ಕಡಬದ ಪಾಲೋಳಿಯಲ್ಲಿ ಶ್ರಮದಾನದಮೂಲಕ ತಾತ್ಕಾಲಿಕ ಸಂಪರ್ಕಸೇತುವೆ ನಿರ್ಮಾಣ


Team Udayavani, Feb 9, 2018, 11:26 AM IST

9-Feb-7.jpg

ಕಡಬ : ಕುಮಾರಧಾರಾ ನದಿಗೆ ಕಡಬ ಗ್ರಾಮದ ಪಿಜಕ್ಕಳದ ಪಾಲೋಳಿಯಲ್ಲಿ ಊರವರೇ ಸೇರಿಕೊಂಡು ಶ್ರಮದಾನದ ಮೂಲಕ ಬೇಸಗೆಯಲ್ಲಿ ಮಾತ್ರ ಉಪಯೋಗಕ್ಕೆ ಬರುವ ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಿ, ಸುಳ್ಯ ತಾಲೂಕಿನ ಎಡಮಂಗಲಕ್ಕೆ ಸಂಪರ್ಕ ಕಲ್ಪಿಸುವ ವ್ಯವಸ್ಥೆಯನ್ನು ಈ ಬಾರಿಯೂ ಮಾಡಿಕೊಂಡಿದ್ದಾರೆ.

ಪಾಲೋಳಿಯಲ್ಲಿ ಸರ್ವಋತು ಸೇತುವೆ ನಿರ್ಮಾಣವಾಗಬೇಕೆಂಬ ಬೇಡಿಕೆ ಇಂದು ನಿನ್ನೆಯದಲ್ಲ. ಎರಡೂವರೆ ದಶಕಗಳಿಂದ ಈ ಬಗ್ಗೆ ಪರಿಸರದ ಜನರು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸುತ್ತಲೇ ಬಂದಿದ್ದರೂ ಸೇತುವೆ ನಿರ್ಮಾಣದ ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಗತಿ ಕಂಡು ಬಾರದ ಹಿನ್ನೆಲೆಯಲ್ಲಿ ಊರವರೇ ಸೇರಿಕೊಂಡು ಶ್ರಮದಾನದ ಮೂಲಕ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡುತ್ತಿದ್ದಾರೆ.

15 ಕಿ.ಮೀ. ಸುತ್ತು ಬಳಸಬೇಕು
ಪಾಲೋಳಿ ಮತ್ತು ಎಡಮಂಗಲ ಪೇಟೆಯ ಮಧ್ಯೆ ನಡುವೆ ಇರುವುದು ಕೇವಲ 2 ಕಿ.ಮೀ. ಗಳ ಅಂತರ. ಆದರೆ ಮಧ್ಯೆ ಕುಮಾರಧಾರಾ ಹೊಳೆ ಹರಿಯುತ್ತಿರುವುದರಿಂದ ಪಾಲೋಳಿ – ಪಿಜಕ್ಕಳದ ಜನರು ಎಡಮಂಗಲವನ್ನು ತಲುಪಬೇಕಾದರೆ ಕಡಬ – ಕೋಡಿಂಬಾಳ – ಪುಳಿಕುಕ್ಕು ಮೂಲಕ ಸುಮಾರು 15 ಕಿ.ಮೀ.ಗಳಷ್ಟು ದೂರ ಸುತ್ತುಬಳಸಿ ಪ್ರಯಾಣಿಸಬೇಕಿದೆ. ಅದೂ ಸಮರ್ಪಕ ಬಸ್‌ ಸೌಕರ್ಯ ಇಲ್ಲದಿರುವುದರಿಂದ ಸುಲಭದ ದಾರಿಯಲ್ಲ. ಈ ಸೇತುವೆಯ ಮೂಲಕ ಬೇಸಗೆಯಲ್ಲಿ ಕಡಬದಿಂದ ಕೇವಲ 5 ಕಿ.ಮೀ. ಸಂಚರಿಸಿ ಎಡಮಂಗಲ ತಲುಪಬಹುದು. ಇಲ್ಲಿ ಶಾಶ್ವತ ಸೇತುವೆ ನಿರ್ಮಾಣವಾದರೆ ಪುತ್ತೂರನ್ನು ಕಾಣಿಯೂರು ಮಾರ್ಗವಾಗಿ ನೇರವಾಗಿ ತಲುಪಲು ಸಾಧ್ಯ.

ಎಡಮಂಗಲ-ನಿಂತಿಕಲ್‌ ಮೂಲಕ ಬೆಳ್ಳಾರೆ, ಸುಳ್ಯವನ್ನು ತಲುಪುವುದಕ್ಕೂ ಇದು ಹತ್ತಿರದ ದಾರಿ. ಕಡಬದಿಂದ ಹೊಳೆ ಬದಿಯ ತನಕ ಉತ್ತಮ ರಸ್ತೆ ಸಂಪರ್ಕವಿದೆ. ಹೊಳೆಯ ಇನ್ನೊಂದು ಬದಿಯಲ್ಲಿ ಪರ್ಲ ಎಂಬಲ್ಲಿವರೆಗೆ ಎಡಮಂಗಲದಿಂದ ರಸ್ತೆ ಸಂಪರ್ಕವಿದೆ. ಸೇತುವೆ ನಿರ್ಮಾಣದ ಬೇಡಿಕೆ ಗ್ರಾಮಸಭೆ, ಜನಸ್ಪಂದನ ಸಭೆಗಳಲ್ಲಿಯೂ ಪ್ರತಿಧ್ವನಿಸಿದೆ. ಗ್ರಾಮಸಭೆಯಲ್ಲಿ ಹಲವು ಸಲ ಈ ಕುರಿತು ನಿರ್ಣಯವನ್ನೂ ಕೈಗೊಳ್ಳಲಾಗಿದೆ.

