Mangaluru University; ಪಿಯು ಫ‌ಲಿತಾಂಶ ಬಂದರೂ ಪದವಿ ತರಗತಿಗೆ ಕಾಯಲೇಬೇಕು!

ಮಂಗಳೂರು ವಿ.ವಿ.: ನಿಗದಿತ ಅವಧಿಗೆ ಕಾಲೇಜು ಆರಂಭ ಕಷ್ಟ

Team Udayavani, Apr 11, 2023, 7:10 AM IST

ಪಿಯು ಫ‌ಲಿತಾಂಶ ಬಂದರೂ ಪದವಿ ತರಗತಿಗೆ ಕಾಯಲೇಬೇಕು!

ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಇನ್ನು ಕೆಲವೇ ದಿನಗಳಲ್ಲಿ ಪ್ರಕಟಗೊಂಡರೂ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳು ಪದವಿ ತರಗತಿಗಳ ಆರಂಭಕ್ಕೆ ತಿಂಗಳುಗಟ್ಟಲೆ ಕಾಯಲೇಬೇಕು!

ಎಪ್ರಿಲ್‌ ಅಥವಾ ಮೇ ತಿಂಗಳಿನಲ್ಲಿ ದ್ವಿತೀಯ ಪಿಯು ಫಲಿತಾಂಶ ಬಂದು ಜೂನ್‌ನಲ್ಲಿ ಕಾಲೇಜು ಆರಂಭ ಈ ಹಿಂದಿನ ನಿಯಮ. ಆದರೆ ಕೊರೊನಾ ಕಾರಣದಿಂದ ಕಾಲೇಜು ಆರಂಭ ತಿಂಗಳುಗಟ್ಟಲೆ ತಡ ವಾಗಿದ್ದು, ಇದು ಈ ಬಾರಿಯೂ ಮುಂದು ವರಿಯುವ ಎಲ್ಲ ಲಕ್ಷಣಗಳಿವೆ.

2023-24ರ ಶೈಕ್ಷಣಿಕ ವರ್ಷ ಆ. 1ರಿಂದ ಆರಂಭ ಎಂದಿತ್ತು. ಆದರೆ ಇತ್ತೀಚೆಗೆ ಯುಜಿ ಮೌಲ್ಯ ಮಾಪನ ತಡವಾದ್ದರಿಂದ ಹೊಸ ಶೈಕ್ಷಣಿಕ ವರ್ಷವನ್ನು ಆ. 15ಕ್ಕೆ ಮುಂದೂಡಲಾಗಿದೆ. ಸದ್ಯ ತರಗತಿ ಮುಗಿದು ಪರೀಕ್ಷೆ ನಡೆಯಲು ಜೂನ್‌ ವರೆಗೆ ಕಾಯಬೇಕು. ಬಳಿಕ ಮೌಲ್ಯಮಾಪನ. ಅನಂತರ ಕೆಲವು ದಿನ ರಜೆ. ಈ ಮಧ್ಯೆ ಹೊಸದಾಗಿ ಕಾಲೇಜಿಗೆ ಸೇರಿದರೂ ಅವರಿಗೆ ತರಗತಿ ಕೊಠಡಿ ಸಿಗುವುದು ಕಷ್ಟ.

ದಾಖಲಾತಿಗೆ ಹೊಡೆತ!
ಪಿಯು ಫಲಿತಾಂಶ ಬಂದ ತತ್‌ಕ್ಷಣ ಕಾಲೇಜು ಪ್ರವೇಶಾತಿ ಆರಂಭಿಸಲಾಗುತ್ತದೆ. ಆದರೆ ತರಗತಿ ಆರಂಭ ವಿಳಂಬವಾಗಲಿದೆ. ಅಲ್ಲಿಯವರೆಗೆ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತದೆ. ಇದು ಆಗದಿದ್ದರೆ ವಿದ್ಯಾರ್ಥಿಗಳ ಕಾಲೇಜು ದಾಖಲಾತಿಯೇ ಕುಸಿತವಾಗುತ್ತದೆ. 3 4 ತಿಂಗಳು ಕಾಲೇಜು ಇಲ್ಲವಾದ ಕಾರಣದಿಂದ ಮಕ್ಕಳು ಉದ್ಯೋಗಕ್ಕೆ ಸೇರುತ್ತಾರೆ ಅಥವಾ ವೃತ್ತಿ ಸಂಬಂಧಿ ತರಬೇತಿ ಪಡೆಯಲು ನಿರ್ಧರಿಸುತ್ತಾರೆ. ಹೀಗಾಗಿ ಪದವಿ ದಾಖಲಾತಿ ಪ್ರಮಾಣ ಕುಸಿತವಾಗುವ ಅಪಾಯ ಅಧಿಕ ಎನ್ನುತ್ತಾರೆ ಕಾಲೇಜು ಪ್ರಾಂಶುಪಾಲರೊಬ್ಬರು.

