ಶುಭ ಶುಕ್ರವಾರ ವಿಶೇಷ ಪ್ರಾರ್ಥನೆ, ಶಿಲುಬೆಯ ಆರಾಧನೆ


Team Udayavani, Apr 15, 2017, 3:21 PM IST

church-1.jpg

ಮಂಗಳೂರು/ಉಡುಪಿ: ಯೇಸು ಕ್ರಿಸ್ತರು ಶಿಲುಬೆಯಲ್ಲಿ ಮರಣಿಸಿದ ದಿನದ ಸ್ಮರಣಾರ್ಥ ಎ. 14ರಂದು ಕ್ರೈಸ್ತರು ಶುಭ ಶುಕ್ರವಾರವನ್ನಾಗಿ ಆಚರಿಸಿದರು. ಆ ಪ್ರಯುಕ್ತ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ, ಶಿಲುಬೆಯ ಆರಾಧನೆ ನಡೆಯಿತು. 

ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ್ದರಿಂದ ನಿಜಾರ್ಥದಲ್ಲಿ ಇದು ದುಃಖದ ದಿನ; ಆದರೆ ಯೇಸು ಕ್ರಿಸ್ತರು ಲೋಕ ಕಲ್ಯಾಣಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದರು ಎಂಬ ನಂಬಿಕೆಯ ಹಿನ್ನೆಲೆಯಲ್ಲಿ ಈ ದಿನವನ್ನು ಶುಭ ದಿನವನ್ನಾಗಿ ಕ್ರೈಸ್ತರು ಆಚರಿಸುತ್ತಾರೆ.  ಇಂದು ವಿಶೇಷವಾಗಿ ಯೇಸು ಕ್ರಿಸ್ತರಿಗೆ ಶಿಲುಬೆಯ ಮರಣ ಶಿಕ್ಷೆ ವಿಧಿಸಿದ್ದಲ್ಲಿಂದ ಮೊದಲ್ಗೊಂಡು ಅವರು ಶಿಲುಬೆಯಲ್ಲಿ ಮರಣವನ್ನಪ್ಪಿ ಅವರ ಶರೀರವನ್ನು ಸಮಾಧಿ ಮಾಡುವಲ್ಲಿ ವರೆಗಿನ 14 ಪ್ರಮುಖ ಘಟನಾವಳಿಗಳಿಗೆ ಸಂಬಂಧಿಸಿದ “ಶಿಲುಬೆಯ ಹಾದಿ ‘ (ವೇ ಆಫ್‌ ದಿ ಕ್ರಾಸ್‌) ಆಚರಣೆಯನ್ನು ಚರ್ಚ್‌ ಮತ್ತುಚರ್ಚ್‌ ಆವರಣದಲ್ಲಿ ನಡೆಸುವ ಮೂಲಕ ಯೇಸು ಕ್ರಿಸ್ತರು ಅನುಭವಿಸಿದ ಕಷ್ಟ- ಸಂಕಷ್ಟಗಳನ್ನು ಕ್ರೈಸ್ತರು ಸ್ಮರಿಸಿದರು. ಈ ದಿನವನ್ನು ಧ್ಯಾನ, ಉಪವಾಸದ ಮೂಲಕ ಕಳೆದರು.
 
ಶುಭ ಶುಕ್ರವಾರದಂದು ಚರ್ಚ್‌ಗಳಲ್ಲಿ ಘಂಟೆಗಳ ನಿನಾದ ಇರುವುದಿಲ್ಲ; ಬಲಿ ಪೂಜೆಯ ಸಂಭ್ರಮವಿಲ್ಲ. ಮೌನ ವಾತಾವರಣದಲ್ಲಿ ಪ್ರಾರ್ಥನೆ ಸಲ್ಲಿಸುವುದು ದಿನದ ವೈಶಿಷ್ಟÂ.ಚರ್ಚ್‌ಗಳಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಾರ್ಥನೆ, ಧ್ಯಾನ, ಶಿಲುಬೆಯ ಆರಾಧನೆಯಲ್ಲಿ ಭಾಗವಹಿಸಿ ಲೋಕ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
 
