ಪ್ರಗತಿ ರಜತ ಸಂಭ್ರಮ: ಹೊನಲು ಬೆಳಕಿನ ಕ್ರೀಡೋತ್ಸವ 


Team Udayavani, Nov 26, 2018, 11:35 AM IST

26-november-7.gif

ಕಾಣಿಯೂರು: ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಬೆಳ್ಳಿಹಬ್ಬ ವರ್ಷಾಚರಣ ಸಮಿತಿಯ ವತಿಯಿಂದ ಪ್ರಗತಿ ರಜತ ಸಂಭ್ರಮದ ಅಂಗವಾಗಿ ಶನಿವಾರ ರಾತ್ರಿ ಹೊನಲು ಬೆಳಕಿನ ವೈವಿಧ್ಯಮಯ ಕ್ರೀಡೋತ್ಸವ ನಡೆಯಿತು.

ಎಳೆಯ ಪುಟಾಣಿಗಳಿಂದ ಪ್ರಾರಂಭಿಸಿ ಪ್ರೌಢ ವಿದ್ಯಾರ್ಥಿ ತಂಡಗಳನ್ನು ಒಳಗೊಂಡು ಸಾಹಸ, ವೈವಿಧ್ಯಮಯ ಕ್ರೀಡೋತ್ಸವ ರೋಮಾಂಚನಗೊಳಿಸಿತು. ಕಂಸಾಳೆ, ಮಲ್ಲ ಕಂಬ, ವ್ಯಾಯಾಮ, ಯಕ್ಷಗಾನ, ತಾಲೀಮು ಇತ್ಯಾದಿ ಸಾಹಸಮಯ ಜನ ಪದ ಕಲೆಗಳ ಪ್ರದರ್ಶನವೂ ಮನಸೂರೆಗೊಂಡಿತು.

ಅಂತಾರಾಷ್ಟ್ರೀಯ ವೇಗದ ನಡಿಗೆಯ ಕ್ರೀಡಾಪಟು ಸುಬ್ರಹ್ಮಣ್ಯ ಕಲ್ಪಡ ಕ್ರೀಡಾಕೂಟ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ ಮಾತನಾಡಿ, ಸವಾಲುಗಳನ್ನು ಛಲದಿಂದ ಸಮರ್ಥವಾಗಿ ಎದುರಿಸಿ ಜೀವನದಲ್ಲಿ ಯಶಸ್ವಿನ ಮೆಟ್ಟಿಲು ಏರುವ ಶಿಕ್ಷಣವನ್ನು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ನಿರಂತರ ನೀಡಲಾಗುತ್ತಿದೆ. ಜನಪದೀಯ ಕಲೆಗಳನ್ನು ಮುಂದಿನ ಜನಾಂಗಕ್ಕೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತರಬೇತಿ ನೀಡಿ ವಿದ್ಯಾರ್ಥಿಗಳಿಂದ ಪ್ರತಿಭೆ ಪ್ರದರ್ಶಿಸಲಾಗುತ್ತಿದೆ. ಮನರಂಜನೆಯ ಜತೆಗೆ ಕ್ರಿಯಾಶೀಲತೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶವನ್ನು ಸಂಸ್ಥೆ ಹೊಂದಿದೆ ಎಂದರು.

