![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 22, 2022, 6:09 PM IST
ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಮಾರಡ್ಕ ಎಂಬಲ್ಲಿ ಸುನಂದ ಪೂಜಾರ್ತಿ ರವರ ಮನೆಗೆ ಬುಧವಾರ ಮಧ್ಯರಾತ್ರಿ ಆಕಸ್ಮಿಕ ಬೆಂಕಿ ತಗಲಿ ಲಕ್ಷಾಂತರ ರೂ ನಷ್ಟ ಸಂಭವಿಸಿದ್ದು ಮನೆಯಲ್ಲಿದ್ದ ಅವರ ಮಗ ನಿತ್ಯಾನಂದ ಪೂಜಾರಿ ಪವಾಡ ಸದೃಶ ಪರಾಗಿದ್ದಾರೆ.
ಮಾರಡ್ಕ ಮಾರಿಗುಡಿ ಬಳಿಯ ಸುನಂದ ಪೂಜಾರ್ತಿ ರವರ ಹಂಚಿನ ಮನೆಗೆ ಬುಧವಾರ ಮಧ್ಯರಾತ್ರಿ ಏಕಾಏಕಿ ಬೆಂಕಿ ತಗಲಿ ಧಗಧಗನೆ ಉರಿಯಲಾರಂಭಿಸಿದೆ. ಈ ಸಂದರ್ಭ ಮನೆಯಲ್ಲಿದ್ದ ಸುನಂದ ರವರ ಮಗ ಹೊರಗೆ ಓಡಿ ಬಾರಿ ಅನಾಹುತದಿಂದ ಪಾರಾಗಿದ್ದಾರೆ. ಕೂಡಲೇ ಸ್ಥಳೀಯರಾದ ರಾಜು . ವಿಕೇಶ್ . ಚಂದ್ರಹಾಸ . ಸುರೇಶ್ ಮತ್ತಿತರರು ಸೇರಿ ಬೆಂಕಿಯನ್ನು ನಂದಿಸಲು ನೀರನ್ನು ಹಾಯಿಸಿದ್ದು ಬಳಿಕ ಅಗ್ನಿಶಾಮಕದಳ ಬಂದು ಹೆಚ್ಚಿನ ಅನಾಹುತ ವಾಗದಂತೆ ಬೆಂಕಿಯನ್ನು ನಂದಿಸಿದ್ದಾರೆ.
ಸ್ಥಳಕ್ಕೆ ಮಾಜೀ ಪಂಚಾಯತ್ ಸದಸ್ಯ ಮೋರ್ಗನ್ ವಿಲಿಯಂ, ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸಾಯೀಶ್ ಚೌಟ ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆ ನಡೆದ ದಿನ ಸುನಂದರವರು ಸಂಬಂಧಿಕರ ಮನೆಗೆ ಹೋಗಿದ್ದರು ಎನ್ನಲಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.