ಅನುದಾನಿತ ಶಾಲೆಗಳ ನಿರ್ವಹಣ ವೆಚ್ಚಕ್ಕೆ ಸರಕಾರ ಬ್ರೇಕ್‌!

ಶಿಕ್ಷಕರಿಗೆ ಸ್ವಂತ ದುಡ್ಡಿನಿಂದ ಖರ್ಚು ನಿಭಾಯಿಸುವ ಪಾಡು

Team Udayavani, Dec 30, 2019, 6:21 AM IST

bg-53

ಮಹಾನಗರ: ಅನುದಾನಿತ ಶಾಲೆಗಳಿಗೆ ಸರಕಾರದಿಂದ ನೀಡಲಾಗುತ್ತಿದ್ದ ನಿರ್ವಹಣ ವೆಚ್ಚಕ್ಕೆ ಮೂರು ವರ್ಷ ಗಳಿಂದ ಬ್ರೇಕ್‌ ಹಾಕಲಾಗಿದೆ. ಇದರಿಂದ ಶಾಲೆಗಳ ನಿರ್ವಹಣೆಗೆ ಶಿಕ್ಷಕರೇ ಹಣ ತೆರಬೇಕಾಗಿ ಬಂದಿದೆ.

ರಾಜ್ಯದಲ್ಲಿ ಒಟ್ಟು 2,326 ಅನುದಾನಿತ ಪ್ರಾಥಮಿಕ ಶಾಲೆಗಳಿವೆ. ಈ ಶಾಲೆಗಳಿಗೆ ಅನುದಾನಕ್ಕೊಳಪಟ್ಟಂದಿನಿಂದ ಹಿರಿಯ ಪ್ರಾಥಮಿಕ ಶಾಲೆಗಳಿಗೆ 12 ಸಾವಿರ ರೂ. ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ 5 ಸಾವಿರ ರೂ. ನಿರ್ವಹಣ ವೆಚ್ಚವನ್ನು ಸರಕಾರ ನೀಡುತ್ತಿತ್ತು. ಆದರೆ, ಮೂರು ವರ್ಷಗಳಿಂದ ಈ ನಿರ್ವಹಣ ವೆಚ್ಚ ನೀಡುವುದನ್ನು ನಿಲ್ಲಿಸಲಾಗಿದೆ. ಅಲ್ಲದೆ, ಆಡಳಿತ ಮಂಡಳಿಗೆ ನೀಡುತ್ತಿದ್ದ ಒಟ್ಟು ಸಿಬಂದಿ ಒಟ್ಟು ವೇತನದ ಶೇ. 5ರಷ್ಟು ಹಣವನ್ನು ಕೂಡ ಎಂಟು ವರ್ಷಗಳಿಂದ ನಿಲ್ಲಿಸಲಾಗಿದೆ.

ನಿರ್ವಹಣ ಕೆಲಸಗಳೇನು?
ಶಾಲೆಯ ಪೀಠೊಪಕರಣಗಳ ದುರಸ್ತಿ, ಸುಣ್ಣ ಬಳಿಯುವುದು, ಪೈಂಟಿಂಗ್‌, ಬೆಂಚ್‌, ಡೆಸ್ಕ್, ತರಗತಿ ಅಗತ್ಯಗಳಿಗೆ ಬೇಕಾದ ಇತರ ವಸ್ತುಗಳ ಖರೀದಿ ಸಹಿತ ಶಾಲೆಯ ಸಣ್ಣಪುಟ್ಟ ಆವಶ್ಯಕತೆಗಳನ್ನು ಪೂರೈಸಲು ಈ ನಿರ್ವಹಣ ವೆಚ್ಚವನ್ನು ಅನುದಾನಿತ ಶಾಲೆಗಳಿಗೆ ನೀಡಲಾಗುತ್ತಿತ್ತು. ಆದರೆ ಇದೀಗ ಸರಕಾರ ಅನುದಾನಿತ ಶಾಲೆಗಳಿಗೆ ನಿರ್ವಹಣ ವೆಚ್ಚವನ್ನು ನೀಡದೇ ಇರುವುದರಿಂದ ಬಹುತೇಕ ಶಾಲೆಗಳಲ್ಲಿ ಶಿಕ್ಷಕರೇ ತಮ್ಮ ಕೈಯಿಂದ ಹಣವನ್ನು ಭರಿಸಿ ಶಾಲೆಗೆ ಬೇಕಾದ ಅವಶ್ಯ ವಸ್ತುಗಳನ್ನು ಖರೀದಿಸುತ್ತಿದ್ದಾರೆ. ಕೆಲವು ಶಾಲೆಗಳಲ್ಲಿ ಆಡಳಿತ ಮಂಡಳಿ ಅಥವಾ ಸ್ಥಳೀಯ ದಾನಿಗಳು ಭರಸುತ್ತಿದ್ದಾರೆ.

