ಗೌರಿ ಹತ್ಯೆ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ


Team Udayavani, Oct 3, 2017, 3:41 PM IST

3-Mng-12.jpg

ಉಪ್ಪಿನಂಗಡಿ : ಗೌರಿ ಲಂಕೇಶ್‌ ಅವರನ್ನು ಹತ್ಯೆಗೈದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಒತ್ತಾಯಿಸಿ ಉಪ್ಪಿನಂಗಡಿಯ ಪ್ರಗತಿಪರ ವೇದಿಕೆಯ ವತಿಯಿಂದ ಇಲ್ಲಿನ ಬಸ್‌ ನಿಲ್ದಾಣದ ಬಳಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಗೌರಿ ಲಂಕೇಶ್‌ ಹತ್ಯಾ ವಿರೋಧಿ ವೇದಿಕೆಯು ದೇಶವ್ಯಾಪಿ ಜರಗಿದ ಪ್ರತಿಭಟನೆ ನಡೆಸುತ್ತಿದ್ದು, ಅದರ ಅಂಗವಾಗಿ ನಡೆದ ಈ ಪ್ರತಿಭಟನೆಯಲ್ಲಿ ಮಾತನಾಡಿದ ಉಪ್ಪಿನಂಗಡಿ ಮಾಲೀಕ್‌ ದಿನಾರ್‌ ಜುಮಾ ಮಸೀದಿ ಅಧ್ಯಕ್ಷ ಹಾಜಿ ಮುಸ್ತಾಫಾ ಕೆಂಪಿ, ಹಿಂಸಾರಹಿತ ವಿಚಾರಧಾರೆಯ ಪ್ರತಿಪಾದಕರಾಗಿ, ಅದನ್ನು ಜೀವನದುದ್ದಕ್ಕೂ ಅಕ್ಷರಶಃ ಪಾಲಿಸಿಕೊಂಡು ಬಂದಿದ್ದ ಮಾತೃ ಹೃದಯ ಗೌರಿ ಲಂಕೇಶ್‌ರದ್ದಾಗಿತ್ತು. ಆದರೆ ಅವರು ಯಾವುದನ್ನು ಜೀವನದುದ್ದಕ್ಕೂ ವಿರೋಧಿಸಿಕೊಂಡು ಬಂದಿದ್ದರೋ ಕೊನೆಗೆ ಅದೇ ಹಿಂಸೆಗೆ ಬಲಿಯಾಗಿರುವುದು ದೇಶದ ದುರಂತ. ಕ್ರೂರ ಮನೋಸ್ಥಿತಿಯ ಹಂತಕರು ಗೌರಿಯೆಂಬ ಶರೀರವನ್ನು ಕೊಂದಿರಬಹುದು. ಆದರೆ ಅವರು ಲಕ್ಷಾಂತರ ಗೌರಿಗಳಲ್ಲಿ ಹುಟ್ಟು ಹಾಕಿದ ವಿಚಾರಧಾರೆಗಳನ್ನು ಎಂದಿಗೂ ಕೊಲ್ಲಲು ಸಾಧ್ಯವಿಲ್ಲ. ರಾಜ್ಯ ಸರಕಾರವು ಯಾವುದೇ ಒತ್ತಡಗಳಿಗೆ ಮಣಿಯದೆ ಅವರ ಹತ್ಯಾ ಆರೋಪಿಗಳನ್ನು ತತ್‌ಕ್ಷಣ ಬಂಧಿಸಿ ಕಾನೂನಿನಡಿ ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದರು.

ಬೆಳ್ತಂಗಡಿ ಯುವ ಕಾಂಗ್ರೆಸ್‌ನ ಕಾರ್ಯದರ್ಶಿ ತನ್ಸೀಫ್  ಬಿ.ಎಂ. ಮಾತನಾಡಿ, ಸಮಾನತೆ ಮತ್ತು ಸತ್ಯವನ್ನು ಪ್ರತಿಪಾದಿಸಿ, ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ಕೆಲಸ ಗೌರಿ ಲಂಕೇಶ್‌ರಿಂದಾಗಿತ್ತು. ಜನರ ಮುಗ್ಧತೆಯನ್ನು ಬಂಡವಾಳ ಮಾಡಿಕೊಂಡು ಅವರಲ್ಲಿ ಮೌಡ್ಯತೆ ಬಿತ್ತಿ ಅವರನ್ನು ಶೋಷಿಸುತ್ತಿದ್ದವರ ವಿರುದ್ಧದ ಧ್ವನಿಯಾಗಿ ಗೌರಿ ಅವರು ಇದ್ದರು. ಆರೋಪಿಗಳನ್ನು ಶೀಘ್ರ ಬಂಧಿಸಿ, ಉಗ್ರ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸಿದರು.

ಉಪ್ಪಿನಂಗಡಿ ಗ್ರಾ.ಪಂ. ಅಧ್ಯಕ್ಷ ಕೆ. ಅಬ್ದುರ್ರಹ್ಮಾನ್‌, ವರ್ತಕರ ಸಂಘದ ಕಾರ್ಯದರ್ಶಿ ಯುನಿಕ್‌ ಅಬ್ದುರ್ರಹ್ಮಾನ್‌, ಪುತ್ತೂರು ಯುವ ಕಾಂಗ್ರೆಸ್‌ ಅಧ್ಯಕ್ಷ ಯು.ಟಿ. ತೌಸೀಫ್, ಪ್ರಗತಿಪರ ವೇದಿಕೆಯ ಶಬೀರ್‌ ಕೆಂಪಿ, ಇಬ್ರಾಹೀಂ ಪಿಲಿಗೂಡು, ಶಹೀದ್‌ ನಂದಾವರ, ಅಮ್ಮಿ ಸನ್ಮಾನ್‌, ಝಬೈರ್‌ ಕೊಯಿಲ , ರಿಯಾಝ್ ಕಡವಿನ ಬಾಗಿಲು, ಅಝೀಝ್ ನಿನ್ನಿಕಲ್ಲ್ , ಆಶಿಕ್‌ ಅರಫಾ, ಆಶಿಕ್‌ ರಾಮನಗರ, ಶಲೂಲ್‌ ಯು.ಟಿ., ಇಬ್ರಾಹಿಂ ಆಚಿ ಮತ್ತಿತರರು ಪಾಲ್ಗೊಂಡಿದ್ದರು.ಪ್ರಗತಿಪರ ವೇದಿಕೆಯ ಇರ್ಷಾದ್‌ ಯು.ಟಿ. ಉಪ್ಪಿನಂಗಡಿ ಪ್ರಾಸ್ತಾವಿಕ ಮಾತುಗಳನ್ನಾಡಿ ವಂದಿಸಿದರು.

ಟಾಪ್ ನ್ಯೂಸ್

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.