ಶಟ್ಲ್ ಬಸ್‌ಗೆ ಎಕ್ಸ್‌ಪ್ರೆಸ್‌ ದರ: ದೂರಿಗೆ ಸ್ಪಂದಿಸಿದ ಡಿಸಿ


Team Udayavani, Jul 9, 2018, 11:23 AM IST

9-july-6.jpg

ಕಡಬ : ಕುಕ್ಕೆ ಸುಬ್ರಹ್ಮಣ್ಯ ಮತ್ತು ಮಂಗಳೂರು ನಡುವೆ ಕಡಬ-ಉಪ್ಪಿನಂಗಡಿಯ ಮೂಲಕ ಸಂಚರಿಸುವ ಕೆಎಸ್ಸಾರ್ಟಿಸಿ ಮಂಗಳೂರು ಘಟಕದ ಬಸ್‌ಗಳ ಪ್ರಯಾಣ ದರವನ್ನು ಬೇಕಾಬಿಟ್ಟಿ ಏರಿಕೆ ಮಾಡಿರುವ ಕುರಿತು ಪ್ರಯಾಣಿಕರ ದೂರಿಗೆ ಸ್ಪಂದಿಸಿರುವ ದ.ಕ. ಜಿಲ್ಲಾಧಿಕಾರಿ, ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗೆ ಪತ್ರ ಬರೆದು ಸೂಚಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ಮತ್ತು ಮಂಗಳೂರು ನಡುವೆ ಸಂಚರಿಸುವ ಬಹುತೇಕ ಶಟ್ಲ (ಸಾಮಾನ್ಯ ನಿಲುಗಡೆ) ಬಸ್‌ಗಳನ್ನು ಎಕ್ಸ್ ಪ್ರೆಸ್‌ (ವೇಗದೂತ) ಆಗಿ ಪರಿವರ್ತಿಸಿ, ಹೆಚ್ಚುವರಿ ದರ ವಿಧಿಸುವ ಮೂಲಕ ಸುಲಿಗೆ ಮಾಡಲಾಗುತ್ತಿದೆ ಎನ್ನುವ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಮಾಧ್ಯಮಗಳು ವಿಸ್ತೃತ ವರದಿ ಪ್ರಕಟಿಸಿದ್ದವು. ಇದನ್ನು ಗಮನಿಇಸದ ಕಡಬ ಜಿ.ಪಂ. ಕ್ಷೇತ್ರದ ಸದಸ್ಯ ಪಿ.ಪಿ. ವರ್ಗೀಸ್‌ ಅವರು, ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಅಧಿಕಾರಿಗಳನ್ನು ಸಂಪರ್ಕಿಸಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದ್ದರು. ಸಾಮಾಜಿಕ ಕಾರ್ಯಕರ್ತ ಕೋಡಿಂಬಾಳದ ತಿಮ್ಮಪ್ಪ ವಿ.ಕೆ. ಅವರು ದ.ಕ. ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ದೂರಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿ, ಸಮಸ್ಯೆಯನ್ನು ಕೂಡಲೇ ಬಗೆಹರಿಸುವಂತೆ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಅಧಿಕಾರಿಗಳಿಗೆ ಪತ್ರ ಬರೆದು, ಪತ್ರದ ಪ್ರತಿಯನ್ನು ದೂರುದಾರರಿಗೂ ರವಾನಿಸಿದ್ದಾರೆ.