ಖರ್ಚು ಜಾಸ್ತಿ
ನಾಲ್ಕು ವರ್ಷಗಳ ಹಿಂದೆ ತಾತ್ಕಾಲಿಕ ಸೇತುವೆ ನಿರ್ಮಾಣಕ್ಕೆ ಸಿಮೆಂಟ್‌ ಪೈಪ್‌, ಕಲ್ಲು, ಲಾರಿ ಬಾಡಿಗೆ ಎಂದು 8 ಲಕ್ಷ ರೂ. ಖರ್ಚಾಗಿತ್ತು. ಇದರಲ್ಲಿ ಮಾನವ ಶ್ರಮದ ಲೆಕ್ಕ ಸೇರಿಲ್ಲ. ಆಗ 3 ಲಕ್ಷ ರೂ. ದೇಣಿಗೆ ಸಂಗ್ರಹವಾಗಿತ್ತು. ಉಳಿದ ಮೊತ್ತವನ್ನು ಸ್ಥಳೀಯ ಮೊತ್ತವನ್ನು ರೋಯ್‌ ಅಬ್ರಹಾಮ್‌ ಎಂಬುವರೇ ಭರಿಸಿದ್ದರು. ಈ ಸಲ ಮಾನವ ಶ್ರಮ ಹೊರತುಪಡಿಸಿ 60 ಸಾವಿರ ರೂ. ಖರ್ಚಾಗಿದೆ. 

ಸೇತುವೆ ಕನಸು ಕಂಡ ಯುವಕರು
ಇಲ್ಲಿ ಬೇಸಗೆಯಲ್ಲಿ ಉಪಯೋಗಿಸಬಹುದಾದ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡುವ ಕಲ್ಪನೆಯನ್ನು ಕಂಡವರು ಸ್ಥಳೀಯ ಕುಮಾರಧಾರಾ ಯುವಕ ಮಂಡಲದ ಸದಸ್ಯರು. ಅದರ ಫಲವಾಗಿ 4 ವರ್ಷಗಳ ಹಿಂದೆ ದಾನಿಗಳ ಆರ್ಥಿಕ ನೆರವಿನಿಂದ ಎಡಮಂಗಲ ಹಾಗೂ ಪಿಜಕ್ಕಳ ಪರಿಸರದ ಜನರ ಶ್ರಮದಾನದ ಫಲವಾಗಿ ಸುಮಾರು 120 ಮೀ. ಉದ್ದದ 10 ಮೀ.ಅಗಲದ ಸೇತುವೆ ನಿರ್ಮಿಸಲಾಗಿತ್ತು. ಆದರೆ ಮಳೆಗಾಲದಲ್ಲಿ ನೀರಿನ ಹೊಡೆತಕ್ಕೆ ಸಿಲುಕಿ ಕೊಚ್ಚಿಹೋಗುವ ಸೇತುವೆಯನ್ನು ಪ್ರತೀ ಬೇಸಗೆಯಲ್ಲಿ ಊರವರು ಪುನರ್ನಿರ್ಮಾಣ ಮಾಡುತ್ತಲೇ ಬಂದಿದ್ದಾರೆ. ಈ ಬಾರಿ ಎಡಮಂಗಲ ಭಾಗದ ಜನರ ಮುತುವರ್ಜಿಯಿಂದಾಗಿ ಸೇತುವೆ ಮರು ನಿರ್ಮಾಣಗೊಂಡಿದೆ.

ಶಾಶ್ವತ ಸೇತುವೆಯಾಗಲಿ
ಇಲ್ಲಿ ಸರಕಾರದಿಂದ ಸರ್ವಋತು ಸೇತುವೆ ನಿರ್ಮಾಣ ಆಗಬೇಕೆಂಬ ಬಯಕೆ ನಮ್ಮೆಲ್ಲರದಾಗಿದೆ. ಇಲ್ಲಿ ಶಾಶ್ವತ ಸೇತುವೆ ನಿರ್ಮಾಣವಾದರೆ ಈ ಭಾಗದ ಸಾರ್ವಜನಿಕರಿಗೆ ಬಹಳ ದೊಡ್ಡ ಪ್ರಯೋಜನ ಇದೆ. ಕಳೆದ 4 ವರ್ಷದಿಂದ ಊರವರೇ ಸೇರಿಕೊಂಡು ತಾತ್ಕಾಲಿಕ ಸೇತುವೆ ನಿರ್ಮಿಸುತ್ತಿದ್ದೇವೆ. ಈ ಬಾರಿ ಎಡಮಂಗಲ ಭಾಗದ ಜನರು ಹೆಚ್ಚಿನ ಶ್ರಮ ವಹಿಸಿದ್ದಾರೆ. ಸರಕಾರ ಜನರಿಗೆ ಆಗುತ್ತಿರುವ ತೊಂದರೆಯನ್ನು ಗಮನಿಸಿ ಶೀಘ್ರ ಶಾಶ್ವತ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆನ್ನುವುದು ನಮ್ಮೆಲ್ಲರ ಬೇಡಿಕೆ.
– ಕೇಂಜೂರು ಜೋಸ್‌ ಎ.ಜೆ., ಎಡಮಂಗಲ

ನಾಗರಾಜ್‌ ಎನ್‌.ಕೆ

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.