ಮರೆತೇ ಬಿಟ್ಟರೇ ಮೊಟ್ಟೆತ್ತಡ್ಕದ ಹೆಲಿಪ್ಯಾಡ್‌?


Team Udayavani, Jan 17, 2018, 3:07 PM IST

18-Jan-15.jpg

ಪುತ್ತೂರು: ಹೆಲಿಪ್ಯಾಡ್‌ಗೆ ಮೊಟ್ಟೆತ್ತಡ್ಕದಲ್ಲಿ ಜಾಗವಿದೆ. ಆದರೆ ಅಭಿವೃದ್ಧಿ ಮಾಡಲು ಇದುವರೆಗೆ ಸಾಧ್ಯವಾಗಿಲ್ಲ. ಬದಲಿಗೆ ಪರ್ಯಾಯ ಜಾಗ ಹುಡುಕುವ ಕೆಲಸ ನಡೆಯುತ್ತಿದೆ. ಒಂದು ರೀತಿಯಲ್ಲಿ ಪುತ್ತೂರಿಗೆ ಹೆಲಿಪ್ಯಾಡ್‌ ಇದ್ದೂ ಇಲ್ಲದಂತಾಗಿದೆ.

ಮೊಟ್ಟೆತ್ತಡ್ಕ ಗೇರು ಸಂಶೋಧನ ನಿರ್ದೇಶನಾಲಯದ ಮುಂಭಾಗ ಸುಮಾರು 3 ಎಕ್ರೆ ಜಾಗವನ್ನು ಹೆಲಿಪ್ಯಾಡ್‌ಗೆಂದು ನಿಗದಿ ಮಾಡಲಾಗಿದೆ. ಹೆಲಿಪ್ಯಾಡ್‌ಗೆ ಮೀಸಲಿಡುವ ಮೊದಲು ಗೇರು ಸಂಶೋಧನ ನಿರ್ದೇಶನಾಲಯಕ್ಕೆ ಇದೇ ಜಾಗವನ್ನು ಮಂಜೂರು ಮಾಡಲಾಗಿತ್ತು. ಆದ್ದರಿಂದ ಸದ್ಯ ಜಾಗ ಯಾರ ಸ್ವಾಧೀನದಲ್ಲಿದೆ, ದಾಖಲೆ ಯಾರ ಹೆಸರಿನಲ್ಲಿವೆ ಎನ್ನುವುದೇ ದೊಡ್ಡ ಗೊಂದಲ.

1986ರಲ್ಲಿ ಗೇರು ಸಂಶೋಧನ ನಿರ್ದೇಶನಾಲಯಕ್ಕೆ ರಾಜ್ಯ ಸರಕಾರ ಈ ಜಾಗವನ್ನು ಮಂಜೂರು ಮಾಡಿತ್ತು. ಇದಕ್ಕೆ
ನಿಗದಿ ಪಡಿಸಿದ್ದ ಮೊತ್ತ ವನ್ನು ಪಾವತಿಸಿಯೂ ಆಗಿತ್ತು. ಇದಾಗಿ ಸ್ವಲ್ಪ ದಿನದಲ್ಲೇ, ಮಂಜೂರು ಮಾಡಿದ ಜಾಗ ಹೆಲಿಪ್ಯಾಡ್‌ಗೆ ಬೇಕೆಂದು ಜಿಲ್ಲಾಡಳಿತ ತಿಳಿಸಿತು. 

ಈ ಹಿನ್ನೆಲೆಯಲ್ಲಿ ಡಿಸಿಆರ್‌ ನಿರ್ದೇಶಕ ಹಾಗೂ ಜಿಲ್ಲಾಧಿಕಾರಿ ನಡುವೆ ಒಪ್ಪಂದ ನಡೆಸಲಾಯಿತು. ಪರ್ಯಾಯ ಜಾಗ
ನೀಡುವ ಷರತ್ತಿನ ಮೇಲೆ ಡಿಸಿಆರ್‌, ಜಿಲ್ಲಾಧಿಕಾರಿ ಮಾತಿಗೆ ಒಪ್ಪಿಗೆಯನ್ನು ಸೂಚಿಸಿತು. ಅಲ್ಲಿಂದ ಇಲ್ಲಿವರೆಗೆ ಕಂದಾಯ ಇಲಾಖೆ ಡಿಸಿಆರ್‌ಗಾಗಿ ಜಾಗ ಹುಡುಕುವ ಕೆಲಸದಲ್ಲೇ ನಿರತವಾಗಿದೆ. ಇದುವರೆಗೆ ಜಾಗ ದೊರಕಿಸಲು ಸಫಲವಾಗಿಲ್ಲ. ಆದ್ದರಿಂದ ಹೆಲಿಪ್ಯಾಡ್‌ ಜಾಗಕ್ಕೆ ಕನಿಷ್ಠ ಒಂದು ಬೇಲಿ ಹಾಕಿ ರಕ್ಷಿಸುವ ಕೆಲಸವೂ ನಡೆದಿಲ್ಲ. ಕೆಲ ವರ್ಷಗಳ ಹಿಂದೆ ಹೆಲಿಪ್ಯಾಡ್‌ನ‌ ಜಾಗ ಎಂಬ ನಾಮಫಲಕವಾದರೂ ಇತ್ತು. ಈಗ ಇಲ್ಲ.