ರೋಟರಿ ಪ್ರೌಢಶಾಲೆಯ ಶಿಕ್ಷಕಿ ನಳಿನಾಕ್ಷಿ ವಿ. ಆಚಾರ್ಯ ಕಲ್ಮಡ್ಕ, ಬೆಳ್ಳಾರೆ ಪೊಲೀಸ್‌ ಠಾಣೆ ಪಿಎಸ್‌ಐ ಡಿ.ಎನ್‌. ಈರಯ್ಯ, ಕಾಣಿಯೂರು ಶ್ರೀ ಲಕ್ಷ್ಮೀ ನರಸಿಂಹ ಯುವಕ ಮಂಡಲದ ಅಧ್ಯಕ್ಷ ದಿನೇಶ್‌ ಮುಗರಂಜ, ತಾ| ಯುವಜನ ಒಕ್ಕೂಟದ ಕಾರ್ಯದರ್ಶಿ ಗುರುಪ್ರಿಯಾ ನಾಯಕ್‌, ಪತ್ರಕರ್ತ ಲತೇಶ್‌ ಶೆಟ್ಟಿ ಚಾರ್ವಾಕ, ಉದ್ಯಮಿ ಪ್ರದೀಪ್‌ ಬೊಬ್ಬೆಕೇರಿ, ವಿದ್ಯಾಸಂಸ್ಥೆಯ ಆಡಳಿತ ಸಮಿತಿ ಸದಸ್ಯ ನಾಗೇಶ್‌ ರೈ ಮಾಳ, ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷ ರಮೇಶ್‌ ಬೆಟ್ಟ, ಪ್ರ. ಕಾರ್ಯದರ್ಶಿ ಸುಜಿತ್‌ ರೈ ಪಟ್ಟೆ ಎಣ್ಮೂರು, ವಿದ್ಯಾಸಂಸ್ಥೆಯ ಸಂಚಾಲಕರ ಮಾತೃಶ್ರೀ ಲಕ್ಷ್ಮೀ  ಕೆ. ರೈ ಮಾದೋಡಿ, ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಆಂಗ್ಲ ಮಾಧ್ಯಮದ ಮುಖ್ಯಗುರು ಗಿರಿ ಶಂಕರ ಸುಲಾಯ, ಕನ್ನಡ ಮಾಧ್ಯಮದ ಮುಖ್ಯ ಗುರು ಸರಸ್ವತಿ ಉಪಸ್ಥಿತರಿದ್ದರು. ಸಂಸ್ಥೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕರಾದ ಸುಬ್ರಹ್ಮಣ್ಯ ಸಿ.ಕೆ. ಐವರ್ನಾಡು, ಅನಿತಾ ಜೆ. ರೈ ನಿರೂಪಿಸಿದರು. ವಿನಯಾ ವಿ. ಶೆಟ್ಟಿ ವಂದಿಸಿದರು.

ಗಮನ ಸೆಳೆದ ಕ್ರೀಡಾಕೂಟ
ವಿದ್ಯಾರ್ಥಿಗಳಿಂದ ಆಕರ್ಷಕ ವಿವಿಧ ಬಗೆಯ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಗೋಪುರ ವೃತ್ತ, ಲೈಟು, ಜಗಳಗಳೊಂದಿಗೆ ಕುಸ್ತಿ, ತಾಲೀಮು, ಹುಲಿವೇಷಧಾರಿಗಳಿಂದ ವಿಶೇಷ ನೃತ್ಯ, ಯಕ್ಷಗಾನದ ಮೈನವಿರೇಳಿಸುವ ಅಬ್ಬರದ ವೇಷಗಳು, ಸೈಕಲ್‌ ಸವಾರಿಯಲ್ಲಿ ವೈವಿಧ್ಯಮಯ ಕಸರತ್ತು, ಕವಾಯತು, ಕರಾಟೆ, ಯೋಗ, ನೃತ್ಯ, ಕೋಲಾಟ, ಚೆಂಡೆ ವಾದ್ಯ ಮೇಳ, ಬೆಂಕಿಯಲ್ಲಿ ಸರಸ, ರಿಂಗ್‌ ನಲ್ಲಿ ಕಸರತ್ತು, ಮರಗಾಲಿನ ನೃತ್ಯ ಹಾಗೂ ಸುಡುಮದ್ದು ಪ್ರದರ್ಶನ ಆಕರ್ಷಕವಾಗಿತ್ತು.

ಟಾಪ್ ನ್ಯೂಸ್

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ree

Karnataka;ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡವೇ ಆಡಳಿತ ಭಾಷೆ ಆಗಬೇಕು: ಸಿದ್ದರಾಮಯ್ಯ

DK SHI NEW

CM ಬದಲಾವಣೆ ಚರ್ಚೆಯೇ ಇಲ್ಲ,ದಿಲ್ಲಿಗೆ ಭೇಟಿ ನೀಡುವ ಪ್ರಸಂಗವೂ ಉದ್ಭವಿಸಿಲ್ಲ:ಡಿಕೆಶಿ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.