ಹಿಂದೂ ಸಮಾಜ ಎಂದೂ ಅಶಾಂತಿಯ ಬೆಂಬಲಿಸದು


Team Udayavani, Jul 24, 2017, 8:20 AM IST

hindu.jpg

ಮಂಗಳೂರು: ಮುಖ್ಯಮಂತ್ರಿ ತನ್ನ ಕುರ್ಚಿಯನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ಆದರೆ ಹಿಂದೂ ಸಮಾಜ ಎಂದಿಗೂ ಅಶಾಂತಿಯನ್ನು ಬೆಂಬಲಿಸುವುದಿಲ್ಲ. ಇದನ್ನು ವಿರೋಧಿಸಿದ ಹಿಂದೂ ಮುಖಂಡರ ಮೇಲೆ ಪ್ರಕರಣ ದಾಖಲಿಸುವ ಕಾರ್ಯವನ್ನು  ರಾಜ್ಯ ಸರಕಾರ ಮಾಡುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್‌ನ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್‌ ಅವರು ಆರೋಪಿಸಿದರು.

ರಾಜ್ಯ ಸರಕಾರದ ಹಿಂದೂ ದಮನ ನೀತಿಯನ್ನು ಖಂಡಿಸಿ ಮಂಗಳೂರು ವಿಶ್ವ ಹಿಂದೂ ಪರಿಷತ್‌-ಬಜರಂಗ ದಳ ರವಿವಾರ ನಗರದ ಸಂಘನಿಕೇತನದಲ್ಲಿ ಆಯೋಜಿಸಿದ್ದ ಖಂಡನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೋ ಕಳ್ಳತನ, ಮಹಿಳೆಯರ ಮೇಲೆ ಕಿರುಕುಳದಂತಹ ಪ್ರಕರಣಗಳನ್ನು ಹಿಂದೂ ಸಂಘಟನೆಗಳು ಎಂದಿಗೂ ಸಹಿಸುವುದಿಲ್ಲ. ಇಂದು ಕೆಲವು ಮತಾಂಧ ಶಕ್ತಿಗಳು ಹಿಂದೂ ಸಮಾಜ ವನ್ನು ಒಡೆಯುವ ಪ್ರಯತ್ನ ಮಾಡು ತ್ತಿವೆ. ಆದರೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸುಳ್ಳು ಸುದ್ದಿಗೆ ಕಿವಿಕೊಡದೆ ಶಾಂತಿ ನೆಲೆಸಲು ಶ್ರಮಿಸಬೇಕಿದೆ ಎಂದರು.

ಆರ್‌ಎಸ್‌ಎಸ್‌ ಮಂಗಳೂರು ವಿಭಾಗ ಕಾರ್ಯವಾಹ ನಾ. ಸೀತಾರಾಮ ಮಾತನಾಡಿ, ಹಿಂದೂ ಸಮಾಜ ವನ್ನು ಒಡೆಯುವ ಪ್ರಯತ್ನ ಗಳು ನಡೆದರೂ ಅದಕ್ಕೆ ಏನೂ ಆಗುವುದಿಲ್ಲ. ಇದೊಂದು ಚಿರಂ ಜೀವಿ ಸಮಾಜವಾಗಿದೆ. ಪ್ರಸ್ತುತ ರಾಜ್ಯ ಸರಕಾರ ಹಿಂದೂಗಳ ಅಂತಃಶಕ್ತಿಯನ್ನು ಪರೀಕ್ಷೆ ಮಾಡುವ ಕಾರ್ಯ ಮಾಡುತ್ತಿದೆ. ಮತೀಯ ಶಕ್ತಿಗಳನ್ನು ಹದ್ದುಬಸ್ತಿನಲ್ಲಿಡಲು ಹಿಂದೂ ಸಮಾಜ ಒಗ್ಗಟ್ಟಾಗಬೇಕಿದೆ. ನಮ್ಮ ಬದ್ಧತೆ, ನಿಷ್ಠೆಯ ಆತುರತೆಯೇ ಕೆಲವೊಂದು ಅವಘಡಗಳಿಗೆ ಕಾರಣವಾಗುತ್ತಿದ್ದು, ಈ ಕುರಿತು ಎಚ್ಚರಿಕೆಯ ಅಗತ್ಯವಿದೆ ಎಂದು ಹೇಳಿದರು.

