ದೇವರಕಾನ ಸರಕಾರಿ ಶಾಲೆಯಲ್ಲಿ ಹಸಿರ ಕಾನನ..!


Team Udayavani, Jun 5, 2018, 2:40 AM IST

devarakana.jpg

ವಿಶೇಷ ವರದಿ – ಸುಳ್ಯ: ಕಣ್ಮನ ಸೆಳೆಯುವ ಉದ್ಯಾನವನ. ಸುತ್ತಲೂ ಹಸಿರಿನ ಹೊದಿಕೆ. ಬಿಸಿಯೂಟಕ್ಕೆ ಬೇಕಾದ ಬಗೆ-ಬಗೆಯ ತರಕಾರಿ ತೋಟ, ಆರೋಗ್ಯಕ್ಕೆ ಔಷಧ ಗಿಡಗಳ ಸಾಲು. ಇದು ದೇವರಕಾನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಹಸಿರು ಪರಿಸರದ ಸೊಗಡು ಸೊಂಪಾಗಿ ಹರಡಿದ ಬಗೆಯಿದು. ಐವರ್ನಾಡು ಗ್ರಾಮದಲ್ಲಿರುವ ಈ ವಿದ್ಯಾಸಂಸ್ಥೆಯಲ್ಲಿ 1ರಿಂದ 7ನೇ ತರಗತಿ ತನಕ ಕಲಿಕಾ ತರಗತಿಗಳಿವೆ. ಇಲ್ಲಿನ ವಿದ್ಯಾರ್ಥಿಗಳ ಸಂಖ್ಯೆ ಒಟ್ಟು 50 ಮಿಕ್ಕಿದೆ. ಮೂವರು ಪೂರ್ಣಕಾಲಿಕ, ಓರ್ವ ಗೌರವ ಶಿಕ್ಷಕಿಯಿದ್ದಾರೆ. 1959ರಲ್ಲಿ ಸ್ಥಾಪನೆಗೊಂಡ ಈ ಶಾಲೆ 59ನೇ ವರ್ಷದ ಹೊಸ್ತಿಲಿನಲ್ಲಿದೆ. ಎಡಮಲೆ, ಆಲಿಕಲ್ಲು, ಬಿರ್ಮುಕಜೆ, ಮಿತ್ತಮೂಲೆ, ಸಾರಕರೆ ಮೊದಲಾದ ಭಾಗಗಳಿಂದ ಇಲ್ಲಿಗೆ ಮಕ್ಕಳು ಆಗಮಿಸುತ್ತಾರೆ.

ವಠಾರದೊಳಗೆ ಏನಿದೆ?
ಊರವರ ಸಹಕಾರದಿಂದ 75ರಿಂದ 1 ಲಕ್ಷ ರೂ. ವೆಚ್ಚದಲ್ಲಿ ಸುಂದರವಾದ ಉದ್ಯಾನವನ ನಿರ್ಮಿಸಲಾಗಿದೆ. ವಿದ್ಯಾ ದೇವತೆಯ ಮೂರ್ತಿ, ವೃತ್ತಾಕಾರದ ನೀರಿನ ಕೊಳ, ಸುತ್ತಲೂ ಬಗೆ-ಬಗೆಯ ಕಲ್ಲಿನ ಜೋಡಣೆ, ಕೊಳದಲ್ಲಿ ಬಿಳಿ-ಕೆಂಪು ಬಣ್ಣದ ತಾವರೆಗಳು, ಹೂವಿನ ಗಿಡಗಳು ಗಮನ ಸೆಳೆಯುತ್ತಿವೆೆ. ಇದು ಶಾಲಾ ಮುಂಭಾಗದ ಸೌಂದರ್ಯಕ್ಕೂ ಮುಕುಟದಂತಿದೆ.


