ಜಿ.ಪಂ., ತಾ.ಪಂ., ಮನಪಾ ಚುನಾವಣೆ ಗೆಲುವಿಗೆ ಶ್ರಮಿಸೋಣ: ಐವನ್ ಸೂಚನೆ
Team Udayavani, Jun 9, 2024, 11:10 PM IST
ಮಂಗಳೂರು: ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸಿ ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಸಹಿತ ಸ್ಥಳಿಯಾಡಳಿತ ಚುನಾವಣೆಯ ಗೆಲುವಿಗೆ ನಾವೆಲ್ಲಾ ಕಟಿಬದ್ಧರಾಗಬೇಕಿದೆ. ಪಕ್ಷವನ್ನು ಅಧಿಕಾರಕ್ಕೆ ತರಲು ಸಂಘಟನೆಯನ್ನು ಆರಂಭಿಸುವ ಮೂಲಕ ಶ್ರಮಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಹೇಳಿದರು.
ಪರಿಷತ್ ಸದಸ್ಯರಾಗಿ 2ನೇ ಬಾರಿ ಆಯ್ಕೆಯಾದ ಅವರು ಶನಿವಾರ ಮಂಗಳೂರಿನ ಪಕ್ಷದ ಕಚೇರಿಗೆ ಆಗಮಿಸಿದ ಸಂದರ್ಭ ಪಕ್ಷದ ವತಿಯಿಂದ ನೀಡಲಾದ ಸಮ್ಮಾನ ಸ್ವೀಕರಿಸಿ ಮಾತನಾಡಿದರು.
ಪಕ್ಷದ ಕಾರ್ಯಕರ್ತರು ಯಾವುದೇ ಸಮಸ್ಯೆ ಇದ್ದರೂ ನನ್ನ ಬಳಿ ಬರಬಹುದು. ಅದನ್ನು ಪಕ್ಷದೊಳಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನ್ನ ಮೇಲೆ ವಿಶ್ವಾಸವಿಟ್ಟು ಪರಿಷತ್ ಸದಸ್ಯನಾಗಿ ಆಯ್ಕೆ ಮಾಡಿದ ಪಕ್ಷದ ಹೈಕಮಾಂಡ್, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ರಾಜ್ಯಾಧ್ಯಕ್ಷರ ಸಹಿತ ಹಿತೈಷಿಗಳಿಗೆ ಕೃತಜ್ಞತೆ ಸಲ್ಲಿಸುವೆ ಎಂದರು.
ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಕಾರ್ಮಿಕ ನೇತಾರ ಕಾರ್ಯಕರ್ತರ ವಿಶ್ವಾಸಾರ್ಹ ನಾಯಕರಾಗಿರುವ ಐವನ್ ಡಿ’ಸೋಜಾ ಪಕ್ಷಕ್ಕಾಗಿ ನಿರಂತರ ಸೇವೆ, ಸಂಘಟನೆಗೆ ಶ್ರಮಿಸಿದ್ದರ ಪ್ರತಿಫಲವಾಗಿ ಶಾಸಕ ಸ್ಥಾನ ಲಭಿಸಿದೆ. ಮುಂದಿನ ದಿನಗಳಲ್ಲಿ ಸಚಿವನಾಗಿ ಜನತೆಯ ಸೇವೆ ಮಾಡುವ ಮತ್ತಷ್ಟು ಒದಗಿ ಬರಲಿ ಎಂದು ಹಾರೈಸಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಐವನ್ ಅವರು ಕಾರ್ಮಿಕ ನಾಯಕನಾಗಿ, ಕಾರ್ಯಕರ್ತರ ಬೇಕು ಬೇಡಗಳಿಗೆ ಸ್ಪಂದಿಸುವ ಮೂಲಕ ಅವರ ಮನ ಗೆದ್ದಿದ್ದಾರೆ. ಅರ್ಹವಾಗಿ ಶಾಸಕ ಸ್ಥಾನ ದೊರೆತಿದೆ ಎಂದರು.
ಮಾಜಿ ಶಾಸಕ ಜೆ.ಆರ್. ಲೋಬೋ, ಕಾಂಗ್ರೆಸ್ ಮುಖಂಡರಾದ ಮೋಹನ್ ಪಿ., ಇಬ್ರಾಹಿಂ ಕೋಡಿಜಾಲ್, ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಮಿಥುನ್ ರೈ, ಪ್ರವೀಣ್ಚಂದ್ರ ಆಳ್ವ, ಶಶಿಧರ ಹೆಗ್ಡೆ, ಕೆ. ಅಶ್ರಫ್, ಕವಿತಾ ಡಿ’ಸೋಜಾ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.