Dr. Veerendra Heggade ಪ್ರತಿಯೊಬ್ಬರಿಗೂ ಕಾನೂನಿನ ಜ್ಞಾನ ಅಗತ್ಯ

ಕಾನೂನು ಮಾಹಿತಿ ಕೃತಿ ಬಿಡುಗಡೆ

Team Udayavani, Jul 8, 2024, 12:16 AM IST

Dr. Veerendra Heggade ಪ್ರತಿಯೊಬ್ಬರಿಗೂ ಕಾನೂನಿನ ಜ್ಞಾನ ಅಗತ್ಯ

ಮಂಗಳೂರು: ಕಾನೂನಿನ ಕುರಿತಂತೆ ಪ್ರತಿಯೊಬ್ಬರೂ ಕನಿಷ್ಠ ಜ್ಞಾನ ಹೊಂದುವುದು ಇಂದಿನ ಅಗತ್ಯವಾಗಿದೆ. ಕಾನೂನಿಗೆ ಬದ್ಧರಾಗಿ ಕಾನೂನು ಚೌಕಟ್ಟಿನಲ್ಲಿ ವ್ಯವಹರಿಸುವುದರಿಂದ ಯಾವುದೇ ಅಪಾಯವೂ ಉಂಟಾಗುವುದಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಮೂಡುಬಿದಿರೆ ಚೌಟರ ಅರಮನೆಯ ಡಾ| ಅಕ್ಷತಾ ಆದರ್ಶ್‌ ಅವರು ಬರೆದಿರುವ ಕಾನೂನು ಮಾಹಿತಿ ಕುರಿತಾದ “ಸರಳ ಕಾನೂನುಗಳ ಅರಿವಿಲ್ಲದೆ ಮೋಸ ಹೋಗದಿರಿ!’ ಕೃತಿಯನ್ನು ರವಿವಾರ ನಗರದ ಕೊಡಿಯಾಲಬೈಲ್‌ ಎಸ್‌ಡಿಎಂ ಕಾನೂನು ಕಾಲೇಜಿನ ಸಭಾಂಗಣದಲ್ಲಿ ಬಿಡುಗಡೆಗೊಳಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಸ್ಪರ ನಂಬಿಕೆ – ವಿಶ್ವಾಸವಿದ್ದರೆ ಯಾವುದೇ ಕಾನೂನಿನ ಅಗತ್ಯವಿಲ್ಲ. ಆದರೆ ಇಂದು ಹಲವರು ನಂಬಿಕೆ ವಿಶ್ವಾಸಕ್ಕೆ ವಿರುದ್ಧವಾಗಿ ಹೋಗುವುದು ಕಂಡು ಬರುತ್ತಿದೆ. ವ್ಯವಹಾರದಲ್ಲಿಯೂ ಮೋಸ ಮಾಡುವುದು, ಮೋಸ ಹೋಗುವುದು ಕೂಡ ಸಾಮಾನ್ಯ ಎನ್ನುವಂತಾಗಿದೆ. ಇಂತಹ ಸಂದರ್ಭದಲ್ಲಿ ಕಾನೂನಿನ ಅರಿವು ಇದ್ದಾಗ ಮೋಸದಿಂದ ದೂರವಿರಬಹುದು. ಇಂತಹ ಪುಸ್ತಕಗಳಿಂದ ಜನಸಾಮಾನ್ಯರಿಗೆ ಕಾನೂನಿನ ಕುರಿತು ಹೆಚ್ಚಿನ ಅರಿವು ಮೂಡುತ್ತದೆ ಎಂದರು.

ಕೃತಿಯಿಂದ ಕಾನೂನು ನೆರವು
ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಅವರು ಮಾತನಾಡಿ, ಕಾನೂನಿನ ಪ್ರತಿಯೊಂದು ಅಂಶವನ್ನು ಎಲ್ಲರೂ ತಿಳಿಯಲು ಸಾಧ್ಯವಿಲ್ಲ. ಅಂತಹ ಸಂದರ್ಭದಲ್ಲಿ ನಮಗೆ ಇಂತಹ ಕೃತಿಗಳು ನೆರವಾಗುತ್ತದೆ ಎಂದು ಹೇಳಿದರು.

ಕಾನೂನಿನಲ್ಲಿ ಜೀವನದಲ್ಲಿ ಶಿಸ್ತು
ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್‌.ವಿ.ರಾಘವೇಂದ್ರ ಮಾತನಾಡಿ, ಹುಟ್ಟಿನಿಂದ ಸಾವಿನ ವರೆಗೆ ಒಂದಲ್ಲ ಒಂದು ರೀತಿಯಲ್ಲಿ ಕಾನೂನಿನ ನೆರವು ಅಗತ್ಯವಿದೆ. ಜನರಲ್ಲಿ ಶಿಸ್ತು ಬರಲು ಕಾನೂನು ಅಗತ್ಯ ಎಂದರು.

ಕಾನೂನಿಲ್ಲದೆ ಬದುಕಿಲ್ಲ
ಲೇಖಕಿ, ವಕೀಲೆ ಡಾ| ಅಕ್ಷತಾ ಆದರ್ಶ್‌ ಮಾತನಾಡಿ, ಕಾನೂನಿನ ಅಜ್ಞಾನಕ್ಕೆ ಕ್ಷಮೆ ಇಲ್ಲ. ಕಾನೂನಿಲ್ಲದೆ ಬದುಕಲೂ ಸಾಧ್ಯವಿಲ್ಲ. ಈ ಕೃತಿಯಿಂದ ಜನರಿಗೆ ಸಹಾಯವಾದರೆ ಜೀವನ ಸಾರ್ಥಕವಾದಂತೆ ಎಂದರು.

ಅಕ್ಷತಾ ಅವರ ತಂದೆ ಧರ್ಮರಾಜ್‌ ಜೈನ್‌, ಪತಿ ಆದರ್ಶ್‌ ಎಂ.ಉಪಸ್ಥಿತ ರಿದ್ದರು. ಡಾ| ಆಕಾಶ್‌ ರಾಜ್‌ ಜೈನ್‌ ಸ್ವಾಗತಿಸಿದರು. ಮೂಡುಬಿದಿರೆ ಜೈನ್‌ ಕಾಲೇಜು ಪ್ರಾಂಶುಪಾಲ ಡಾ| ಪ್ರಭಾತ್‌ ಬಳ್ನಾಡು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

 

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.