ಖಾಸಗಿ ರಸ್ತೆ ಮಣ್ಣು ಹೆದ್ದಾರಿಗೆ ಬಂದರೆ FIR


Team Udayavani, May 31, 2018, 2:00 AM IST

mannu-30-5.jpg

ಪುತ್ತೂರು: ಮಾಣಿ- ಮೈಸೂರು ಹೆದ್ದಾರಿ ಮಂಗಳವಾರ ಒಂದು ಮಳೆಗೇ ನದಿಯಂತಾಗಿತ್ತು. ರಾತ್ರಿ ಹೊತ್ತು ಸಂಚರಿಸುವ ವಾಹನ ಸವಾರರಿಗೆ ಇದು ರಸ್ತೆಯೋ, ಚರಂಡಿಯೋ ಎಂಬ ಗೊಂದಲ ಉಂಟಾಗಿತ್ತು. ಖಾಸಗಿ ಜಾಗದ ಮಣ್ಣು ಹೆದ್ದಾರಿಗೆ ಬಂದು ಬಿದ್ದಿರುವುದೇ ಈ ಸಮಸ್ಯೆಗೆ ಮೂಲ ಕಾರಣ. ಇದಲ್ಲದೆ, ಚರಂಡಿ ಸಮಸ್ಯೆ, ಹೆದ್ದಾರಿ ತಗ್ಗಿನಲ್ಲಿರುವುದು ಇನ್ನೊಂದು ಕಾರಣ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಲೋಕೋಪಯೋಗಿ ಇಲಾಖೆ ಹಾಗೂ KRDCL, ಪ್ರಕರಣ ದಾಖಲಿಸಲು ಮುಂದಾಗಿವೆ. ಮುಂದೆ ಇಂತಹ ಪ್ರಕರಣ ಗಮನಕ್ಕೆ ಬಂದರೆ, ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದೆ.

ದರ್ಬೆ, ಸಂಪ್ಯ, ಕಾವು ಪ್ರದೇಶಗಳಲ್ಲಿ ಹೆದ್ದಾರಿ ನದಿಯಂತಾಗಿತ್ತು. ಸಂಜೆ ಹೊತ್ತಿಗೆ ಮಳೆ ತೀವ್ರವಾಗಿ ಸುರಿದ ಕಾರಣ, ಮನೆ ದಾರಿ ಹಿಡಿದಿದ್ದ ನಾಗರಿಕರಿಗೆ ತೊಂದರೆಯಾಯಿತು. ಕೆಲವು ಕಡೆಗಳಲ್ಲಿ ನಾಗರಿಕರೇ ಸ್ವಯಂಸೇವಕರಾಗಿ ನಿಂತು, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಅವರು ಬಂದು ಏನೂ ಮಾಡುವಂತಿರಲಿಲ್ಲ. ಬುಧವಾರ ಬೆಳಗ್ಗೆ ಚರಂಡಿಯನ್ನು ಸರಿಪಡಿಸುವ ಕಡೆ ಗಮನ ಹರಿಸಲಾಯಿತು.

ದುರಸ್ತಿ ಕೆಲಸ ಸ್ಥಗಿತ
ಮಂಗಳವಾರ ಮಧ್ಯಾಹ್ನದ ಬಳಿಕ ಭಾರಿ ಮಳೆಯಾಗಿದೆ. ವಿದ್ಯುತ್‌ ಸಮಸ್ಯೆ ಎಂದಿನಂತೆ ಕಾಡಿದೆ. ಸಂಪ್ಯ ಬಳಿ ಟ್ರಾನ್ಸ್‌ಫಾರ್ಮರ್‌ ರಿಪೇರಿಗೆ ಬಂದಿದ್ದ ಲೈನ್‌ ಮ್ಯಾನ್‌ ಗಳಿಬ್ಬರಿಗೆ ಹೆಜ್ಜೇನು ದಾಳಿ ಮಾಡಿ ಗಾಯಗೊಳಿಸಿತ್ತು. ಹೀಗಾಗಿ, ದುರಸ್ತಿ ಕೆಲಸ ಸ್ಥಗಿತಗೊಂಡು, ವಿದ್ಯುತ್‌ ಸಮಸ್ಯೆ ತಲೆದೋರಿತು.

