19 AM IST

bore.jpg

ಪುತ್ತೂರು: ಮಿಂಚಿಪದವು ಗೇರು ಪ್ಲಾಂಟೇಷನ್‌ ಕೇರಳದ್ದಾದರೂ ಕರ್ನಾಟಕದ ಗಡಿಗೆ ತಾಗಿಯೇ ಇದೆ. ಇಲ್ಲಿನ ಬಾವಿಯಲ್ಲಿ ದಶಕದ ಹಿಂದೆ ಹೂತಿಡಲಾದ ಎಂಡೋಸಲ್ಫಾನ್‌ ಈಗ ಹಾಲಾಹಲವಾಗಿ ಅಂತರ್ಜಲದ ಜತೆ ಬೆರೆತಿದೆ.

ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಟ್ನೂರು ಗ್ರಾ.ಪಂ.ನ ಕುಮಾರನಾಥ ಎಂಬವರು ವರ್ಷಗಳ ಹಿಂದೆ ಬೋರ್‌ವೆಲ್‌ ಕೊರೆಸಿದ್ದರು. ನೀರನ್ನು ಬಳಸುವ ಮೊದಲು ಪರೀಕ್ಷಿಸಲು ನಿರ್ಧರಿಸಿ ಬೆಂಗಳೂರಿನ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸ್ಯಾಂಪಲ್‌ ರವಾನಿಸಿದರು. ಇಲಾಖೆ ಕಳುಹಿಸಿದ ಪರೀಕ್ಷಾ ವರದಿ ಅವರ ಆತಂಕವನ್ನು ನಿಜ ಮಾಡಿತು. ಬೋರ್‌ವೆಲ್‌ ನೀರಿನಲ್ಲಿ ಆಲ್ಫಾ ಎಂಡೋಸಲ್ಫಾನ್‌ 0.025 ಮೈಕ್ರೊಗ್ರಾಮ್ಸ್‌/ಲೀ. ಹಾಗೂ ಬೇಟಾ ಎಂಡೋಸಲ್ಫಾನ್‌ 0.025 ಮೈಕ್ರೊಗ್ರಾಮ್ಸ್‌/ಲೀ. ನಷ್ಟು ಇದೆ. ಇವುಗಳನ್ನು ಮನುಷ್ಯ ಸ್ವೀಕರಿಸಬಹುದಾದ ಮಿತಿ 0.4 ಮೈಕ್ರೊಗ್ರಾಮ್ಸ್‌/ಲೀ. ಎಂದು ವರದಿ ಹೇಳಿತ್ತು.

ನಿಜವಾದ ಆತಂಕ
ಇಲ್ಲಿನ ಬಾವಿಯಲ್ಲಿ ಎಂಡೋ ಹೂತಿಟ್ಟದ್ದು ಬಹಿರಂಗಗೊಂಡಾಗಲೇ ಅದು ಅಂತರ್ಜಲಕ್ಕೆ ಸೇರುವ ಆತಂಕ ಮೂಡಿತ್ತು. ಈಗ ಬೋರ್‌ವೆಲ್‌ ನೀರಿನಲ್ಲಿ ಎಂಡೋ ಅಂಶ ಇದೆ ಎನ್ನುವುದನ್ನು ಮಂಡಳಿ ದೃಢಪಡಿಸಿದೆ. ಈ ಎಂಡೋ ವಿಷ ಎಲ್ಲಿಂದ ಸೇರಿದೆ ಎನ್ನುವುದರ ಬಗ್ಗೆ ಸಂಬಂಧಪಟ್ಟವರು ಎಚ್ಚರಿಕೆ ಕ್ರಮ ಕೈಗೊಳ್ಳಬೇಕಿತ್ತು. ಹಿಂದೊಮ್ಮೆ ಸಹಾಯಕ ಆಯುಕ್ತರಾಗಿದ್ದ ಡಾ| ರಾಜೇಂದ್ರ ಕೆ.ವಿ. ಅವರ ಗಮನ ಸೆಳೆದಾಗ, ಸ್ಥಳ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ವರದಿ ಕಳುಹಿಸಿದ್ದರು. ಆದರೆ ವರದಿ ಕಡತದಲ್ಲೇ ಬಾಕಿ ಆಗಿದೆ.

ಕಾಸರಗೋಡು ಜಿಲ್ಲಾಧಿಕಾರಿಯವರನ್ನು ಸಂ± ‌ರ್ಕಿಸಿ, ಕೇರಳ ಸರಕಾರದ ಜತೆ ಮಾತುಕತೆ ನಡೆಸುವ ಕೆಲಸವೂ ನಡೆದಿಲ್ಲ. ಸರಕಾರ ಹಾಗೂ ಜಿಲ್ಲಾಡಳಿತದ ಮಟ್ಟದಲ್ಲಿ ಮಾತುಕತೆ ನಡೆಸಿ, ಹೂತಿಟ್ಟ ಎಂಡೋ ವಿಷವನ್ನು ಹೊರ ತೆಗೆಯುವ ಕೆಲಸವಾಗಬೇಕಿತ್ತು. ಎಂಡೋ ವಿಚಾರದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ತಳೆದಿರುವ ದಿವ್ಯ ನಿರ್ಲಕ್ಷ್ಯಕ್ಕೆ ಜನಸಾಮಾನ್ಯರು ಬಲಿಯಾಗುತ್ತಲೇ ಇದ್ದಾರೆ. ಈಗ ಅಂತರ್ಜಲ ಮಲಿನಗೊಂಡಿರುವುದು ದೃಢಪಟ್ಟಿದೆ.

