ಕುಂಟುತ್ತಾ ಸಾಗುತ್ತಿದೆ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ: ಸವಾರರಿಗೆ ಸಂಕಷ್ಟ

ರಸ್ತೆ ಬದಿಯಲ್ಲಿ ಕಬ್ಬಿಣದ ಬೃಹತ್‌ ಪೈಪ್‌; ವಾಹನ ಸಂಚಾರ ದಟ್ಟಣೆ

Team Udayavani, Oct 24, 2021, 5:36 AM IST

ಕುಂಟುತ್ತಾ ಸಾಗುತ್ತಿದೆ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ: ಸವಾರರಿಗೆ ಸಂಕಷ್ಟ

ಸುರತ್ಕಲ್‌: ಕೇಂದ್ರ ಸರಕಾರದ ಅಧೀನದಲ್ಲಿರುವ ಹೆದ್ದಾರಿ ಇಲಾಖೆ ಇದೀಗ ಇಂಧನ ಪೈಪ್‌ಲೈನ್‌ ಕಾಮ ಗಾರಿಗೆ ಅನುಮತಿ ಕೊಟ್ಟಿದ್ದು, ಕೆಲವೊಂದು ಕಾರಣಗಳಿಂದ ಕಾಮಗಾರಿ ನಿರೀಕ್ಷಿತ ವೇಗ ಪಡೆದುಕೊಂಡಿಲ್ಲ. ಇದರಿಂದಾಗಿ ನಗರ ಪ್ರದೇಶಗಳಲ್ಲಿ ಬೃಹತ್‌ ಕಬ್ಬಿಣದ ಪೈಪ್‌ಗ್ಳನ್ನು ತಂದು ಇಡಲಾಗಿದ್ದು, ಬಹುತೇಕ ಸರ್ವಿಸ್‌ ರಸ್ತೆಯಲ್ಲಿ ಓಡಾಟ ಮಾಡಲು, ಕಟ್ಟಡಗಳ ಎದುರು ವಾಹನ ನಿಲ್ಲಿಸಲೂ ಸಾಧ್ಯವಾಗುತ್ತಿಲ್ಲ. ಇದರಿಂದ ಟ್ರಾಫಿಕ್‌ ಪೊಲೀಸರಿಂದ ಹಲವಾರು ಮಂದಿ ದಂಡದ ಚೀಟಿ ಪಡೆದುಕೊಳ್ಳುವಂತಾಯಿತು.

ಹಲವು ದಿನಗಳಿಂದ ಮಳೆ ಸುರಿಯು ತ್ತಿದ್ದು, ಅಪೂರ್ಣ ಕಾಮಗಾರಿಯಿಂದಾಗಿ ರಸ್ತೆ ಇಡೀ ಕೆಸರುಮಯ ಹಾಗೂ ಗ್ಯಾಸ್‌ ಪೈಪ್‌ಲೈನ್‌ಗೆ ಅಗೆದ ಸ್ಥಳ ತಿಳಿಯದೆ ವಾಹನ ಸಿಲುಕಿಕೊಂಡು ಸವಾರರು ಪರದಾಡುತ್ತಿದ್ದಾರೆ.

ಎಂಸಿಎಫ್‌ನಿಂದ ಅನಿಲ ಪೈಪ್‌ ಲೈನ್‌ ಮೂಲ್ಕಿ ವರೆಗೆ ಹಾಕುವ ಕಾರ್ಯವನ್ನು ಗೈಲ್‌ನಿಂದ ಗುತ್ತಿಗೆ ಪಡೆದ ಖಾಸಗಿ ಕಂಪನಿಗಳು ಮಾಡುತ್ತಿವೆ. ರಾತ್ರಿ ಸಮಯ ವಾಹನ ಸಂಚಾರ, ಜನರ ಓಡಾಟ ಕಡಿಮೆ ಇರುವ ವೇಳೆ ಮಾಡಲು ಅವಕಾ ಶವಿದ್ದರೂ ಹಗಲು ಹೊತ್ತಿನಲ್ಲಿ ಮಾತ್ರ ಕೆಲಸವಾಗುತ್ತಿದೆ.

ಸಂಚಾರಕ್ಕೆ ಅಡಚಣೆ
ಈ ರಸ್ತೆಯಲ್ಲಿ ಪಕ್ಕದಲ್ಲಿಯೇ ಇಲ್ಲಿ ಪ್ರೈಮರಿ ಶಾಲೆಗಳು, ಪ್ರೌಢಶಾಲೆಗಳು, ಪ.ಪೂ., ಪದವಿ ಕಾಲೇಜುಗಳಿವೆ. ದೇವ ಸ್ಥಾನ, ಮಂದಿರ ಚರ್ಚ್‌, ಮಸೀದಿ ಗಳಿವೆ. ಶಾಲೆ ಆರಂಭವಾಗಿದ್ದು ಹಾಗಾಗಿ ಬೆಳಗ್ಗೆ, ಸಂಜೆಯ ಹೊತ್ತು ವಾಹನ ಸಂಚಾರ ದಟ್ಟಣೆ ಹೆಚ್ಚು.