ಹೀಗಿದೆ ಹೆಲಿಪ್ಯಾಡ್‌
ಪುತ್ತೂರು- ಸುಳ್ಯ ರಾಜ್ಯ ಹೆದ್ದಾರಿಯ ಮುಕ್ರಂಪಾಡಿಯಿಂದ ಕೇವಲ ಒಂದು ಕಿ.ಮೀ. ದೂರದಲ್ಲಿದೆ ಹೆಲಿಪ್ಯಾಡ್‌. ಜಾಗ
ತಮ್ಮ ಸ್ವಾಧೀನಕ್ಕೆ ಸಿಗದ ಕಾರಣ, ಡಿಸಿಆರ್‌ ಬೇಲಿ ಹಾಕಿಲ್ಲ. ಬೇರೆ ಜಾಗ ಇನ್ನೂ ನೀಡದ ಕಾರಣ ಕಂದಾಯ ಇಲಾಖೆ
ಅಭಿವೃದ್ಧಿಯನ್ನೂ ನಡೆಸಿಲ್ಲ. ಆದ್ದರಿಂದ ಕಾರು ಕಲಿಕೆಗೆ, ಆಟದ ಮೈದಾನವಾಗಿ, ವೇದಿಕೆಯಾಗಿ ಅದು ಬಳಕೆಯಾಗುತ್ತಿದೆ.

ಮಿನಿ ಏರ್‌ಪೋರ್ಟ್‌
ಇರುವ ಹೆಲಿಪ್ಯಾಡನ್ನು ಅಭಿವೃದ್ಧಿಪಡಿಸಲು ಇದುವರೆಗೆ ಸಾಧ್ಯವಾಗಿಲ್ಲ. ಹೀಗಿರುವಾಗ ಹೊಸ ಮಿನಿ ಏರ್‌ಪೋರ್ಟ್‌ಗೆ ಜಾಗ ಹುಡುಕುವ ಕೆಲಸಗಳು ನಡೆಯುತ್ತಿವೆ. ಪುತ್ತೂರಿಗೆ ಮಿನಿ ಏರ್‌ಪೋರ್ಟ್‌ ನೀಡುವಂತೆ ಶಾಸಕಿ ಶಕುಂತಳಾ ಶೆಟ್ಟಿ, ಪುತೂರಿಗೆ ಬಂದಿದ್ದ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಆದರೆ ಪುತ್ತೂರು ಪೇಟೆಯಲ್ಲೇ ಇರುವ ಹೆಲಿಪ್ಯಾಡ್‌ನ‌ಲ್ಲಿ ಮುಖ್ಯಮಂತ್ರಿಗಳು ಇಳಿಯಲು ವ್ಯವಸ್ಥೆ ಮಾಡಲಾಗಿಲ್ಲ. ಮುಖ್ಯಮಂತ್ರಿಯನ್ನು ಸ್ವಾಗತಿಸುವ ಭರದಲ್ಲಿ
ಎಲ್ಲರೂ ಈ ವಿಷಯವನ್ನು ಮರೆತೇ ಬಿಟ್ಟರು.

ಬದಲಿ ಜಾಗ
ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದಾಗ ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಮರೆತು
ಬಿಟ್ಟಂತಿದೆ. ಅಭಿವೃದ್ಧಿ ಕಾರ್ಯ ಹಾಗಿರಲಿ, ಮುಖ್ಯಮಂತ್ರಿಗಳನ್ನು ಹೆಲಿಕಾಪ್ಟರ್‌ನಿಂದ ಇಳಿಸಿದ್ದು ಫಿಲೋಮಿನಾ ಕಾಲೇಜಿನ ಆಟದ ಮೈದಾನದಲ್ಲಿ. ಇದಕ್ಕೆ ಪೂರಕವಾಗಿ, ಅಂತಾರಾಷ್ಟ್ರೀಯ ಮೈದಾನಕ್ಕೆ ಮೀಸಲಿಟ್ಟ
ಜಾಗದಲ್ಲಿ ಮಿನಿ ಏರ್‌ಪೋರ್ಟ್‌ಗಾಗಿ ಜಾಗ ಹುಡುಕುವ ಕೆಲಸ ನಡೆಯುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಅಧಿಕಾರಿ ವಲಯದಿಂದ ಸಿಗುತ್ತಿಲ್ಲ.