ಆರು ಬಾವಿ
ದಿ ಪ್ಲಾಂಟೇಷನ್‌ ಕಾರ್ಪೊರೇಷನ್‌ ಆಫ್‌ ಕೇರಳದ ಗೇರು ತೋಟ 141.30 ಹೆಕ್ಟೇರ್‌ ಇದೆ. ಇದರಲ್ಲಿರುವ 6 ಬಾವಿಗಳಲ್ಲಿ ಎಂಡೋ ಹೂತಿಡಲಾಗಿದೆ ಎನ್ನಲಾಗು ತ್ತಿದೆ. ಒಂದು ಬಾವಿ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಟ್ನೂರು ಗ್ರಾ.ಪಂ.ಗೆ ತಾಗಿದೆ. ಎಂಡೋ ಹೂತಿಟ್ಟದ್ದು ಬಹಿರಂಗಗೊಳ್ಳುತ್ತಿದ್ದಂತೆ ದೊಡ್ಡ ಸುದ್ದಿ ಯಾಗಿತ್ತು. ಹೂತಿಟ್ಟ ಎಂಡೋ ನಿವಾರಿಸುವ ಅಥವಾ ಪರ್ಯಾಯ ಕ್ರಮ ನಡೆದಿಲ್ಲ. ಬೋರ್‌ವೆಲ್‌ ನೀರಿಗೆ ಎಂಡೋ ಬೆರೆತಿದೆ ಎಂದು ತಿಳಿದ ಮೇಲಾದರೂ ಎಚ್ಚೆತ್ತುಕೊಳ್ಳುವ ಕೆಲಸ ಆಗಬೇಕಿತ್ತು. ಅದೂ ಆಗಿಲ್ಲ.

ಬಹಿರಂಗಗೊಂಡದ್ದು ಹೀಗೆ
ಕೇರಳದ ಗೇರು ನಿಗಮದ ತೋಟದ ಬಾವಿಯಲ್ಲಿ ಎಂಡೋಸಲ್ಫಾನ್‌ ಹೂತಿಡಲಾಗಿದೆ ಎಂದು ಬಹಿರಂಗಪಡಿಸಿದ್ದು ಸ್ವತಃ ಹೂತಿಟ್ಟಾತನೇ. 2013ರ ಅಕ್ಟೋಬರ್‌ನಲ್ಲಿ ನಿಗಮದ ನಿವೃತ್ತ ಕಾರ್ಮಿಕ ಅಚ್ಯುತ ಮಣಿಯಾಣಿ ಈ ವಿಷಯವನ್ನು ಹೊರಗೆಡವಿದರು. 2005ರ ಆಸುಪಾಸಿನಲ್ಲಿ ಎಂಡೋಸಲ್ಫಾನ್‌ ತುಂಬಿದ ಡಬ್ಬಿ, ಬಾಟಲಿಗಳನ್ನು ಈ ಬಾವಿಯೊಳಗೆ ನಿಗಮದ ಅಧಿಕಾರಿಗಳ ಸೂಚನೆಯಂತೆ ಸುರಿದಿದ್ದೇನೆ. ಇದಕ್ಕೆ ಮೊದಲು ಎಂಡೋ ಸಿಂಪರಣೆಗೆ ಬರುತ್ತಿದ್ದ ಹೆಲಿಕಾಪ್ಟರ್‌ಗಳಿಗೆ ತಾನೇ ಎಂಡೋ ತುಂಬಿಸುತ್ತಿದ್ದೆ ಎಂದಿದ್ದರು. ಅವರು ಬಹಿರಂಗಪಡಿಸಲು ಕಾರಣವಾದದ್ದು ಅವರಿಗೂ ಕಾಡಿದ್ದ ಎಂಡೋ ಬಾಧೆ.

ನಿಗದಿತ ಪ್ರಮಾಣದ ಒಳಗೆ ರಾಸಾಯನಿಕದ ಅಂಶ ಇದ್ದರೆ ಸಮಸ್ಯೆ ಇಲ್ಲ. ಆದರೂ ಈ ವಿಷಯದ ಬಗ್ಗೆ ಪರಿಶೀಲಿಸುತ್ತೇನೆ. ವರ್ಷಗಳ ಹಿಂದೆ ಸಹಾಯಕ ಆಯುಕ್ತರು ಕಳುಹಿಸಿದ ವರದಿಯನ್ನು ಗಣನೆಗೆ ತೆಗೆದು ಕೊಳ್ಳುತ್ತೇನೆ.
ಶಶಿಕಾಂತ ಸೆಂಥಿಲ್‌,  ಜಿಲ್ಲಾಧಿಕಾರಿ, ದ.ಕ.

 ಗಣೇಶ್‌ ಎನ್‌. ಕಲ್ಲರ್ಪೆ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bantwala-1

Bantwala: ನವ ದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಪತ್ನಿ ಮೃತ್ಯು, ಪತಿ ಗಂಭೀರ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Belthangady ಅಂಗಮಾರಿ ರೋಗ ಲಕ್ಷಣ: ಪರಿಶೀಲನೆ

Untitled-1

Uppinangady ವಿವಾಹಿತೆ ನಾಪತ್ತೆ: ದೂರು ದಾಖಲು

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Suresh ಬಲ್ನಾಡು ಅವರಿಗೆ ಸಾಂಬಾರ ಕೃಷಿಕ ಪ್ರಶಸ್ತಿ ಪ್ರದಾನ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

Engineer Bantwal ಜಯಂತ್‌ ಬಾಳಿಗ ಅವರಿಗೆ ಪ್ರತಿಷ್ಠಿತ ಮಿಲೇನಿಯಂ ಟೆಕ್ನಾಲಿಜಿ ಪ್ರಶಸ್ತಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.