ಉಭಯ ತಾಲೂಕಿನಲ್ಲಿ ಉತ್ತಮ ಮಳೆ
Team Udayavani, Jun 9, 2018, 2:25 AM IST
ಬೆಳ್ತಂಗಡಿ: ಗುರುವಾರ ರಾತ್ರಿ ಹಾಗೂ ಶುಕ್ರವಾರ ಉತ್ತಮ ಮಳೆಯಾಗಿದ್ದು, ಸೋಮಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ. ಹಲವೆಡೆ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿರುವುದರಿಂದ ಜನತೆ ಪರದಾಡುವಂತಾಗಿದೆ.
ಸಮಸ್ಯೆ ಎದುರಿಸಲು ಕ್ರಮ
ತಾ| ಆಡಳಿತ ಸಮಸ್ಯೆ ಎದುರಿಸಲು ಸಜ್ಜಾಗಿದೆ ಎಂದು ತಹಶೀಲ್ದಾರ್ ಟಿ.ಸಿ. ಹಾದಿಮನಿ ತಿಳಿಸಿದ್ದಾರೆ. ಯಾವುದೇ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಅದೇ ರೀತಿ ಸಮರ್ಪಕ ರೀತಿ ಕಾರ್ಯ ನಿರ್ವಹಿಸಲು ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಆದೇಶ ಪಾಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬಂಟ್ವಾಳ: ಮುಂಜಾಗ್ರತೆ ಸೂಚನೆ
ಬಂಟ್ವಾಳ ತಾಲೂಕಿನಾದ್ಯಂತ ಎಲ್ಲ ಶಾಲೆಗಳಿಗೂ ಜಿಲ್ಲಾಧಿಕಾರಿ ಸೂಚನೆಯಂತೆ ರಜೆ ನೀಡಲಾಗಿದೆ. ಎಲ್ಲ ಮಕ್ಕಳು ಮನೆಗೆ ಮುಟ್ಟಿದ ಬಗ್ಗೆ ಶಾಲಾ ಶಿಕ್ಷಕರು ಖಾತ್ರಿ ಮಾಡಿಕೊಳ್ಳುವಂತೆ ಸೂಚಿಸಿದ್ದು, ಶನಿವಾರವೂ ರಜೆ ನೀಡಿದ್ದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಶಿವಪ್ರಕಾಶ್ ತಿಳಿಸಿದ್ದಾರೆ. ತಾಲೂಕಿನ ವಿವಿಧೆಡೆ ಮಳೆ ಸುರಿದಿದ್ದು, ಹಾನಿ ವರದಿ ಬಂದಿಲ್ಲ ಎಂದು ಬಂಟ್ವಾಳ ತಹಶೀಲ್ದಾರ್ ವೈ. ರವಿ ತಿಳಿಸಿದ್ದಾರೆ. ರಾ.ಹೆ. ಮೆಲ್ಕಾರ್ ಸಂಚಾರ ಠಾಣೆ ರಸ್ತೆಯ ಸನಿಹ ಕೆಸರು ಹೆದ್ದಾರಿಗೆ ಮಳೆ ನೀರಿನ ಜತೆ ಹರಿದು ಬಂದಿದ್ದು ಪುರಸಭೆಯಿಂದ ತೆರವು ಕಾರ್ಯಾಚರಣೆ ನಡೆದಿದೆ. ವಿವಿಧೆಡೆ ಅಸಮರ್ಪಕ ಚರಂಡಿ ನಿರ್ಮಾಣ, ಕಸ ತೆರವು ಮಾಡದೆ ಮಳೆ ನೀರ ಹರಿವಿಗೆ ತಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.