“ಕಲೆಯಲ್ಲಿ  ತೊಡಗಿಸಿಕೊಳ್ಳುವುದರಿಂದ ನೆಮ್ಮದಿ’


Team Udayavani, Feb 24, 2017, 2:21 PM IST

2302rjh1.jpg

ಪರ್ಲಡ್ಕ : ಮನುಷ್ಯನಲ್ಲಿ ಯಾವುದಾದರೊಂದು ಕಲೆ ಅಡಕವಾಗಿರಬೇಕು. ಕಲೆಯಲ್ಲಿನ ತೊಡಗಿಸಿಕೊಳ್ಳುವಿಕೆ ಮನಸ್ಸಿಗೆ ಶಾಂತಿ, ನೆಮ್ಮದಿಯನ್ನು ನೀಡುತ್ತದೆ ಎಂದು ಕಲಾವಿದ ಹಾಗೂ ಮಡಂತ್ಯಾರು ಸೇಕ್ರೆಡ್‌ ಹಾರ್ಟ್‌ ಕಾಲೇಜಿನ ವಿಶ್ರಾಂತ ಸಮಾಜಶಾಸ್ತ್ರ ಪ್ರಾಧ್ಯಾಪಕ ಪ್ರೊ| ದತ್ತಾತ್ರೇಯ ರಾವ್‌ ಅವರು ಹೇಳಿದರು.

ಸಂತ ಫಿಲೋಮಿನಾ ಕಾಲೇಜಿನ ಲಲಿತ ಕಲಾ ಸಂಘದ ವತಿಯಿಂದ ಪರ್ಲಡ್ಕದಲ್ಲಿರುವ ಡಾ| ಶಿವರಾಮ ಕಾರಂತರ ಬಾಲವನದಲ್ಲಿ ಪ್ರಕೃತಿ ಮತ್ತು ಕಲೆ ಕುರಿತು ಆಯೋಜಿಸಲಾದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ ಯಾಗಿ ಅವರು ಮಾತನಾಡಿದರು.

ನಾವು ನೋಡುವುದೆಲ್ಲ ಕಲೆಯಾಗುವುದಿಲ್ಲ. ನಾವು ಯಾವುದಾದರೊಂದು ವಿಷಯವನ್ನು ಹೆಕ್ಕಿ, ಒಂದು ಚೌಕಟ್ಟಿನಲ್ಲಿ ಅಳವಡಿಸಿಕೊಂಡು ಅದರಲ್ಲಿ ಹೆಚ್ಚು ತೊಡಗಿಸಿಕೊಂಡಾಗ ಅದು ಕಲೆಯ ರೂಪ ತಾಳುತ್ತದೆ ಎಂದು ಹೇಳಿದರು.

ಮಕ್ಕಳ ವಿಜ್ಞಾನ, ಕಥೆ, ಕವನ, ನಾಟಕ, ಕಾದಂಬರಿ, ಯಕ್ಷಗಾನ ಮುಂತಾದ ಹಲವಾರು ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಯನ್ನು ಮಾಡಿದ ಡಾ| ಶಿವರಾಮ ಕಾರಂತರ ಈ ಬಾಲವನ ಪ್ರಕೃತಿ ರಮಣೀಯವಾದ ಒಂದು ಪುಣ್ಯ ಭೂಮಿಯಾಗಿದೆ. ಪ್ರಕೃತಿಯಲ್ಲಿರುವ ಮರ, ಗಿಡ, ಬಳ್ಳಿ, ಹೂ, ಹಣ್ಣು, ನದಿ, ತೊರೆ, ಕಾಲುವೆ, ಗುಡ್ಡ, ಬೆಟ್ಟ, ಸೂರ್ಯೋದಯ, ಚಂದ್ರೋದಯ, ಗಾಳಿ, ಬೆಳಕು, ಬಿಸಿಲು, ಮಳೆ, ನೆರಳು, ಹಕ್ಕಿಗಳ ಕಲರವ ಮುಂತಾದವುಗಳು ಕಲಾವಿದನಾದವನಿಗೆ ಸ್ಫೂರ್ತಿಯನ್ನು ನೀಡಬಲ್ಲುದು ಎಂದು ಹೇಳಿದ ಅವರು ಪ್ರಕೃತಿಯಂತೆ ಕವಿ ಮನಸ್ಸು ಪರಿಸರ ಗೀತೆಯನ್ನು ಹಾಡಿದರು.

ಪ್ರಕೃತಿ ಸೌಂದರ್ಯ ಆಸ್ವಾದಿಸಿ
ಅಧ್ಯಕ್ಷತೆ ವಹಿಸಿದ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ| ವಿಷ್ಣು ಭಟ್‌ ಮಾತ ನಾಡಿ, ಅರುವತ್ನಾಲ್ಕು ವಿದ್ಯೆಗಳಲ್ಲಿ ಕಲೆಗೆ ವಿಶೇಷ ಮನ್ನಣೆಯಿದೆ. ವಿದ್ಯಾರ್ಥಿ ಗಳು ಮನಮೋಹಕವಾದ ಪ್ರಕೃತಿಯ ಸೌಂದರ್ಯವನ್ನು ಆಸ್ವಾದಿಸುವ ಗುಣ ಹೊಂದಿರಬೇಕು. ಪರಿಸರ ವನ್ನು ಇಷ್ಟ ಪಡುವವರಿಗೆ ಮಾನಸಿಕ ನೆಮ್ಮದಿಯೂ ಇರುತ್ತದೆ. ಉತ್ತಮ ಕಲೆಯು ಧನವನ್ನೂ ತಂದುಕೊಡುತ್ತದೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ 40 ವಿದ್ಯಾ ರ್ಥಿಗಳು ಭಾಗವಹಿಸಿ ಚಿತ್ರಕಲೆ, ಕವನ ಗಳನ್ನು ರಚಿಸಿದರು. ಸಹ ಸಂಚಾ ಲಕಿಯರಾದ ರಕ್ಷಿತಾ ಆರ್‌.ಬಿ., ದೀಪಿಕಾ ಸನಿಲ್‌, ವಿದ್ಯಾರ್ಥಿ ಸಂಯೋಜಕಿ ಪ್ರಿಯ ಲತಾ ಎಂ. ಉಪಸ್ಥಿತರಿದ್ದರು. ಲಲಿತ ಕಲಾ ಸಂಘದ ಸಂಚಾಲಕಿ ವಾರಿಜಾ ಎಂ. ಸ್ವಾಗತಿಸಿ, ವಿದ್ಯಾರ್ಥಿ ಸಹ ಸಂಯೋ ಜಕಿ ರಕ್ಷಿತಾ ಬಿ. ಆರ್‌. ವಂದಿಸಿದರು.

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.