ಒಂದೇ ವೇಳಾಪಟ್ಟಿ ಕಷ್ಟ
ರಾಜ್ಯದ ಎಲ್ಲ ವಿ.ವಿ.ಗಳಿಗೂ ಒಂದೇ ಶೈಕ್ಷಣಿಕ ವೇಳಾಪಟ್ಟಿ ಎಂದು ಉನ್ನತ ಶಿಕ್ಷಣ ಇಲಾಖೆ ತಿಳಿಸಿತ್ತು. ಆದರೆ ವಿವಿಧ ವಿ.ವಿ.ಗಳಲ್ಲಿ ಇನ್ನೂ ಫಲಿತಾಂಶ ಪೂರ್ಣ ವಾಗಿ ಬಂದಿಲ್ಲ. ಹೀಗಾಗಿ ಒಂದೇ ಶೈಕ್ಷಣಿಕ ವೇಳಾ ಪಟ್ಟಿ ಅನುಸರಿಸುವುದು ಸದ್ಯಕ್ಕೆ ಕಷ್ಟ ಎನ್ನುವುದು ವಿ.ವಿ. ಮೂಲಗಳ ಅಭಿಪ್ರಾಯ.

ಸ್ವಾಯತ್ತಗಳಲ್ಲಿ ಎಲ್ಲವೂ ಕ್ರಮಬದ್ಧ!
ಮಂಗಳೂರು ವಿ.ವಿ. ವ್ಯಾಪ್ತಿಯ ಸರಕಾರಿ- ಖಾಸಗಿ ಕಾಲೇಜುಗಳಲ್ಲಿ ತರಗತಿ ತಡ ವಾದರೆ ಸ್ವಾಯತ್ತ ಕಾಲೇಜುಗಳಲ್ಲಿ ತರಗತಿ ತಡವಾಗುವ ಸಮಸ್ಯೆ ಇಲ್ಲ. ಅಲ್ಲಿ 6ನೇ ಸೆಮಿಸ್ಟರ್‌ ಕೊನೆಯ ಹಂತದ ಪಠ್ಯ ಸದ್ಯ ನಡೆಯು ತ್ತಿದ್ದು, ಎಪ್ರಿಲ್‌ನಲ್ಲಿ ಪರೀಕ್ಷೆ ಮುಗಿಸಿ ಮೇ ತಿಂಗಳಲ್ಲಿ ಫಲಿತಾಂಶ ಪ್ರಕಟವಾಗುತ್ತದೆ. ಮಂಗಳೂರು ವಿ.ವಿ. ಹೆಸರಿನಲ್ಲಿ ಸರ್ಟಿ ಫಿಕೇಟ್‌ ಕೂಡ ದೊರೆಯುತ್ತದೆ. ಉದ್ಯೋಗಕ್ಕೆ ತೆರಳುವವರಿಗೆ ಇದು ಅನು ಕೂಲ. ಅಂದಹಾಗೆ ಇಲ್ಲಿ ಜೂನ್‌ನಲ್ಲೇ 2023-24ನೇ ಸಾಲಿನ ಶೈಕ್ಷಣಿಕ ವರ್ಷವೂ ಆರಂಭ!

ಪಿಯು ಫಲಿತಾಂಶ ಬಂದ ಕೂಡಲೇ ಕಾಲೇಜು ಪ್ರವೇಶಕ್ಕೆ ದಾಖಲಾತಿ ಆರಂಭಿಸಲು ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಹಿಂದೆಯೂ ಇದರ ಬಗ್ಗೆ ಅವಲೋಕನ ಆಗಿತ್ತು. ಆದರೆ ರಾಜ್ಯಾದ್ಯಂತ ಒಂದೇ ವೇಳಾಪಟ್ಟಿ ಕಾರಣದಿಂದ ಅನುಷ್ಠಾನಕ್ಕೆ ಸವಾಲು ಎದುರಾಗಿತ್ತು. ಈ ಬಾರಿ ಪಿಯು ಫಲಿತಾಂಶ ಬಂದ ಕೂಡಲೇ ದಾಖಲಾತಿ ಪ್ರಕ್ರಿಯೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ಪ್ರೊ| ಕಿಶೋರ್‌ ಕುಮಾರ್‌ ಸಿ.ಕೆ., ಕುಲಸಚಿವರು (ಆಡಳಿತ) ಮಂಗಳೂರು ವಿ.ವಿ.

-ದಿನೇಶ್‌ ಇರಾ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.