ಇನ್ನು ತ್ಯಾಜ್ಯ ವಿಂಗಡಿಸದಿದ್ದರೆ ಮನೆ ಕಸ ಸಂಗ್ರಹವೇ ಸ್ಥಗಿತ !


Team Udayavani, May 21, 2021, 4:20 AM IST

Untitled-1

ಮಹಾನಗರ: ಪಚ್ಚನಾಡಿ ತ್ಯಾಜ್ಯ ದುರಂತದಿಂದ ನ್ಯಾಯಾಲಯದ ಛಾಟಿಗೆ ಗುರಿಯಾಗಿದ್ದ ಮಂಗಳೂರು ಮಹಾನಗರ ಪಾಲಿಕೆ ಇದೀಗ ದಿಟ್ಟ ನಿರ್ಧಾರ ಕೈಗೊಂಡಿದ್ದು, ಹಸಿ ಕಸ ಮತ್ತು ಒಣ ಕಸವನ್ನು ಸಮರ್ಪಕವಾಗಿ ವಿಂಗಡನೆ ಮಾಡದಿದ್ದರೆ ಆ ಮನೆಗಳಿಂದ ಕಸ ಸಂಗ್ರಹ ಮಾಡದಿರಲು ನಿರ್ಧರಿಸಲಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಈ ನಿಯಮ ಜಾರಿಯಲ್ಲಿತ್ತಾದರೂ ಈವರೆಗೆ ಸಮರ್ಪಕವಾಗಿ ಅನುಷ್ಠಾನಕ್ಕೆ ಬಂದಿಲ್ಲ. ಪಚ್ಚನಾಡಿ ತ್ಯಾಜ್ಯ ದುರಂತದ ಬಳಿಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟು ನಿಟ್ಟಿನ ಸೂಚನೆ ನೀಡಿದ್ದು, ಈ ನಿಯಮ ಪಾಲನೆ ಮಾಡಲಾಗುತ್ತಿದೆಯೇ ಎಂಬುದರ ಬಗ್ಗೆ ನಿಗಾ ಇರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ತ್ಯಾಜ್ಯ ವಿಂಗಡಣೆ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪಾಲಿಕೆ ತೀರ್ಮಾನಿಸಿದೆ.

ಇನ್ನು ಮುಂದೆ ಮನೆಗಳಲ್ಲಿ ಕಸ ವಿಂಗಡಣೆ ಮಾಡುವಾಗ ಹಸಿ, ಒಣ ಕಸ, ಸ್ಯಾನಿಟರಿ ತ್ಯಾಜ್ಯ, ಕೋವಿಡ್‌ ತ್ಯಾಜ್ಯ ಎಂದು ವಿಭಾಗ ಮಾಡಬೇಕಾಗುತ್ತದೆ. ಹಸಿ ಕಸಗಳನ್ನು ಶುಕ್ರವಾರ ಹೊರತುಪಡಿಸಿ ಉಳಿದ ದಿನ ನೀಡಲು ಅವಕಾಶ ಇದ್ದು, ಪ್ಲಾಸ್ಟಿಕ್‌ ಚೀಲದಲ್ಲಿ ನೀಡಬಾರದು. ಬದಲಿಗೆ ಕಸದ ಬುಟ್ಟಿಯಲ್ಲಿಯೇ ನೀಡಬೇಕು. ಶುಕ್ರವಾರ ಮಾತ್ರ ಒಣ ಕಸವನ್ನು ಪ್ಲಾಸ್ಟಿಕ್‌ ಚೀಲದಲ್ಲಿ ನೀಡಲು ಅವಕಾಶ ಇದೆ. ಸ್ಯಾನಿಟರಿ ತ್ಯಾಜ್ಯ, ಕೋವಿಡ್‌ ತ್ಯಾಜ್ಯವನ್ನು ಪ್ರತ್ಯೇಕ ನಿಯಮದಂತೆ ಪ್ರತೀ ದಿನ ನೀಡಲು ಅವಕಾಶ ನೀಡಲಾಗಿದೆ.