ಮಂಗಳೂರಿನ ಬಿಷಪ್‌ ರೆ| ಡಾ| ಅಲೋಶಿಯಸ್‌ ಪಾವ್‌É ಡಿ’ಸೋಜಾ ಅವರು ರೊಜಾ ರಿಯೋ ಕೆಥೆಡ್ರಲ್‌ನಲ್ಲಿ ಮತ್ತು ಉಡುಪಿ ಬಿಷಪ್‌ ರೆ| ಡಾ| ಜೆರಾಲ್ಡ್‌ ಐಸಾಕ್‌ ಲೋಬೋ ಅವರು ಕಲ್ಯಾಣಪುರದ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ನಡೆದ ಶಿಲುಬೆಯ ಹಾದಿ ಆಚರಣೆ ಮತ್ತು ಪ್ರಾರ್ಥನಾ ಕಾರ್ಯಕ್ರಮಗಳಲ್ಲಿ ನೇತೃತ್ವ ವಹಿಸಿದ್ದರು. ಪ್ರಧಾನ ಗುರು ಫಾ| ಜೆ.ಬಿ.ಕ್ರಾಸ್ತಾ ಮತ್ತು ಧರ್ಮಪ್ರಾಂತ್ಯದ ಎಸ್ಟೇಟ್‌ ಮ್ಯಾನೇಜರ್‌ ಫಾ| ಹೆನ್ರಿ ಮಸ್ಕರೇನ್ಹಸ್‌, ಇತರ ಗುರುಗಳು ಭಾಗವಹಿಸಿದ್ದರು. 

ಶಿಲುಬೆಯ ಹಾದಿ ಆಚರಣೆಯ ಸಂದರ್ಭದಲ್ಲಿ ವಿವಿಧ ಕಷ್ಟ ಸಂಕಷ್ಟದಲ್ಲಿರುವ ಜನರಿಗಾಗಿ, ರೈತರಿಗಾಗಿ ಮತ್ತು ಒಟ್ಟು ಲೋಕ ಕಲ್ಯಾಣಕ್ಕಾಗಿ ವಿಶೇಷವಾಗಿ ಪ್ರಾರ್ಥಿಸಲಾಯಿತು. ಸಂಜೆ ನಡೆದ ಕಾರ್ಯಕ್ರಮದಲ್ಲಿ ಯೇಸು ಕ್ರಿಸ್ತರನ್ನು ಶಿಲುಬೆಗೇರಿಸಿದ ರೀತಿ ಮತ್ತು ಮೃತ ಶರೀರವನ್ನು ಶಿಲುಬೆಯಿಂದ ಕೆಳಗಿಳಿ ಸುವ ಪ್ರಕ್ರಿಯೆಯನ್ನು ಸಾಂಕೇತಿಕವಾಗಿ ನಡೆಸಲಾಯಿತು ಹಾಗೂ ಬಳಿಕ ಅದನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುವ ಪ್ರಕ್ರಿಯೆ ನೆರವೇರಿತು. 

“ಲೋಕ ಕಲ್ಯಾಣಕ್ಕಾಗಿ ಶಿಲುಬೆಯಲ್ಲಿ ಪ್ರಾಣಾರ್ಪಣೆ ಮಾಡಿದ ಯೇಸು ಕ್ರಿಸ್ತರು ನಮ್ಮೆಲ್ಲರ ಕಷ್ಟ ಕೋಟಲೆಗಳನ್ನು ನಿವಾರಿಸಲಿ’ ಎಂದು ಬಿಷಪ್‌ ಅವರು ಪ್ರಾರ್ಥಿಸಿದರು. ಯೇಸು ಅನುಭವಿಸಿದ ಕಷ್ಟ ಸಂಕಷ್ಟಗಳ ಸ್ಮರಣೆಯು ನಮಗೆ ನಮ್ಮ ಸಂಕಷ್ಟಗಳನ್ನು ಸಹಿಸಲು, ದ್ವೇಷ ಅಸೂಯೆಗಳನ್ನು ತೊರೆದು ಸತ್ಯ ಮಾರ್ಗದಲ್ಲಿ ನಡೆಯಲು, ಹಿಂಸೆಯನ್ನು ತೊರೆದು ಅಹಿಂಸೆಯ ಹಾದಿಯಲ್ಲಿ ನಡೆ ಯಲು ಸ್ಫೂರ್ತಿಯನ್ನು ನೀಡಲಿ’ ಎಂದು ಅವರು ತಮ್ಮ ಸಂದೇಶದಲ್ಲಿ ಹೇಳಿದರು. 
 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.