ಗಂಗನಪಳ್ಳ ಪುನಃಶ್ಚೇತನ ! 42 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ

ಆವೆ ಮಣ್ಣು ಹಾಕಲಾಗಿದೆ. ಸುತ್ತಲೂ ಪಾಟ್‌ ಅಳವಡಿಸಿ ಸುಂದರಗೊಳಿಸಲಾಗುತ್ತದೆ.

Team Udayavani, Jan 14, 2023, 12:32 PM IST

ಗಂಗನಪಳ್ಳ ಪುನಃಶ್ಚೇತನ !42 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ

ಮಹಾನಗರ: ನಗರದ ಏಕೈಕ ಬೃಹತ್‌ ಕದ್ರಿ ಪಾರ್ಕ್‌ ಒಳ -ಹೊರ ಭಾಗದಲ್ಲಿ ಅಭಿವೃದ್ಧಿ ಕಾಣುತ್ತಿದೆ. ಇದಕ್ಕೆ ಪೂರಕವಾಗಿ ಇದೀಗ ಕದ್ರಿ ಪಾರ್ಕ್‌ ಒಳಭಾಗದ ಗಂಗನಪಳ್ಳ ಪುನಃಶ್ಚೇತನಗೊಳ್ಳುತ್ತಿದೆ. ಭವಿಷ್ಯದಲ್ಲಿ ಪಾರ್ಕ್‌ನ ಗಿಡಗಳಿಗೆ ನೀರಿನ ಸಮಸ್ಯೆ ನಿವಾರಣೆಯ ಉದ್ದೇಶಕ್ಕೆ ಗಂಗನಪಳ್ಳವನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಈ ಪಳ್ಳದಲ್ಲಿ ಸುಮಾರು 30 ಲಕ್ಷ ಲೀಟರ್‌ ನೀರು ನಿಲ್ಲಿಸಲು ಯೋಜನೆ ರೂಪಿಸಲಾಗಿದೆ.

ಸುಮಾರು 42 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳು ಆರಂಭಗೊಂಡಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಪಾಳು ಬಿದ್ದಿದ್ದ ಗಂಗನಪಳ್ಳ ಅಭಿವೃದ್ಧಿಯಾಬೇಕು ಎಂಬ ಕೂಗು ಹಲವು ವರ್ಷಗಳದ್ದು, ಈ ನಿಟ್ಟಿನಲ್ಲಿ ಸ್ಮಾರ್ಟ್‌ಸಿಟಿ ಮತ್ತು ಮಂಗಳೂರು ಪಾಲಿಕೆಯಿಂದ ಅಭಿವೃದ್ಧಿಯ ಬಗ್ಗೆ ಪ್ರಸ್ತಾವವಾಗಿತ್ತೇ ವಿನಾ ಯಾವುದೇ ಮುಂದುವರಿದ ಕಾಮಗಾರಿ ನಡೆದಿರಲಿಲ್ಲ. ಇದೀಗ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಗಂಗನಪಳ್ಳ ಅಭಿವೃದ್ಧಿಗೆ ಮುಂದೆ ಬಂದಿದೆ.

ಇಲ್ಲಿನ ಕದ್ರಿಯ ಮುಖ್ಯ ಪಾರ್ಕ್‌ ನ ನಿರ್ವಹಣೆಯನ್ನು ತೋಟಗಾರಿಕೆ ಇಲಾಖೆ ನಡೆಸುತ್ತಿದೆ. ಪಾರ್ಕ್‌ಗೆ ನೀರುಣಿಸಲು ಪ್ರತೀ ದಿನ ಸುಮಾರು 2 ಲಕ್ಷ ಲೀಟರ್‌ ನೀರು ಬೇಕಾಗುತ್ತದೆ. ಈ ನೀರು ಬೆಂದೂರ್‌ವೆಲ್‌ನಿಂದ ಸರಬರಾಜು ಆಗುತ್ತದೆ.

ಇದೀಗ ಮತ್ತಷ್ಟು ಹೆಚ್ಚುವರಿ ನೀರು ನೀಡುವಂತೆ ತೋಟಗಾರಿಕಾ ಇಲಾಖೆಗೆ ಮುಡಾ ಮನವಿ ಮಾಡಿದೆ. ಸುಮಾರು 4 ಲಕ್ಷ ಲೀಟರ್‌ ನೀರು ನೀಡಿದರೆ ಹೆಚ್ಚುವರಿ 2 ಲಕ್ಷ ಲೀ. ನೀರನ್ನು ಗಂಗನಪಳ್ಳದಲ್ಲಿ ಶೇಖರಿಸಲಾಗುತ್ತದೆ. ಮೂರು ವಾರದಲ್ಲಿ ಈ ಹಳ್ಳ ತುಂಬಿಸುವ ಯೋಜನೆ ರೂಪಿಸಲಾಗಿದೆ.