ತರಕಾರಿ, ತರಕಾರಿ ಸಿಪ್ಪೆ, ಹಣ್ಣು-ಹಂಪಲು, ಕೊಳೆತ ಪದಾರ್ಥ, ಮೊಟ್ಟೆಯ ತ್ಯಾಜ್ಯ, ಮಾಂಸ ತ್ಯಾಜ್ಯ, ಮೀನಿನ ತ್ಯಾಜ್ಯ ಹಸಿ ಕಸವಾದರೆ, ಪೇಪರ್‌, ಗ್ಲಾಸ್‌, ಪ್ಲಾಸ್ಟಿಕ್‌, ಕಾರ್ಡ್‌ಬೋರ್ಡ್‌, ರಬ್ಬರ್‌, ಬಟ್ಟೆ, ಲೋಹ, ಆಹಾರ ಪ್ಯಾಕ್‌ ಮಾಡುವಂತಹ ವಸ್ತುಗಳು ಒಣ ಕಸದ ಪಟ್ಟಿಗೆ ಸೇರುತ್ತದೆ. ಅದೇರೀತಿ, ಸ್ಯಾನಿಟರಿ ತ್ಯಾಜ್ಯದಲ್ಲಿ ಮಕ್ಕಳು, ವಯಸ್ಕರ ಡೈಪರ್‌, ಕೂದಲು, ಉಗುರು, ಕಾಂಡಮ್‌ ಮುಂತಾದವು ಸೇರಿವೆ. ಇವುಗಳನ್ನು ಮಾಮೂಲಿ ಕಸದ ಜತೆ ವಿಂಗಡಣೆ ಮಾಡದೆ ಪ್ರತ್ಯೇಕವಾಗಿ ನೀಡಬೇಕು.

ಮಾಸ್ಕ್, ಕೋವಿಡ್‌ ತ್ಯಾಜ್ಯಕ್ಕೆ ಪ್ರತ್ಯೇಕ ನಿಯಮ ;

ಮಾಸ್ಕ್, ಗ್ಲೌಸ್‌, ಫೇಸ್‌ಶೀಲ್ಡ್‌, ಪಿಪಿಇ ಕಿಟ್‌ ಇನ್ನಿತರ ಕೋವಿಡ್‌ ಸಂಬಂಧಿತ ಬಯೋಮೆಡಿಕಲ್‌ ತ್ಯಾಜ್ಯವನ್ನು ಬೇರ್ಪಡಿಸಿ ಹಳದಿ ಬಣ್ಣದ ಎರಡು ಚದರ ಇರುವ ಚೀಲದಲ್ಲಿ ತುಂಬಿಸಿ ವಿಲೇವಾರಿ ಮಾಡಬೇಕು. ಚೀಲದ ಮೇಲೆ “ಕೋವಿಡ್‌ ತ್ಯಾಜ್ಯ’ ಎಂದು ಕಡ್ಡಾಯವಾಗಿ  ಬರೆದಿರಬೇಕು. ಕೋವಿಡ್‌ ತ್ಯಾಜ್ಯವನ್ನು ಬರೀ ಕೈಯಿಂದ ಮುಟ್ಟಬಾರದು. ಇತರ ಕಸದ ಜತೆ ಬೆರೆಸಬಾರದು. ಕೋವಿಡ್‌ ತ್ಯಾಜ್ಯವನ್ನು 48 ಗಂಟೆಗೂ ಅಧಿಕ ಕಾಲ ಸಂಗ್ರಹಿಸಿಡಬಾರದು. ವಿಲೇವಾರಿ ಮಾಡಲು ತಡವಾದಲ್ಲಿ ಚೀಲದ ಮೇಲೆ ಶೇ.1ರಷ್ಟು  ಸೋಡಿಯಂ ಹೈಪೋ ಕ್ಲೋರೈಡ್‌ ದ್ರಾವಣವನ್ನು ಸಿಂಪಡಿಸಬೇಕು. ಕೋವಿಡ್‌ ಅಲ್ಲದ ವ್ಯಕ್ತಿಗಳು ಬಳಸಿದ ಮಾಸ್ಕ್ಗಳನ್ನು ಕತ್ತರಿಸಿ, ಪೇಪರ್‌ ಕವರ್‌ನಲ್ಲಿ ಸಂಗ್ರಹಿಸಿ 72 ಗಂಟೆಗಳ ಅನಂತರ ಪ್ರತ್ಯೇಕವಾಗಿ ವಿಲೇವಾರಿ ಮಾಡಬೇಕು.