ಸಂಜೆ ಬಸ್‌ ಮತ್ತೆ ಬಂತು..!
ಇಪ್ಪತ್ತೈದು ವರ್ಷಗಳಿಂದ ಕಡಬದಿಂದ ಮಂಗಳೂರಿನತ್ತ ಸಂಜೆ 6.45ಕ್ಕೆ ಕೊನೆಯ ಬಸ್‌ ಸಂಚರಿಸುತ್ತಿತ್ತು. ಸುಬ್ರಹ್ಮಣ್ಯದಿಂದ 6.15ಕ್ಕೆ ಹೊರಡುತ್ತಿದ್ದ ಆ ಬಸ್‌ ಎರಡು ತಿಂಗಳಿನಿಂದ ನಾಪತ್ತೆಯಾಗಿತ್ತು. ಅದರಿಂದಾಗಿ ಸಂಜೆಯ ವೇಳೆಗೆ ಮಂಗಳೂರಿನತ್ತ ಹೋಗಬೇಕಾದ ಪ್ರಯಾಣಿಕರು ತೀವ್ರ ತೊಂದರೆ ಗೊಳಗಾಗಿದ್ದರು. ಪ್ರಯಾಣಿಕರ ಬೇಡಿಕೆಯ ಹಿನ್ನೆಲೆಯಲ್ಲಿ ಸಂಜೆಯ ಬಸ್‌ ಮತ್ತೆ ಸಂಚಾರ ಆರಂಭಿಸಿದೆ. ಆದರೆ ಸುಬ್ರಹ್ಮಣ್ಯದಿಂದ ಮಂಗಳೂರು ತನಕ ಸಂಚರಿಸುತ್ತಿದ್ದ ಆ ಬಸ್‌ ಈಗ ಉಪ್ಪಿನಂಗಡಿ ತನಕ ಮಾತ್ರ ಓಡಾಡುತ್ತಿದೆ. ಮಂಗಳೂರಿಗೆ ತೆರಳುವ ಪ್ರಯಾಣಿಕರು ಅಲ್ಲಿಂದ ಬೇರೆ ಬಸ್‌ ಹಿಡಿಯಬೇಕಿದೆ. ಸುಬ್ರಹ್ಮಣ್ಯದಿಂದ ಕಡಬ ಮೂಲಕ ಮಂಗಳೂರಿಗೆ ಹೋಗುವ ಎಕ್ಸ್‌ ಪ್ರಸ್‌ ಬಸ್‌ ಮುಂಜಾನೆ 5.30ಕ್ಕೆ ಸಂಚಾರ ಆರಂಭಿಸುತ್ತದೆ. ಆ ವೇಳೆಯಲ್ಲಿ ಒಂದು ಶಟ್ಲ ಬಸ್‌ ಓಡಿಸಿದರೆ ಅನುಕೂಲವಾಗಲಿದೆ ಎಂದು ಪ್ರಯಾಣಿಕರು ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಎಕ್ಸ್‌ಪ್ರೆಸ್‌..! ಪ್ರಯಾಣ ದರ ಮಾತ್ರ
ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಅಧಿಕಾರಿಗಳ ಎಡವಟ್ಟಿ ನಿಂದಾಗಿ ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿತ್ತು. ಮಂಗಳೂರು- ಸುಬ್ರಹ್ಮಣ್ಯದ ನಡುವೆ ಪ್ರಯಾಣಿಸುವ ಯಾತ್ರಿಕರ ಮನವಿಯಂತೆ ಅಧಿಕಾರಿಗಳು ಎಲ್ಲ ಬಸ್‌ಗಳನ್ನು ಎಕ್ಸ್‌ಪ್ರೆಸ್‌ ಮಾಡಿದ್ದಾರೆ. ಆದರೆ ಇತರ ಪ್ರಯಾಣಿಕರು ಕೇಳಿದಲ್ಲಿ ಸ್ಟಾಪ್‌ ಕೊಡಿ ಎಂದು ನಿರ್ವಾಹಕರಿಗೆ ಸೂಚಿಸಿದ್ದಾರೆ. ಅದರಿಂದಾಗಿ ಶಟ್ಲ ಬಸ್‌ಗೆ ಎಕ್ಸ್‌ಪ್ರೆಸ್‌ ದರ ತೆತ್ತು ಪ್ರಯಾಣಿಸಬೇಕಾದ ಅನಿವಾರ್ಯತೆ ಎದುರಾಗಿತ್ತು. ಮಾಧ್ಯಮಗಳ ವರದಿ ಹಾಗೂ ಪ್ರಯಾಣಿಕರ ದೂರಿನ ಹಿನ್ನೆಲೆಯಲ್ಲಿ ಇದೀಗ ಸುಬ್ರಹ್ಮಣ್ಯ – ಉಪ್ಪಿನಂಗಡಿ ನಡುವೆ ಕೆಲವು ಶಟ್ಲ ಬಸ್‌ಗಳ ಸಂಚಾರ ಆರಂಭಿಸಿದ್ದಾರೆ. ಆದರೆ ಸುಬ್ರಹ್ಮಣ್ಯದಿಂದ ಮಂಗಳೂರು ತನಕವೂ ಶಟ್ಲ ಬಸ್‌ ಬೇಕೆನ್ನುವುದು ಜನರ ಬೇಡಿಕೆಯಾಗಿದೆ.

ಶೀಘ್ರ ಸಮಸ್ಯೆ ಬಗೆಹರಿಸಿ
ಬೇಕಾಬಿಟ್ಟಿ ದರ ಏರಿಕೆ ಮಾಡಿರುವ ಕುರಿತು ದ.ಕ. ಜಿಲ್ಲಾಧಿಕಾರಿಗೆ ಪ್ರಯಾಣಿಕರ ಪರವಾಗಿ ಲಿಖಿತ ದೂರು ನೀಡಿದ್ದೆ. ಅದಕ್ಕೆ ಸ್ಪಂದಿಸಿರುವ ಅವರು ಸಮಸ್ಯೆ ಬಗೆಹರಿಸಲು ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಎಸ್ಸಾರ್ಟಿಸಿ ಅಧಿಕಾರಿಗಳು ಈ ಕುರಿತು ಗಮನಹರಿಸಿ ಶೀಘ್ರ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕಿದೆ.
 - ತಿಮ್ಮಪ್ಪ ವಿ.ಕೆ.
   ಕೋಡಿಂಬಾಳ, ದೂರುದಾರರು

ವಿಶೇಷ ವರದಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.