![CT Ravi](https://www.udayavani.com/wp-content/uploads/2024/12/CT-Ravi-1-415x269.jpg)
ಕರಾವಳಿಯಲ್ಲಿ ಉತ್ತಮ ಮಳೆ ನಿರೀಕ್ಷೆ
Team Udayavani, Oct 31, 2019, 5:56 AM IST
![e-24](https://www.udayavani.com/wp-content/uploads/2019/10/e-24-3-620x465.jpg)
ಮಂಗಳೂರು: ಅರಬಿ ಸಮುದ್ರ, ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯ ಕರಾವಳಿಯಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಮುನ್ನೆಚ್ಚರಿಕೆ ದೃಷ್ಟಿಯಿಂದ ಅಪೂರ್ವ, ಅಮರ್ತ್ಯ, ರಾಜಧೂತ್ ಮತ್ತು ಸಾವಿತ್ರಿ ಫುಲೆ ನೌಕೆಗಳು ಮಂಗಳೂರು ಬಂದರಿನಲ್ಲಿ ಸಿದ್ಧವಾಗಿ ನಿಂತಿವೆ.
ಹವಾಮಾನ ಇಲಾಖೆಯು ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಕರಾವಳಿಯಲ್ಲಿ ಬುಧವಾರ ಉತ್ತಮ ಮಳೆಯಾಗಿತ್ತು. ಮಂಗಳೂರು ನಗರದಲ್ಲಿ ದಿನವಿಡೀ ಬಿಟ್ಟು ಬಿಟ್ಟು ಮಳೆಯಾಗಿದ್ದು, ಸಂಜೆ, ರಾತ್ರಿ ವೇಳೆಗೆ ಮಳೆ ಬಿರುಸು ಪಡೆದಿತ್ತು. ಪುತ್ತೂರು, ಬಂಟ್ವಾಳ, ಸುಬ್ರಹ್ಮಣ್ಯ ಪರಿಸರದಲ್ಲಿ ಮಳೆಯಾಗಿದೆ. ಗೋವಾ ಗಡಿ ಸಮೀಪ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಸುವರ್ಣ ಜ್ಯೋತಿ ಬೋಟಿನಿಂದ ಸಮುದ್ರಕ್ಕೆ ಧುಮುಕಿ ಕಣ್ಮರೆ ಯಾಗಿರುವ ಒಡಿಶಾದ ಮೀನುಗಾರ ಚೋಟುವಿನ ದೇಹ ಇನ್ನೂ ಪತ್ತೆಯಾಗಿಲ್ಲ.
ಮೀನುಗಾರರು, ಪ್ರವಾಸಿಗರಿಗೆ ಎಚ್ಚರಿಕೆ
ಕಾಸರಗೋಡು: ಜಿಲ್ಲೆಯಲ್ಲಿ ಅ. 31 ಮತ್ತು ನಾಳೆ ನ. 1ರಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಎಲ್ಲೋ ಅಲೆರ್ಟ್ ಘೋಷಿಸಲಾಗಿದೆ ಎಂದು ತಿರುವನಂತಪುರ ಹವಾಮಾನ ನಿಗಾ ಕೇಂದ್ರ ತಿಳಿಸಿದೆ. ಸಮುದ್ರ ಅಬ್ಬರಿಸುತ್ತಿರುವುದರಿಂದ ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ತೆರಳಬಾರದು ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್ಬಾಬು ತಿಳಿಸಿದ್ದಾರೆ.
ಮುಂದಿನ ಆದೇಶ ಬರುವ ತನಕ ಪ್ರವಾಸಿಗಳು ಬೀಚ್ಗಳಿಗೆ ತೆರಳದಂತೆ ಎಚ್ಚರಿಕೆ ನೀಡಿದ್ದಾರೆ. ಕರಾವಳಿ ಪ್ರದೇಶದಲ್ಲಿ ವಾಸಿಸುವವರು ಜಾಗ್ರತೆ ಪಾಲಿಸಬೇಕೆಂದೂ, ಕಡಲ ತೀರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕಾದ ಸಂದರ್ಭ ಬಂದಲ್ಲಿ ಶಿಬಿರಗಳನ್ನು ಆರಂಭಿಸಲು ಅಗತ್ಯದ ಕ್ರಮ ತೆಗೆದುಕೊಳ್ಳುವಂತೆ ಗ್ರಾಮಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
![CT Ravi](https://www.udayavani.com/wp-content/uploads/2024/12/CT-Ravi-1-415x269.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![9-ullala](https://www.udayavani.com/wp-content/uploads/2024/12/9-ullala-150x90.jpg)
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
![6](https://www.udayavani.com/wp-content/uploads/2024/12/6-36-150x80.jpg)
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
![8-belthangady](https://www.udayavani.com/wp-content/uploads/2024/12/8-belthangady-150x90.jpg)
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
![CT Ravi](https://www.udayavani.com/wp-content/uploads/2024/12/CT-Ravi-1-150x97.jpg)
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
![Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು](https://www.udayavani.com/wp-content/uploads/2024/12/10-23-150x90.jpg)
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
![dhankar (2)](https://www.udayavani.com/wp-content/uploads/2024/12/dhankar-2-1-150x91.jpg)
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
![Yakshagana Tenku](https://www.udayavani.com/wp-content/uploads/2024/12/Yakshagana-Tenku-150x99.jpg)
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.