ಹೆಲಿಪ್ಯಾಡ್‌ ಏಕೆ ಬೇಕು?
ಐದು ತಾಲೂಕುಗಳನ್ನು ಒಂದುಗೂಡಿಸಿ ಪುತ್ತೂರನ್ನು ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡಲು ಒತ್ತಾಯ ಕೇಳಿಬರುತ್ತಿದೆ. ಉಪವಿಭಾಗ ಕೇಂದ್ರವಾಗಿಯೇ ವರ್ಷಕ್ಕೆ 3-4 ಬಾರಿ ಮುಖ್ಯಮಂತ್ರಿಯಾದಿಯಾಗಿ ಗಣ್ಯರು ಹೆಲಿಕಾಪ್ಟರ್‌ನಲ್ಲಿ ಬರುತ್ತಿದ್ದಾರೆ. ಜಿಲ್ಲಾ ಕೇಂದ್ರವಾದರೆ ಇದರ ಸಂಖ್ಯೆ ಹೆಚ್ಚಬಹುದು. ಪ್ರತಿ ಬಾರಿಯೂ ಆಟದ ಮೈದಾನವನ್ನು ಬಳಸಿಕೊಳ್ಳುವುದು ಅಭಿವೃದ್ಧಿ ದೃಷ್ಟಿಯಿಂದ ಉತ್ತಮ ಬೆಳವಣಿಗೆಯಲ್ಲ. ಹೀಗಾಗಿ, ಹೆಲಿಪ್ಯಾಡ್‌ ನಿರ್ಮಿಸಿದರೆ ಅನುಕೂಲ ಎಂಬ ಅಭಿಪ್ರಾಯವ್ಯಕ್ತವಾಗಿದೆ.

ಮನವಿ ನೀಡಲಾಗಿದೆ
ಹೆಲಿಪ್ಯಾಡ್‌ನ‌ ಜಾಗವನ್ನು ಮೊದಲು ಡಿಸಿಆರ್‌ಗೆ ಮಂಜೂರು ಮಾಡಲಾಗಿತ್ತು. ಬಳಿಕದ ಬೆಳವಣಿಗೆಯಲ್ಲಿ ಜಾಗವನ್ನು ಪುನಃ ಜಿಲ್ಲಾಧಿಕಾರಿ ಹಿಂದೆ ಕೇಳಿದರು. ಇದಕ್ಕೆ ನಮ್ಮದೇನೂ ಅಭ್ಯಂತರವಿಲ್ಲ. ಆದರೆ ನಮಗೆ ಪರ್ಯಾಯ ಜಾಗ ನೀಡಬೇಕು. ಬೇಕಿದ್ದರೆ ಈಗ ಮಂಜೂರಾಗಿರುವ ಜಾಗವನ್ನು ನಮಗೇ ನೀಡಲಿ. ಹೆಲಿಪ್ಯಾಡನ್ನು ನಾವೇ ನಿರ್ವಹಣೆ ಮಾಡುತ್ತೇವೆ. ಅಗತ್ಯಬಿದ್ದಾಗ ಬಳಕೆಗೆ ನೀಡಲಾಗುವುದು. ಈ ಬಗ್ಗೆ ಹಿಂದಿನ ಡಿಸಿಗೆ ಮನವಿ ನೀಡಲಾಗಿದೆ. ಇನ್ನೊಮ್ಮೆ ಈಗಿನ ಡಿಸಿ ಅವರ ಗಮನ ಸೆಳೆಯಲಾಗುವುದು.
ಡಾ| ಎಂ.ಜಿ. ನಾಯಕ್‌,
 ಪ್ರಭಾರ ನಿರ್ದೇಶಕ, ಗೇರು ಸಂಶೋಧನ
 ನಿರ್ದೇಶನಾಲಯ, ಮೊಟ್ಟೆತ್ತಡ್ಕ

ಗಣೇಶ್‌ ಎನ್‌. ಕಲ್ಲರ್ಪೆ 

ಟಾಪ್ ನ್ಯೂಸ್

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Fraud: ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ಹೆಸರಲ್ಲಿ ವಂಚನೆ

Fraud: ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ಹೆಸರಲ್ಲಿ ವಂಚನೆ

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.