ಅಕ್ಷರ ಕೈ ತೋಟ ಪ್ರಶಸ್ತಿ

ಸಮೃದ್ಧಭರಿತ ತರಕಾರಿ ತೋಟ ಇಲ್ಲಿನ ವಿಶೇಷ. ಈ ಬಾರಿ ಶಾಲಾ ಆರಂಭದ ಲ್ಲಿಯೇ ತರಕಾರಿ ಸಿಗುತ್ತಿದೆ. ಹಾಗಾಗಿ ವರ್ಷವಿಡಿ ಇಲ್ಲಿ ಬಿಸಿಯೂಟಕ್ಕೆ ಸಾವಯವ ತರಕಾರಿ ರುಚಿ ತಪ್ಪುವುದಿಲ್ಲ. ಪ್ರತಿ ವರ್ಷ ಊರವರ, ಶಿಕ್ಷಕರ, ಮಕ್ಕಳ, SDMC ಸಮಿತಿಯ ಸಹಭಾಗಿತ್ವದಲ್ಲಿ ತರಕಾರಿ ತೋಟ ನಿರ್ಮಿಸಲಾಗುತ್ತದೆ. ಕಳೆದೆರಡು ವರ್ಷ ತಾಲೂಕು ಮಟ್ಟದ ಅಕ್ಷರ ಕೈ ತೋಟ ಪ್ರಶಸ್ತಿ ದೊರೆತಿದೆ.

ಈ ವರ್ಷವೂ ತರಕಾರಿ ತೋಟ ರಚನೆಗೆ ಯೋಜನೆ ರೂಪಿಸಿದ್ದು, ಮೂರನೇ ವರ್ಷವೂ ಮಾದರಿ ತೋಟ ನಿರ್ಮಿಸುವ ಯೋಚನೆ ಇಲ್ಲಿನದು. ಅದಕ್ಕಾಗಿ ಶ್ರಮದಾನ ಪೂರ್ಣಗೊಂಡಿದೆ. ಇನ್ನೊಂದು ಭಾಗದಲ್ಲಿ ಹತ್ತಾರು ಬಗೆಯ ಔಷಧ ಸಸಿಗಳಿವೆ. ಪ್ರಕೃತ್ತಿ ಮಡಿಲಿನಲ್ಲಿ ಬೆಳೆದು ಆರೋಗ್ಯಕ್ಕೆ ಸಹಕಾರಿ ಆಗುವ ತಿಮರೆ, ಕಿರತಾಕಡ್ಡಿ, ಕಹಿಬೇವು, ಅಮೃತಬಳ್ಳಿ ಸಹಿತ ಹತ್ತಾರು ಔಷಧ ಬಳ್ಳಿಗಳು ಇಲ್ಲಿವೆ. ಕಹಿ ಹುಳಿ ಮೊದಲಾದ ಗಿಡಗಳು ಫಸಲು ನೀಡುತ್ತಿದೆ.

ಅನುಕೂಲ
ಊರವರ ಸಹಕಾರದಿಂದ ಇಲ್ಲಿ ತರಕಾರಿ ತೋಟ ನಿರ್ಮಾಣ ಮಾಡಲಾಗುತ್ತದೆ. ಎರಡು ಬಾರಿ ತಾಲೂಕು ಮಟ್ಟದ ಪ್ರಶಸ್ತಿ ಸಿಕ್ಕಿದೆ. ಈ ಬಾರಿಯು ತೋಟ ನಿರ್ಮಾಣಕ್ಕೆ ಪೂರ್ವಭಾವಿಯಾಗಿ ಶ್ರಮದಾನ ನಡೆದಿದೆ. ಹಸಿರು ಸಂರಕ್ಷಣೆಯೊಂದಿಗೆ ಆರೋಗ್ಯಪೂರ್ಣ ಪರಿಸರ ನಿರ್ಮಾಣಕ್ಕೆ ಇದು ಸಹಕಾರಿ. 
-ಎ. ಲೀಲಾವತಿ ಮುಖ್ಯ ಶಿಕ್ಷಕಿ

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.