Ullal: ಬಿಲ್ಡರ್ ನಿಂದ ಹಣ ಪಡೆದು ವಂಚನೆ; ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರ ವಿರುದ್ಧ FIR
ಲೇಔಟ್ ವ್ಯವಹಾರಕ್ಕೆ ಅಡ್ಡಿಪಡಿಸಿ ಜೀವ ಬೆದರಿಕೆ
Team Udayavani, May 29, 2024, 6:41 PM IST
ಉಳ್ಳಾಲ : ಲೇಔಟ್ ಅಬಿವೃದ್ಧಿಗೆಂದು ಬಿಲ್ಡರ್ ಓರ್ವರಿಂದ ರೂ. 86 ಲಕ್ಷ ಹಣವನ್ನು ಪಡೆದು ಕಳಪೆ ಕಾಮಗಾರಿ ನಡೆಸಿದ್ದಲ್ಲದೆ ಲೇಔಟ್ ವ್ಯವಹಾರಕ್ಕೆ ಅಡ್ಡಿಪಡಿಸಿ, ಜೀವ ಬೆದರಿಕೆಯೊಡ್ಡಿದ್ದ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಕೃತ ಬ್ಯಾಂಕೊಂದರ ಮ್ಯಾನೇಜರ್ ಸಹಿತ ನಾಲ್ವರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಯಾಂಕ್ ಮೆನೇಜರ್ ಪವನ್ ಕುಮಾರ್, ಬ್ರೋಕರ್ ಆಗಿರುವ ಅತ್ತಾವರದ ಗುರುರಾಜ್, ಸಿವಿಲ್ ಗುತ್ತಿಗೆದಾರ ಜಗದೀಶ್ ಹಾಗೂ ಅವರ ಸಹಚರ ಜಯಪ್ರಕಾಶ್ ಜೆ.ಪಿ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆಯ ವಿವರ: ಬೆಂಗಳೂರು ಮೂಲದ ಸಿ. ವೆಂಕಟೇಶ್ ಮತ್ತು ಮಹೇಶ್ ಅವರಿಗೆ ಪವನ್ ಕುಮಾರ್ ಉಳ್ಳಾಲದ ಸೂರ್ಯಕಂಡ ಎಂಬಲ್ಲಿ ಲೇಔಟ್ ನಿರ್ಮಿಸಿ ಸಾರ್ವಜನಿಕವಾಗಿ ಮಾರಾಟ ಮಾಡಲು ಜಮೀನು ಕ್ರಯಕ್ಕೆ ಕೊಡಿಸಿದ್ದು, ಲೇಔಟ್ ಡ್ರೈನೇಜ್ ವರ್ಕ್ ಇನ್ನಿತರ ದಾಖಲಾತಿಗಳ ಕೆಲಸವನ್ನು ಕ್ರಮಬದ್ಧವಾಗಿ ಮಾಡಿಕೊಡುವುದಾಗಿ ಭರವಸೆ ನೀಡಿ ಅವರಿಂದ 86 ಲಕ್ಷ ರೂ ನಗದು ಮತ್ತು ಆರ್ಟಿಜಿಎಸ್ ಮಾಡಿಸಿ 86 ಲಕ್ಷ ಹಣವನ್ನು ಪಡೆದಿದ್ದು, ಕಳಪೆ ಕಾಮಗಾರಿ ಮಾಡಿ, ದಾಖಲಾತಿಗಳನ್ನು ಸರಿಪಡಿಸದೆ ವಂಚನೆ ಎಸಗಿದ್ದಾರೆ. ಹಣವನ್ನು ವಾಪಾಸ್ ಕೇಳಿದಾಗ ಪವನ್ ಮಾಲಿಕರ ಸೈಟ್ಗಳನ್ನು ಮಾರಾಟವಾಗದಂತೆ ಸುಳ್ಳು ಅಪಪ್ರಚಾರ ಮಾಡಿದ್ದಾರೆ.
ಇದಲ್ಲದೆ ತನ್ನ ಸಹವರ್ತಿಗಳಾದ ಬ್ರೋಕರ್ ಗುರುರಾಜ್, ಸಿವಿಲ್ ಗುತ್ತಿಗೆದಾರ ಜಗದೀಶ್ ಹಾಗೂ ಅವರ ಸಹಚರ ಜಯಪ್ರಕಾಶ್ ಜೆ.ಪಿ ಅವರೊಂದಿಗೆ ಲೇಔಟ್ಗೆ ಆಗಮಿಸಿ ಲೇಔಟ್ನ ಕೆಲಸದ ಮೇಲಿದ್ದ ಪುಷ್ಪರಾಜ್, ದಕ್ಷರಾಜ್, ರಾಧಾಕೃಷ್ಣರವರಿಗೆ ಅವಾಚ್ಯ ಶಬ್ದಗಳಿಂದ ಬೈಯ್ದು ಕೆಲಸಕ್ಕೆ ತಡೆವೊಡ್ಡಿ ಹಿಡಿದು ಹಲ್ಲೆ ನಡೆಸಿ ಮಾರಕ ಆಯುಧಗಳಾದ ಪಿಕ್ಕಾಸು, ರಾಡು, ಹಾರೆಯನ್ನು ತೋರಿಸಿ ಹೆದರಿಸಿ ಜೆಸಿಬಿ ಮತ್ತು ಟ್ರಕ್ ನ್ನು ಹತ್ತಿಸಿ ಕೊಲೆಮಾಡುವುದಾಗಿ ಜೀವ ಬೆದರಿಕೆಯನ್ನು ಒಡ್ಡಿದ್ದಾರೆ ಎಂದು ಪುಷ್ಪರಾಜ್ ನೀಡಿದ ದೂರಿನಂತೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
Puttur: ಬ್ಯಾಂಕ್ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್ಪಿ ಭೇಟಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.