ಸಂಪರ್ಕ ಕಡಿತಗೊಳುವ ಭೀತಿ: ಕಾಮಗಾರಿ ಲೋಪದ ಆರೋಪ 


Team Udayavani, Jun 29, 2018, 12:47 PM IST

29-june-11.jpg

ಸುಳ್ಯಪದವು: ಗ್ರಾಮೀಣ ಭಾಗದ ರಸ್ತೆಗಳಿಗೆ ಕಾಯಕಲ್ಪ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ನಮ್ಮ ಗ್ರಾಮ ನಮ್ಮ ರಸ್ತೆಯನ್ನು ಜಾರಿಗೊಳಿಸಿದೆ. ಮೈಂದನಡ್ಕ-ಪದಡ್ಕ ರಸ್ತೆಯನ್ನು ಕಳೆದ ಬೇಸಗೆಯಲ್ಲಿ 2.70 ಕಿ.ಮೀ.ರಸ್ತೆ ಯನ್ನು
ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಲ್ಲಿ ಅಭಿವೃದ್ಧಿಗೊಳಿಸಲಾಗಿತ್ತು. ರಸ್ತೆ ರಚನೆಗೆ 1.84 ಕೋಟಿ ರೂ. ಮತ್ತು 5ವರ್ಷಗಳ ನಿರ್ವಹಣೆ ಹಾಗೂ 6ನೇ ವರ್ಷದ ನವೀಕರಣಕ್ಕೆ 31.83 ಲಕ್ಷ, ಅಂದರೆ ಈ ರಸ್ತೆ ಅಭಿವೃದ್ಧಿಗೆ 221.50 ಲಕ್ಷ ರೂ. ಅನುದಾನ ಇರಿಸಲಾಗಿದೆ.

ಇದೀಗ ಕನ್ನಡ್ಕ ಬಸ್ಸು ತಂಗುದಾಣದ ಬಳಿ ರಸ್ತೆ ಕುಸಿದು ಹೋಗಿದ್ದು ರಸ್ತೆಯಲ್ಲಿ ಹೊಂಡಗಳು ಸೃಷ್ಟಿಯಾಗಿದೆ. ಇದರಿಂದ ಸುಮಾರು 100 ಮೀಟರ್‌ ರಸ್ತೆ ಮಧ್ಯೆ ಬಿರುಕು ಕಾಣಿಸಿಕೊಂಡಿದ್ದು, ಮೋರಿಯ ಪಕ್ಕದಲ್ಲಿ ನೀರು ಶೇಖರಣೆಗೊಳುತ್ತಿದೆ. ಇದೀಗ ರಸ್ತೆ ಸಂಪರ್ಕ ಕಡಿತಗೊಳ್ಳುವ ಅತಂಕ ಸಾರ್ವಜನಿಕರಲ್ಲಿ ಮೂಡಿದೆ.

ಒರತೆ ಹೆಚ್ಚು
ಕನ್ನಡ್ಕ ಎಂಬಲ್ಲಿ ರಸ್ತೆ ನಿರ್ಮಿಸುವಾಗ ಮಣ್ಣು ಹಾಕಿ ಹದ ಮಾಡಿ ಎತ್ತರ ತಗ್ಗನ್ನು ಸರಿಪಡಿಸಲಾಗಿತ್ತು. ಮಣ್ಣು ಸರಿಯಾಗಿ ಸೆಟ್‌ ಆಗದೇ ಇರುವುದು ಮತ್ತು ನೀರಿನ ಒರತೆ ಹೆಚ್ಚು ಇರುವುದರಿಂದ ಕುಸಿತವಾಗಿದೆ ಎಂಬ ಮಾತು ಸಾರ್ವಜನಿಕರಿಂದ ವ್ಯಕ್ತವಾಗಿದೆ. 