ರಸ್ತೆಗೆ ತೊಂದರೆ
ಸರಿಯಾದ ಕ್ರಿಯಾ ಯೋಜನೆಯಿಲ್ಲದೆ ಪ್ರತೀ ಬಾರಿ ಪೈಪ್‌ ಲೈನ್‌ ಕಾಮಗಾರಿ ಮಾಡುವಾಗಲೂ ರಸ್ತೆಗೆ ಕಂಟಕಎದುರಾಗುತ್ತದೆ. ಸ್ಥಳಾವಕಾಶ ಕಡಿಮೆ ಇರುವ ಕಾರಣ ಕೆಲವೊಂದು ಸಲ ರಸ್ತೆಯನ್ನೇ ಅಗೆಯಬೇಕಾದ ಅನಿವಾರ್ಯ ಎದುರಾ ದಾಗ ಪೆಟ್ರೋಲ್‌ ಪೈಪ್‌ ಲೈನ್‌ ಹೋದ ಕಡೆ ಅಗೆತ ಸಾಧ್ಯವಿಲ್ಲ. ಆದರೆ ಅಗೆದ ರಸ್ತೆ ಯನ್ನು ಸರಿ ಮಾಡುವುದು ಯಾರು ಎಂಬ ಪ್ರಶ್ನೆ ಎದುರಾಗಿದೆ. ರಸ್ತೆ ಹಾಳಾದಾಗ ಜನರು ಪ್ರಶ್ನಿಸುವುದು ಪಾಲಿಕೆಯ ಆಡಳಿತವನ್ನು. ಪೈಪ್‌ ಲೈನ್‌ ಅಳವಡಿಸುವಾಗೆಲ್ಲ ಪಾಲಿಕೆಗೆ ಸಂಕಷ್ಟ ಎದುರಾಗುತ್ತದೆ.

ಇದನ್ನೂ ಓದಿ:ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಹೊಂದಾಣಿಕೆ ಇರಲಿ
ಸ್ಥಳೀಯ ಇಲಾಖೆಗಳಿಗೆ ಸಂಬಂಧಪಟ್ಟ ಕೇಂದ್ರದ ಕಂಪೆನಿಗಳು ಸಮನ್ವಯ ಸಾಧಿಸ ಬೇಕು ಪರಸ್ಪರ ಪೂರಕವಾಗಿ ಒಪ್ಪಂದ ಮಾಡಿಕೊಂಡು ಕೆಲಸ ಮಾಡಿದರೆ ಈ ಸಂಕಷ್ಟವೇ ಎದುರಾಗುವುದಿಲ್ಲ. ಇಲ್ಲವಾದರೆ ಅನುಕೂಲಕ್ಕಿಂತ ತೊಂದರೆಯೇ ಹೆಚ್ಚು.

ಲೇಸರ್‌ ಟೆಸ್ಟಿಂಗ್‌ ಅಪಾಯಕಾರಿ
ಲೇಸರ್‌ ಟೆಸ್ಟಿಂಗ್‌ ಮಾನವ ಜೀವಕ್ಕೆ ಅಪಾಯ ಕಾರಿಯಾಗಿದ್ದು, ಜನ ಸಂಚಾರ ಇರುವ ವೇಳೆ ಮಾಡುವಂತಿಲ್ಲ. ದೈಹಿಕ ನೂನ್ಯತೆ ತಂದೊಡ್ಡಬಲ್ಲ ಇದನ್ನು ಮಾಡು ವಾಗ ಐದಾರು ಮೀಟರು ದೂರ ದವರೆಗೆ ಬ್ಯಾರಿಕೇಡ್‌ ಇಟ್ಟು ಜನರ ಓಡಾಟ ನಿರ್ಬಂಧಿಸಬೇಕು. ಕುಳಾಯಿಬಳಿ ಇಂತಹ ಲೇಸರ್‌ ಟೆಸ್ಟಿಂಗ್‌ ನಡೆಯುತ್ತಿದ್ದಾಗ ಜನರೇ ನಿಲ್ಲಿಸಿ ತರಾಟೆಗೆ ತೆಗೆದುಕೊಂಡ ಘಟನೆ ಕಳೆದ ತಿಂಗಳು ನಡೆದಿದ್ದನ್ನು ಸ್ಮರಿಸಬಹುದು.

ಶೀಘ್ರ ಕಾಮಗಾರಿ ಪೂರ್ಣ ಗೊಳಿಸಲು ಕ್ರಮ
ಸುರತ್ಕಲ್‌ ಪ್ರದೇಶದ ನಗರ ಭಾಗದಲ್ಲಿ ಗೈಲ್‌ ಪೈಪ್‌ಲೈನ್‌ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಶೀಘ್ರ ಮುಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸೂಚಿಸಲಾಗುವುದು.
– ಡಾ| ರಾಜೇಂದ್ರ ಕೆ.ವಿ., ಜಿಲ್ಲಾಧಿಕಾರಿ ದ.ಕ.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.