ರಸ್ತೆ ಬದಿ ಕಸ ಎಸೆದರೆ 10,000 ರೂ. ದಂಡ ! :

“ಇತ್ತೀಚಿನ ದಿನಗಳಲ್ಲಿ ನಗರದ ರಸ್ತೆ ಬದಿಗಳಲ್ಲಿ ಕಸ ಎಸೆದಿರುವುದು ಕಾಣುವುದು ಸಾಮಾನ್ಯವಾಗಿದೆ. ಈ ನಿಟ್ಟಿನಲ್ಲಿ ಮನಪಾ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ದುಬಾರಿ ದಂಡ ಪ್ರಯೋಗಕ್ಕೆ ಮುಂದಾಗಿದೆ. ಒಂದು ವೇಳೆ ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಕಸ ಎಸೆಯುವುದು/ಹಾಕುವುದು ಕಂಡುಬಂದಲ್ಲಿ ಅವರ ಮೇಲೆ 10,000 ರೂ.ಗಳ ವರೆಗೆ ಭಾರೀ ದಂಡ ವಿಧಿಸ ಲಾಗುವುದು. ಅವರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು’ ಎಂದು ಪಾಲಿಕೆ ಆಯುಕ್ತ ಅಕ್ಷಯ್‌ ಶ್ರೀಧರ್‌ ಅವರು ತಿಳಿಸಿದ್ದಾರೆ.

ಮನಪಾ ವ್ಯಾಪ್ತಿಯ ಮನೆಗಳು, ವಸತಿ ಸಮುಚ್ಚಯಗಳಿಂದ ಉತ್ಪತ್ತಿಯಾಗುವ ತಾಜ್ಯಗಳನ್ನು ಮೂಲದಲ್ಲಿಯೇ ಹಸಿ, ಒಣ ಕಸವನ್ನಾಗಿ ವಿಂಗಡಿಸಿ ವೈಜ್ಞಾನಿಕವಾಗಿ ವಿಲೇವಾರಿಗೊಳಿಸುವುದು ಕಡ್ಡಾಯ. ಈ ಕುರಿತಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೂಡ ನಿಗಾ ಇರಿಸಿದೆ. ಬೇರ್ಪಡಿಸದಿರುವ ಕಸವನ್ನು ಸಂಗ್ರಹಿಸದೆ ತಿರಸ್ಕರಿಸಲು ತೀರ್ಮಾನಿಸಲಾಗಿದೆ. ಪ್ರತೀ ಶುಕ್ರವಾರ ಒಣ, ಉಳಿದ ಎಲ್ಲ ದಿನಗಳಲ್ಲಿ ಹಸಿ ಕಸವನ್ನು ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಬೇಕು. ನಿಯಮ ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಲಾಗುವುದು.  – ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

 

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Mulki: ರೈಲಿನಲ್ಲಿ ಪ್ರಯಾಣಿಕ ಅಸ್ವಸ್ಥ; ಸಾವು

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

VENKATESH-KUMAR1

Alvas Award: ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌ಗೆ 2024ರ ‘ಆಳ್ವಾಸ್‌ ವಿರಾಸತ್‌’ ಪ್ರಶಸ್ತಿ

Suside-Boy

Kateel: ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

fraudd

Mangaluru: ನಕಲಿ ಲೆಟರ್‌ಹೆಡ್‌, ಸೀಲ್‌ ಬಳಕೆ; ಪ್ರಕರಣ ದಾಖಲು

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.