ಬಜರಂಗ ದಳ ಪ್ರಾಂತ ಸಹ ಸಂಚಾಲಕ ರಘು ಸಕಲೇಶಪುರ, ವಿಹಿಂಪ ದ.ಕ. ಜಿಲ್ಲಾಧ್ಯಕ್ಷ ಜಗದೀಶ ಶೇಣವ, ಕಾರ್ಯದರ್ಶಿ ಗೋಪಾಲ ಕುತ್ತಾರ್‌, ಬಜರಂಗದಳ ಜಿಲ್ಲಾ ಸಂಚಾಲಕ ಭುಜಂಗ ಕುಲಾಲ್‌ ಉಪಸ್ಥಿತರಿದ್ದರು.

ಪೋಸ್ಟ್‌ಕಾರ್ಡ್‌ ಚಳವಳಿ
ಹಿಂದೂ ದಮನ ನೀತಿಯ ವಿರುದ್ಧ ರಾಜ್ಯಪಾಲರಿಗೆ ಪೋಸ್ಟ್‌ಕಾರ್ಡ್‌ ಚಳವಳಿಗೆ ಚಾಲನೆ ನೀಡಲಾಯಿತು. ಆರಂಭ ದಲ್ಲಿ ಮೃತ ಶರತ್‌ ಮಡಿವಾಳ ಅವರಿಗೆ ಶ್ರದ್ಧಾಂಜಲಿ ಅರ್ಪಿಸ ಲಾಯಿತು. ವಿಭಾಗ ಸಂಯೋಜಕ ಸುನಿಲ್‌ ಕೆ.ಆರ್‌. ಖಂಡನಾ ನಿರ್ಣಯ ವಾಚಿಸಿದರು.

ವಿಶ್ವ ಹಿಂದೂ ಪರಿಷತ್‌ ಪ್ರಾಂತ ಸಹಕಾರ್ಯದರ್ಶಿ ಕೃಷ್ಣಮೂರ್ತಿ ಸ್ವಾಗತಿಸಿದರು. ವಾಸುದೇವ ಗೌಡ ಅವರು ವಂದಿಸಿದರು. ಬಜರಂಗ ದಳ ಜಿಲ್ಲಾ ಸಹ ಕಾರ್ಯ ದರ್ಶಿ ಶಿವಾನಂದ ಮೆಂಡನ್‌ ಕಾರ್ಯ ಕ್ರಮ ನಿರ್ವಹಿಸಿದರು.

ಖಂಡನಾ ನಿರ್ಣಯ
ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ ಮಡಿವಾಳ ಹತ್ಯಾ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಬೇಕು, ಹಿಂದೂ ನಾಯಕರಾದ ಶರಣ್‌ ಪಂಪು ವೆಲ್‌, ಸತ್ಯಜಿತ್‌ ಸುರತ್ಕಲ್‌, ಮುರಳಿಕೃಷ್ಣ ಹಸಂತಡ್ಕ, ಹರೀಶ್‌ ಪೂಂಜ, ಪ್ರದೀಪ್‌ ಪಂಪ್‌ವೆಲ್‌ ಅವರ ವಿರುದ್ಧ ದಾಖಲಾದ ಸುಳ್ಳು ಮೊಕದ್ದಮೆಗಳನ್ನು ಕೂಡಲೇ ಹಿಂಪಡೆಯಬೇಕು. ಹಿಂದೂ ನಾಯಕರ ಮೇಲೆ ಗೂಂಡಾ ಕಾಯ್ದೆಯನ್ನು ಹೇರುವ ಪ್ರಯತ್ನವನ್ನು ತತ್‌ಕ್ಷಣ ಕೈಬಿಡಬೇಕು. ರಾಜ್ಯ ಸರಕಾರ ಹಿಂದೂ ದಮನ ನೀತಿ, ಪೊಲೀಸ್‌ ಇಲಾಖೆಯಿಂದ ನಡೆಯು ತ್ತಿರುವ ತಾರತಮ್ಯ ನೀತಿಯನ್ನು ತತ್‌ಕ್ಷಣ ನಿಲ್ಲಿಸಬೇಕು ಎಂಬ ಖಂಡನಾ ನಿರ್ಣಯ ಕೈಗೊಳ್ಳಲಾಯಿತು.

ಟಾಪ್ ನ್ಯೂಸ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ತ್ರಿಶಾ ಪದವಿ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

Mangaluru: ಹುಲಿ ವೇಷ ಬಣ್ಣಗಾರಿಕೆ ಹಿಂದಿದೆ ಶ್ರದ್ಧೆ, ಭಕ್ತಿ, ವಿಜ್ಞಾನ!

courts-s

Court: ವಾಹನ ಅಪಘಾತ: ಮೃತ ವ್ಯಕ್ತಿಯ ಆಶ್ರಿತರಿಗೆ 1.35 ಕೋ.ರೂ. ಪರಿಹಾರ: ನ್ಯಾಯಾಲಯ ಆದೇಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.