ಕಾಲನಿಗಳಲ್ಲಿ ಅವ್ಯವಸ್ಥೆ
ಕಾಲನಿಗಳಲ್ಲಿ ನಿವೇಶನ ಹಂಚುವ ವೇಳೆ ಅಸಮರ್ಪಕ ಮಾನದಂಡ ಅನುಸರಿಸಿದ್ದು, ಈಗ ನಿವಾಸಿಗಳಿಗೆ ತಲೆನೋವಾಗಿದೆ. ಮನೆ ಹಿಂಭಾಗದ ಗುಡ್ಡ ಕುಸಿದಿದೆ. ಚರಂಡಿ ಇಲ್ಲದೆ ಮನೆಯೊಳಗೇ ನುಗ್ಗುವ ನೀರು. ಮನೆ ಮುಂಭಾಗದ ಬರೆ ಜರಿದು, ಮನೆಗೆ ಕಂಟಕ ಒದಗಿದೆ. ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆದರೆ ಯಾವುದೇ ಆಶ್ವಾಸನೆ ನೀಡಿಲ್ಲ. ಇನ್ನು ಯಾವುದೇ ರೂಪದಲ್ಲೂ ಈ ಕಾಮಗಾರಿಗಳನ್ನು ನಡೆಸಲು ಸಾಧ್ಯವಿಲ್ಲದಂತಹ ಸ್ಥಿತಿ ಇದೆ. ಇಂತಹ ವಿಕೋಪಗಳಿಗೆ ಪರಿಹಾರವೂ ಇಲ್ಲ ಎಂದು ಗ್ರಾ. ಪಂ.ಸದಸ್ಯರು ತಿಳಿಸಿದ್ದಾರೆ. ಪುತ್ತೂರು ತೋಟಗಾರಿಕಾ ಇಲಾಖೆಗೆ ಹೋಗುವ ರಸ್ತೆಗೆ ಮರ ಬಿದ್ದಿದೆ. ಇದರಿಂದ ಸಂಚಾರ ಸಮಸ್ಯೆ ಸೃಷ್ಟಿಯಾಯಿತು. ತತ್‌ ಕ್ಷಣದಲ್ಲೇ ಮರ ತೆರವು ಮಾಡಲಾಯಿತು.

ಕೇಸು
ಇದುವರೆಗೆ ಹೆದ್ದಾರಿಗೆ ಬಿದ್ದ ಮಣ್ಣನ್ನು ಇಲಾಖೆ ವತಿಯಿಂದಲೇ ತೆರವು ಮಾಡಿದ್ದೇವೆ. ಇನ್ನು ಮುಂದೆ ಖಾಸಗಿ ಜಾಗದ ಮಣ್ಣು ಹೆದ್ದಾರಿಗೆ ಬಿದ್ದರೆ, ಆಯಾ ಜಾಗದ ಮಾಲೀಕರ ಮೇಲೆ FIR ದಾಖಲಿಸಲಾಗುವುದು. ಆ ಮಣ್ಣನ್ನು ಅವರೇ ತೆರವು ಮಾಡಬೇಕು.
– ಪ್ರಮೋದ್‌, ಲೋ. ಇಲಾಖೆ ಎಂಜಿನಿಯರ್‌

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

16

Belthangady: ಸಾರಿಗೆ ಬಸ್‌ ಢಿಕ್ಕಿ: ಪಾದಚಾರಿ ಗಂಭೀರ

17

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

5

Maninalkur: ಶಿಥಿಲಾವಸ್ಥೆಯಲ್ಲಿ ಹಳೆ ಶಾಲಾ ಕಟ್ಟಡ; ಕ್ರಮಕ್ಕೆ ಆಗ್ರಹ

4

Puttur: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾದ ಪಿಎಂ ಸ್ವನಿಧಿ ಯೋಜನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.