ಅವಿಭಜಿತ ದಕ್ಷಿಣ ಕನ್ನಡದ ಟೋಲ್‌ಗ‌ಳು ಸಿದ್ಧ

ಡಿ. 1ರಿಂದ ಟೋಲ್‌ ಗೇಟ್‌ಗಳಲ್ಲಿ ಫಾಸ್ಟ್ಯಾಗ್‌

Team Udayavani, Nov 21, 2019, 5:26 AM IST

gg-38

ಮಂಗಳೂರು/ಕೋಟ: ಕಡ್ಡಾಯ ಫಾಸ್ಟ್ಯಾ ಗ್‌ನಡಿ ಡಿ. 1ರಿಂದ ರಾಷ್ಟ್ರೀಯ ಹೆದ್ದಾರಿಯ ಎಲ್ಲ ಟೋಲ್‌ ಪ್ಲಾಝಾಗಳಲ್ಲಿ ತಲಾ ಒಂದು ಗೇಟ್‌ ಬಿಟ್ಟು ಮಿಕ್ಕುಳಿದ ಎಲ್ಲವೂ ನಗದು ರಹಿತ ವ್ಯವಹಾರ ನಡೆಸಲಿವೆ. ಎಲ್ಲ ವಾಹನಗಳೂ ಫಾಸ್ಟಾಗ್‌ ಅಳವಡಿಸಿಕೊಳ್ಳದ ಕಾರಣ ಆರಂಭದ ಕೆಲವು ವಾರ ಸಾದಾ ಸುಂಕ ವಸೂಲಿ ವ್ಯವಸ್ಥೆಯಿರುವ ಗೇಟ್‌ಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ.

ಉಡುಪಿ ಜಿಲ್ಲೆಯ ಹೆಜಮಾಡಿ, ತಲಪಾಡಿ ಮತ್ತು ಸಾಸ್ತಾನ ಹಾಗೂ ದ.ಕ. ಜಿಲ್ಲೆಯ ಬ್ರಹ್ಮರಕೂಟ್ಲು, ಸುರತ್ಕಲ್‌ ಟೋಲ್‌ ಪ್ಲಾಝಾಗಳಲ್ಲಿ ಪ್ರಾಯೋಗಿಕ ಫಾಸ್ಟಾಗ್‌ ಆರಂಭಿಸಲಾಗಿದೆ. ಸೂಚನಾ ಫಲಕ ಅಳವಡಿಸಿ, ವಾಹನ ಸವಾರರಿಗೆ ಕರಪತ್ರ ವಿತರಿಸಿ ಮಾಹಿತಿ ನೀಡಲಾಗುತ್ತಿದೆ.

ಇಲಾಖೆಯ ಮಟ್ಟದಲ್ಲೂ ಸಿದ್ಧತೆಗಳಾಗಿದ್ದು, ಮಂಗಳವಾರ ಬೆಂಗಳೂರಿನಲ್ಲಿ ಡಿಜಿಪಿ ನೇತೃತ್ವದಲ್ಲಿ ರಾಜ್ಯದ ಎಲ್ಲ ಟೋಲ್‌ ಮ್ಯಾನೇಜರ್‌ಗಳ ಸಭೆ ನಡೆದಿದೆ. ಹೆದ್ದಾರಿ ಪ್ರಾಧಿಕಾರವೂ ಸಭೆಗಳನ್ನು ನಡೆಸಿ ಯೋಜನೆಯ ಅನುಷ್ಠಾನದ ಕುರಿತು ಚರ್ಚಿಸಿದೆ.

ನಗದು ರಾಹಿತ್ಯದ ಅನುಕೂಲ
ರೇಡಿಯೊ ಫ್ರೀ ಐಡೆಂಟಿಫಿಕೇಷನ್‌ (ಆರ್‌ಎಫ್‌ಐಡಿ) ಹೊಂದಿರುವ ” ಫಾಸ್ಟ್ಯಾಗ್‌’ ಅಳವಡಿಸಿದ ವಾಹನ ಟೋಲ್‌ ಬೂತ್‌ಗೆ ಆಗಮಿಸುತ್ತಿದ್ದಂತೆ ಟ್ಯಾಗ್‌ ಸ್ಕ್ಯಾನ್‌ ಆಗಿ ಖಾತೆಯಿಂದ ನಿಗದಿತ ಶುಲ್ಕ ಕಡಿತಗೊಳ್ಳುತ್ತದೆ. ಉಡುಪಿ, ದ.ಕ. ಜಿಲ್ಲೆಯಲ್ಲಿ ನಿತ್ಯ ಸಂಚರಿಸುವ ಶೇ. 30ಷ್ಟು ವಾಹನಗಳು ಈಗಾಗಲೇ ಫಾಸ್ಟ್ಯಾಗ್‌ ಅಳವಡಿಸಿಕೊಂಡಿವೆ. ಹೊಸ ವಾಹನಗಳ ಖರೀದಿ ವೇಳೆಗೆ ಫಾಸ್ಟ್ಯಾಗ್‌ ಅಳವಡಿಕೆ ಈಗಾಗಲೇ ಕಡ್ಡಾಯವಾಗಿದೆ.