ಕೇರಳ-ಕರ್ನಾಟಕ ಸಂಪರ್ಕಿಸುವ ರಸ್ತೆ ಇದಾಗಿದ್ದು.ಸರಕಾರಿ, ಖಾಸಗಿ ಬಸ್‌ಗಳು, ಇತರ ವಾಹನಗಳು ದಿನನಿತ್ಯ ಸಂಚರಿಸುತ್ತಿವೆ. ಕನ್ನಡ್ಕ, ಸುಳ್ಯಪದವು, ಗಡಿಭಾಗದ ಜನರಿಗೆ ಈ ರಸ್ತೆ ಮುಖ್ಯವಾಗಿದೆ. ಲಾರಿಗಳಲ್ಲಿ ಮಿತಿಗಿಂತ ಹೆಚ್ಚು ಕೆಂಪುಕಲ್ಲು ಗಳನ್ನು ಸಾಗಾಟ ಮಾಡಲಾಗುತ್ತಿದೆ. ನಿರಂತರವಾಗಿ ಘನ ವಾಹನಗಳು ಸಂಚರಿಸುತ್ತಿರುವುದರಿಂದ ಮೋರಿಯ ಸಮೀಪ ದೊಡ್ಡ ಗಾತ್ರದ ಹೊಂಡ ನಿರ್ಮಾಣವಾಗಿದೆ.

ನೀರು ನಿಂತು ದ್ವಿಚಕ್ರವಾಹನ ಸವಾರಿಗೆ ತೊಂದರೆಯಾಗುತ್ತಿದೆ. ಲಘುವಾಹನಗಳ ಭಾಗಗಳು ಜಖಂಗೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕಾಗಿದೆ. ರಸ್ತೆಯ ಮೇಲೆ ನೀರು ಹರಿದು ರಸ್ತೆ ಪಕ್ಕದಲ್ಲಿರುವ ಮಣ್ಣು ಕೂಡ ಮಳೆಯ ನೀರಿನಲ್ಲಿ ಕೊಚ್ಚಿಹೋಗಿದೆ.

ಕಾಮಗಾರಿಯಲ್ಲಿ ಕೊರತೆ
ರಸ್ತೆ ನಿರ್ಮಾಣ ಮಾಡುವಾಗ ಮಣ್ಣು ತುಂಬಿಸಲಾಗಿತ್ತು. ಮಣ್ಣು ಹಾಕಿರುವುದರಿಂದ ರಸ್ತೆ ಬಿರುಕು ಬಿಟ್ಟಿದೆ. ಒರತೆ ಇರುವ ಪ್ರದೇಶವಾಗಿದೆ. ಇದೀಗ ಮಣ್ಣು ಸಡಿಲಗೊಂಡಿದೆ. ಮಳೆಗಾಲದಲ್ಲಿಯೂ ಕೆಂಪು ಕಲ್ಲು ಸಾಗಾಟದ ಲಾರಿಗಳು ನಿರಂತರವಾಗಿ ಸಂಚರಿಸುತ್ತಿವೆ. ಜನಪ್ರತಿನಿಧಿಗಳು, ಅಧಿಕಾರಿಗಳು ಈ ರಸ್ತೆಯ ಭಾಗದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸೂಕ್ತ ಕ್ರಮಕೈಗೊಳ್ಳಬೇಕು.
 - ಶ್ರೀಧರ ಪೂಜಾರಿ,
ಸಾಮಾಜಿಕ ಕಾರ್ಯಕರ್ತ

ನನ್ನ  ಗಮನಕ್ಕೆ ಬಂದಿಲ್ಲ
ರಸ್ತೆ ಪರಿಸ್ಥಿತಿಯ ಕುರಿತು ನನ್ನ ಗಮನಕ್ಕೆ ಬಂದಿಲ್ಲ. ಬಿರುಕು ಬಿಟ್ಟ ಮತ್ತು ಹೊಂಡಗಳ ರಸ್ತೆಯನ್ನು ಪರಿಶೀಲನೆ ಮಾಡುತ್ತೇನೆ. ರಸ್ತೆಯಲ್ಲಿ ಹೊಂಡಗಳು ಇದ್ದರೆ ದುರಸ್ತಿಗೊಳಿಸಲು ಕ್ರಮಕೈಗೊಳ್ಳಲಾಗುವುದು ನಂತರ ಪುನ: ಡಾಮರೀಕರಣ ಗೊಳಿಸಲಾಗುವುದು.
– ಜನಾರ್ದನ
ಎಂಜಿನಿಯರ್‌ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆ 

ಟಾಪ್ ನ್ಯೂಸ್

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.