ಸಮವಸ್ತ್ರ, ಶೂ ಇಲ್ಲ
ಸರಕಾರಿ ಶಾಲೆಗಳ ನಿಯಮಗಳೇ ಅನುದಾನಿತ ಶಾಲೆಗಳಿಗೂ ಅನ್ವಯ ವಾಗುತ್ತದೆ. ಆದರೆ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಇರುವ ಸಮವಸ್ತ್ರ, ಶೂ ಭಾಗ್ಯ, ಕರ್ನಾಟಕ ದರ್ಶನ ಪ್ರವಾಸ ಸೌಲಭ್ಯ ಅನುದಾನಿತ ಶಾಲೆಗಳ ಮಕ್ಕಳಿಗಿಲ್ಲ. ಸರಕಾರದ ಮೇಲೆ ಸತತ ಒತ್ತಡ ಹೇರಿದ ಪರಿಣಾಮ ಮಧ್ಯಾಹ್ನದ ಬಿಸಿಯೂಟ ಮತ್ತು ಉಚಿತ ಪುಸ್ತಕ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಸಿಗುತ್ತಿದೆ ಎನ್ನುತ್ತಾರೆ ಅನುದಾನಿತ ಶಾಲಾ ಶಿಕ್ಷಕರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಅರುಣ್‌ಕುಮಾರ್‌ ಶೆಟ್ಟಿ ಮತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಕೆ.ಎಂ.ಕೆ. ಮಂಜನಾಡಿ.

ಅನುದಾನ ಗೊಂದಲ
ಅನುದಾನಿತ ಶಾಲೆಗಳಿಗೆ ಸರಕಾರದಿಂದ ಮೂರುವರ್ಷಗಳ ಹಿಂದಿನವರೆಗೂ ನಿರ್ವಹಣ ವೆಚ್ಚ ನೀಡಲಾಗುತ್ತಿತ್ತು ಎಂದು ಶಿಕ್ಷಕರ ಸಂಘದ ಪದಾಧಿಕಾರಿಗಳು ಹೇಳಿದರೆ, ಇತ್ತ ಇಲ್ಲ ಎನ್ನುತ್ತಾರೆ ಅಧಿಕಾರಿಗಳು. ಸರಕಾರಿ ಶಾಲೆಗಳಿಗೆ ಮಾತ್ರ ಅಂತಹ ಅನುದಾನ ನೀಡಲಾಗುತ್ತದೆ. ಅನುದಾನಿತ ಶಾಲಾ ಶಿಕ್ಷಕರಿಗೆ ಸರಕಾರವೇ ಸಂಬಳ ನೀಡುವುದರಿಂದ ಪ್ರತ್ಯೇಕ ನಿರ್ವಹಣ ವೆಚ್ಚವನ್ನು ಈ ಹಿಂದಿನಿಂದಲೇ ನೀಡುತ್ತಿಲ್ಲ ಎಂಬುದು ಅಧಿಕಾರಿಗಳ ಮಾತು. ಆದರೆ, ಸಾಕಷ್ಟು ಬಾರಿ ಶಿಕ್ಷಣ ಸಚಿವರನ್ನು ಭೇಟಿಯಾಗಿ ಅನುದಾನಿತ ಶಾಲೆಗಳಿಗೆ ಈ ಹಿಂದೆ ಬರುತ್ತಿದ್ದ ನಿರ್ವಹಣ ವೆಚ್ಚವನ್ನು ಮತ್ತೆ ನೀಡಬೇಕು ಎಂಬುದಾಗಿ ಅನುದಾನಿತ ಶಾಲಾ ಶಿಕ್ಷಕರ ಸಂಘದ ಪ್ರಮುಖರು ಮನವಿ ಮಾಡಿದ್ದಾರೆ.

ಸರಕಾರಿ ಶಾಲೆಗೆ ಮಾತ್ರ
ಅನುದಾನಿತ ಶಾಲೆಗಳಿಗೆ ಸರಕಾರದಿಂದ ನೇಮಕವಾದ ಶಿಕ್ಷಕರಿಗೆ ಸರಕಾರ ಸಂಬಳ ನೀಡುತ್ತದೆ. ಅಂತಹ ಶಾಲೆಗಳಿಗೆ ನಿರ್ವಹಣ ವೆಚ್ಚ ನೀಡುವುದಿಲ್ಲ. ಸರಕಾರಿ ಶಾಲೆಗಳಿಗೆ ಮಾತ್ರ ನೀಡುತ್ತದೆ.
 - ಪುರುಷೋತ್ತಮ, ಕಾರ್ಯಕ್ರಮಾಧಿಕಾರಿ, ಸರ್ವ ಶಿಕ್ಷಾ ಅಭಿಯಾನ, ಬೆಂಗಳೂರು

ರಾಜ್ಯ ಸರಕಾರದಿಂದ ಬಿಡುಗಡೆಯಾಗಿಲ್ಲ
ಅತಿಥಿ ಶಿಕ್ಷಕರಿಗೆ ವೇತನ ರಾಜ್ಯ ಸರಕಾರದಿಂದ ಇನ್ನೂ ಬಿಡುಗಡೆಯಾಗಿಲ್ಲ. ಬಿಡುಗಡೆಯಾದ ಕೂಡಲೇ ಅತಿಥಿ ಶಿಕ್ಷಕರ ಖಾತೆಗೆ ಜಮೆ ಮಾಡಲಾಗುವುದು.
– ವಾಲ್ಟರ್‌ ಡಿ’ಮೆಲ್ಲೊ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು

- ಧನ್ಯಾ ಬಾಳೆಕಜೆ

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.