ಪಳ್ಳದಲ್ಲಿ ಬಾತುಕೋಳಿ
ಗಂಗನಪಳ್ಳವನ್ನು ಸಾರ್ವಜನಿಕರಿಗೆ ಆಕರ್ಷಣೆಯಿಂದ ಕಾಣುವಂತೆ ಮಾಡುವ ಉದ್ದೇಶ ಮುಡಾದ್ದಾಗಿದೆ. ಈ ನಿಟ್ಟಿನಲ್ಲಿ ಪಳ್ಳದಲ್ಲಿ ಬಾತುಕೋಳಿಯನ್ನು ಬಿಡಲಾಗುತ್ತದೆ. ಅದೇ ರೀತಿ, ನೀರಿನಲ್ಲಿ ಬದುಕುವ ಸಸ್ಯಗಳು, ವೈವಿದ್ಯಮಯ ಮೀನುಗಳನ್ನು ಹಾಕಲಾಗುತ್ತದೆ. ಪಳ್ಳದಲ್ಲಿದ್ದ ಹೂಳು ತೆಗೆಯಲಾಗಿದ್ದು, ಮಣ್ಣು ಹಾಕಿ ಹದಗೊಳಿಸಲಾಗಿದೆ. ಕಾಂಕ್ರೀಟ್‌ ಅಳವಡಿಸುವ ಬದಲು ಆವೆ ಮಣ್ಣು ಹಾಕಲಾಗಿದೆ. ಸುತ್ತಲೂ ಪಾಟ್‌ ಅಳವಡಿಸಿ ಸುಂದರಗೊಳಿಸಲಾಗುತ್ತದೆ.

ಅಭಿವೃದ್ಧಿ ಕಾರ್ಯ ಆರಂಭ
ಹಲವು ವರ್ಷಗಳಿಂದ ಬೇಡಿಕೆಯಾಗಿದ್ದ ಗಂಗನಪಳ್ಳವನ್ನು ಮುಡಾ ಅಭಿವೃದ್ಧಿಪಡಿಸುತ್ತಿದೆ. ಈಗಾಗಲೇ ಕಾಮಗಾರಿಗಳು ಆರಂಭಗೊಂಡಿದೆ. ಗಂಗನಪಳ್ಳದಲ್ಲಿ ಸುಮಾರು 30 ಲಕ್ಷ ಲೀಟರ್‌ ನೀರು ಶೇಖರಣೆ ಮಾಡುವ ಯೋಜನೆ ಇದಾಗಿದ್ದು ಸುಮಾರು 42 ಲಕ್ಷ ರೂ.ನಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಮುಖ್ಯ ಪಾರ್ಕ್‌ನಲ್ಲಿರುವ ಕಾರಂಜಿ ಅಭಿವೃದ್ಧಿಗೂ ಆದ್ಯತೆ ನೀಡಲಾಗಿದೆ. ಈ ಎರಡೂ ಕಾಮಗಾರಿಗಳು ತಿಂಗಳೊಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
– ರವಿಶಂಕರ ಮಿಜಾರು, ಮುಡಾ ಅಧ್ಯಕ್ಷ

16 ಲಕ್ಷ ರೂ.ನಲ್ಲಿ ಕಾರಂಜಿಗೆ ಹೊಸ ರೂಪ
ಕದ್ರಿ ಪಾರ್ಕ್‌ ಮುಖ್ಯಧ್ವಾರದ ಬಳಿ ಇರುವ ಕಾರಂಜಿಗೆ ಹೊಸ ಸ್ವರೂಪ ನೀಡಲಾಗುತ್ತಿದೆ. ಈಗಾಗಲೇ ಸುಮಾರು 16 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಕೆಲಸಗಳು ಆರಂಭಗೊಂಡಿದೆ. ಈ ಕಾರಂಜಿಯನ್ನು ವೃತ್ತಾಕರದಲ್ಲಿ ರಚನೆ ಮಾಡಲಾಗಿದ್ದು, ಪಾರ್ಕ್‌ ಪ್ರವೇಶಿಸುವಾಗ ಆಕರ್ಷಕವಾಗಿ ಕಾಣಲಿದೆ. ಸುಮಾರು 1.50 ಮೀಟರ್‌ ಇಳಿಜಾರು ವ್ಯವಸ್ಥೆ ಇರಲಿದೆ.

*ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Rubber-Dec

Growers Worried: ಕುಸಿತ ಹಾದಿಯಲ್ಲಿ ರಬ್ಬರ್‌ ಧಾರಣೆ

16

Mangaluru: ಅಪಘಾತ; ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೊಲೀಸ್‌

money

Mangaluru: ಸಿಬಿಐ ಅಧಿಕಾರಿ ಹೆಸರಿನಲ್ಲಿ ಕರೆ ಮಾಡಿ 31.12 ಲಕ್ಷ ರೂ. ವಂಚನೆ

Crackers

Mangaluru: ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

Arrested: ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.