ಫಾಸ್ಟ್ಯಾಗ್‌ ಅಳವಡಿಕೆ ಹೇಗೆ?
ಎಲ್ಲ ಟೋಲ್‌ ಪ್ಲಾಜಾಗಳಲ್ಲಿ, ಆಯ್ದ ಬ್ಯಾಂಕ್‌ ಶಾಖೆಗಳಲ್ಲಿ ಫಾಸ್ಟ್ಯಾಗ್‌ ಅಳವಡಿಸಿಕೊಡಲಾಗುತ್ತದೆ. ಮೈಫಾಸ್ಟಾಗ್‌, ಫಾಸ್ಟ್ಯಾಗ್‌ ಪಾರ್ಟನರ್‌, ಫಾಸ್ಟ್ಯಾಗ್‌ ಮುಂತಾದ ಹಲವಾರು ಆ್ಯಪ್‌ಗ್ಳಿವೆ. ಪೇಟಿಎಂ, ಗೂಗಲ್‌ ಪೇಗಳಲ್ಲೂ ಈ ವ್ಯವಸ್ಥೆ ಇದೆ.

ಸಮಯ ಉಳಿತಾಯ; ಕಾರ್ಮಿಕರಿಗೆ ಚಿಂತೆ
ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡಲ್ಲಿ ಸಮಯದ ಉಳಿತಾಯದ ಜತೆಗೆ ಚಿಲ್ಲರೆ ಸಮಸ್ಯೆಗೂ ಮುಕ್ತಿ ದೊರೆಯಲಿದೆ. ಆದರೆ ಟೋಲ್‌ನಲ್ಲಿ ಇದುವರೆಗೆ ಕಾರ್ಯ ನಿರ್ವಹಿಸುತ್ತಿದ್ದ ಸಿಬಂದಿಗೆ ಉದ್ಯೋಗ ನಷ್ಟದ ಭೀತಿ ಎದುರಾಗಲಿದೆ.

ಉಡುಪಿ ಜಿಲ್ಲೆಯ ಹೆಜಮಾಡಿ, ಸಾಸ್ತಾನ ಹಾಗೂ ದ.ಕ. ಜಿಲ್ಲೆಯ ತಲಪಾಡಿ, ಬ್ರಹ್ಮರಕೂಟ್ಲು, ಎನ್‌ಐಟಿಕೆ ಟೋಲ್‌ ಪ್ಲಾಝಾಗಳಲ್ಲಿ ಪ್ರಾಯೋಗಿಕ ಫಾಸ್ಟಾಗ್‌ ಆರಂಭಿಸಲಾಗಿದೆ. ಡಿ. 1ರಿಂದ ಕಡ್ಡಾಯವಾಗಿ ಜಾರಿಯಾಗಲಿದೆ.
– ಶಿಶುಪಾಲನ್‌, ಉಭಯ ಜಿಲ್ಲೆಗಳ , ಎನ್‌ಎಚ್‌ಎಐ ಪ್ರಾಜೆಕ್ಟ್ ಡೈರೆಕ್ಟರ್‌

ಹೆಜಮಾಡಿ, ತಲಪಾಡಿ ಮತ್ತು ಸಾಸ್ತಾನ ಟೋಲ್‌ಗ‌ಳಲ್ಲಿ ಫಾಸ್ಟಾಗ್‌ ಪ್ರಾಯೋಗಿಕ ಪ್ರಕ್ರಿಯೆ ನಡೆಯುತ್ತಿದೆ. ಡಿ.1ರಿಂದ ಈ ಮೂರೂ ಟೋಲ್‌ಗ‌ಳಲ್ಲಿ ಒಂದು ಗೇಟ್‌ ವಿನಾ ಮಿಕ್ಕೆಲ್ಲ ಕ್ಯಾಶ್‌ಲೆಸ್‌ ಆಗಲಿವೆ.
– ಶಿವಪ್ರಸಾದ್‌ ರೈ, ಹೆಜಮಾಡಿ, ತಲಪಾಡಿ, ಸಾಸ್ತಾನ ಟೋಲ್‌ ಮ್ಯಾನೇಜರ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.