ಬೀಡಾಡಿ ಗೋವುಗಳಿಗೆ ದೇವಸ್ಥಾನಗಳಲ್ಲೇ ಗೋಶಾಲೆ !

ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಮಿತಿ, ಜಮೀನು ನಿಗದಿಗೆ ವರದಿ

Team Udayavani, Nov 11, 2020, 6:20 AM IST

ಬೀಡಾಡಿ ಗೋವುಗಳಿಗೆ ದೇವಸ್ಥಾನಗಳಲ್ಲೇ ಗೋಶಾಲೆ !

ಸಾಂದರ್ಭಿಕ ಚಿತ್ರ

ಮಂಗಳೂರು: ಗೋ ಸಂತತಿ ಸಂರಕ್ಷಣೆ ಹಾಗೂ ಬೆಳವಣಿಗೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಠ ಮಂದಿರ, ಸಂಘ- ಸಂಸ್ಥೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಗೋಶಾಲೆಗಳ ಜತೆಗೆ ಆಯ್ದ 25 ದೇವಸ್ಥಾನಗಳ ನೇತೃತ್ವದಲ್ಲಿ ಪ್ರತ್ಯೇಕ ಗೋಶಾಲೆ ನಿರ್ಮಿಸಲು ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಮುಂದಾಗಿದೆ.

ಗೋಶಾಲೆ ನಿರ್ಮಾಣಕ್ಕೆ ದೇವಸ್ಥಾನಗಳಿಗೆ ಜಮೀನು ಒದಗಿಸುವ ನಿಟ್ಟಿನಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತ್ಯೇಕ ಸಮಿತಿ ರಚಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ, ರಾಜ್ಯದಲ್ಲಿ “ಎ’ ದರ್ಜೆಯ ದೇವಸ್ಥಾನಗಳ ಪೈಕಿ 10 ಕೋ. ರೂ.ಗಳಿಗೂ ಮಿಕ್ಕಿ ಆದಾಯವಿರುವ ದೇವ ಸ್ಥಾನಗಳಲ್ಲಿ ಗೋಶಾಲೆ ಸಾಕಾರವಾಗಲಿದೆ. ಕರಾವಳಿಯ ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಸ್ಥಾನಗಳಲ್ಲಿ ಇದು ಸಾಕಾರಗೊಳ್ಳಲಿದೆ.

ಗೋಶಾಲೆಗಳ ಸಂಕಷ್ಟ
ಸರಕಾರ ಹೊಸದಾಗಿ ಗೋಶಾಲೆಗಳ ಆರಂಭಕ್ಕೆ ಮುಂದಾಗಿದ್ದರೂ ಸದ್ಯ ಕಾರ್ಯ ನಿರ್ವಹಿಸುತ್ತಿರುವ ಗೋಶಾಲೆಗಳ ಪೈಕಿ ಕೆಲವು ಆರ್ಥಿಕವಾಗಿ ಸಂಕಷ್ಟದಲ್ಲಿವೆ. ಸರಕಾರದ ಪ್ರಕಾರ, ಜಾನುವಾರು ನಿರ್ವಹಣಾ ವೆಚ್ಚ ಪ್ರತೀ ದಿನಕ್ಕೆ 70 ರೂ. ಆಗಿದೆ. ಇದರಲ್ಲಿ ಶೇ. 25ರಷ್ಟನ್ನು (17.50 ರೂ.) ಮಾತ್ರ ಗೋಶಾಲೆಗಳಿಗೆ ಸರಕಾರ ಸಹಾಯಧನವಾಗಿ ನೀಡುತ್ತಿದೆ.

ಗೋಶಾಲೆಯಲ್ಲಿ 400ರಷ್ಟು ದನ-ಕರುಗಳಿದ್ದರೆ ಸರಕಾರದ ಅನುದಾನ ಸಿಗುವುದು ಕೇವಲ 200ಕ್ಕೆ. ಲಾಕ್‌ಡೌನ್‌ ಬಳಿಕ ಹಣ ಹೊಂದಿಸುವುದೇ ಕಷ್ಟವಾಗುತ್ತಿದೆ.
ಅಕ್ರಮ ಸಾಗಾಟ ತಡೆದು ಪೊಲೀಸರು ವಶಪಡಿಸಿಕೊಂಡ ಗೋವುಗಳನ್ನು ಗೋಶಾಲೆ ಗಳಿಗೆ ಕಳುಹಿಸಲಾಗುತ್ತಿದೆ. ಇತ್ತೀಚೆಗೆ ಈ ಸಂಖ್ಯೆಯೂ ಏರಿಕೆಯಾಗುತ್ತಿರುವ ಹಿನ್ನೆಲೆ ಯಲ್ಲಿ ಗೋ ಶಾಲೆಯವರಿಗೆ ನಿರ್ವಹಣೆಯ ಸವಾಲು ಎದುರಾಗಿದೆ.

ಕೊಯಿಲದ ಜಾನುವಾರು ಗೋಶಾಲೆಗೆ !
ಗೋಶಾಲೆಗಳಿಗೆ ಇದೀಗ ಪುತ್ತೂರು ತಾಲೂಕಿನ ಕೊಯಿಲದ ಜಾನುವಾರು ಸಂವರ್ಧನ ಕೇಂದ್ರದಲ್ಲಿರುವ ಕೆಲವು ಜಾನುವಾರುಗಳನ್ನು ತೆಗೆದುಕೊಂಡು ಹೋಗುವ ಹೊಸ ಸವಾಲು ಎದುರಾಗಿದೆ. ಮುರ್ರಾ ಕೋಣ/ಗಂಡು ಕರು, ಸುರ್ತಿ ಕೋಣ, ಮಲೆನಾಡು ಗಿಡ್ಡ ಗಂಡು ರಾಸು, ಮಿಶ್ರತಳಿ ಗಂಡು ರಾಸುಗಳನ್ನು ನಿಯಮಿತವಾಗಿ ಎಲ್ಲ ಗೋಶಾಲೆಯವರು ಪಡೆದುಕೊಂಡು ಹೋಗುವಂತೆ ಕೇಂದ್ರದಿಂದ ಸೂಚನೆ ನೀಡಲಾಗಿದೆ. ಇದರ ನಿರ್ವಹಣೆಯನ್ನು ಗೋಶಾಲೆಯವರೇ ನೋಡಿ ಕೊಳ್ಳಬೇಕು.

ಬೀಡಾಡಿ ಗೋವುಗಳಿಗೆ ರಕ್ಷಣೆ ಹಾಗೂ ಪೊಲೀಸರು ವಶಪಡಿಸಿಕೊಂಡ ಗೋವುಗಳಿಗೆ ನೀರು, ಮೇವು ಒದಗಿಸಿಕೊಡುವ ನೆಲೆಯಲ್ಲಿ ರಾಜ್ಯದ ಆಯ್ದ 25 ದೇವಸ್ಥಾನಗಳ ನೇತೃತ್ವದಲ್ಲಿಯೇ ಗೋಶಾಲೆ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಪ್ರಕಟಿಸಲಾಗುವುದು..
– ಕೋಟ ಶ್ರೀನಿವಾಸ ಪೂಜಾರಿ, ಧಾರ್ಮಿಕ ದತ್ತಿ ಇಲಾಖೆ ಸಚಿವರು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.