ಸರಕಾರದ ನಿರ್ಲಕ್ಷ್ಯ, ಮೂಲೆ ಸೇರಿದ ಕಡತ


Team Udayavani, Mar 16, 2018, 9:59 AM IST

16-March-2.jpg

ಮಹಾನಗರ: ಮಂಗಳೂರು- ಕಾರವಾರ ಕಡಲ ತೀರದ ಮೀನುಗಾರಿಕಾ ರಸ್ತೆಯನ್ನು ದ್ವಿಪಥ ಕಾಂಕ್ರೀಟ್‌ ರಸ್ತೆಯನ್ನಾಗಿ ಪರಿವರ್ತಿಸುವ ಯೋಜನೆ ಸರಕಾರದ ಮೌನದಿಂದಾಗಿ ಕಡತದಲ್ಲಿಯೇ ಬಾಕಿಯಾಗಿದೆ. ರಾಷ್ಟ್ರೀಯ ಭದ್ರತೆ, ಮೀನುಗಾರಿಕೆ ಹಾಗೂ ಪ್ರವಾಸೋದ್ಯಮದ ದೃಷ್ಟಿಯಲ್ಲಿ ಮಹತ್ವದ ಯೋಜನೆ. ಮೂರು ಜಿಲ್ಲೆಗಳನ್ನು ಸಂಧಿಸುವ ಈ ಯೋಜನೆಗೆ ಸರಕಾರ ಮನಸ್ಸು ಮಾಡಿಲ್ಲ.

ತಲಪಾಡಿ ಗಡಿಯಿಂದ ಉತ್ತರ ಕನ್ನಡ ಜಿಲ್ಲೆಯ ಮಾಜಾಳಿವರೆಗೆ ಸುಮಾರು 387 ಕಿ.ಮೀ. ಉದ್ದದ ಮೀನುಗಾರಿಕಾ ರಸ್ತೆಯನ್ನು 780 ಕೋ.ರೂ. ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆಯನ್ನಾಗಿ ಪರಿವರ್ತಿಸುವ ಸಾಧ್ಯತಾ ವರದಿಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರವು 2012ರಲ್ಲಿ ಸರಕಾರಕ್ಕೆ ಸಲ್ಲಿಸಿತ್ತು.

ಪ್ರಾಧಿಕಾರ ಆ ಬಳಿಕ ನೆನಪಿಸುವ ಕೆಲಸ ಮಾಡಿತ್ತಾದರೂ, ಬೆನ್ನು ಹಿಡಿಯುವ ಕೆಲಸ ನಡೆಸಲಿಲ್ಲ. ಹೀಗಾಗಿ 6 ವರ್ಷಗಳಿಂದ ಈ ಕಡತ ಬೆಂಗಳೂರಿನ ಆಡಳಿತ ಕಚೇರಿಯಲ್ಲಿಯೇ ಧೂಳು ಹಿಡಿದಿದೆ. ಮಂಗಳೂರು- ಉಡುಪಿ- ಕಾರವಾರ ಕಡಲ ಕಿನಾರೆಯ ಉದ್ದಕ್ಕೂ ಪ್ರಸ್ತುತ ಮೀನುಗಾರಿಕೆ ರಸ್ತೆ ಇದ್ದು ರಾಷ್ಟ್ರೀಯ ಹೆದ್ದಾರಿಗೆ ಸಮಾನಾಂತರವಾಗಿ ಹಾಗೂ ಕೆಲವು ಕಡೆ ಕೊಂಡಿ ರಸ್ತೆಯಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ಇದು ಕಿರಿದಾಗಿದ್ದು, ಪ್ರತಿ ಮಳೆಗಾಲದಲ್ಲಿಯೂ ನೆರೆಹಾವಳಿಯಿಂದ ತೀವ್ರವಾಗಿ ಹದಗೆಡುವುದರಿಂದ ಅದನ್ನು ಉಪಯೋಗಿಸುತ್ತಿರುವ ಮೀನುಗಾರ ಕುಟುಂಬಗಳು, ಸ್ಥಳೀಯರು ಸಾಕಷ್ಟು ಸಂಕಟ ಅನುಭವಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಾಧಿಕಾರವು ಸಾಧ್ಯತಾ ವರದಿ ಸಿದ್ಧಪಡಿಸಿತ್ತು.

ದ.ಕ., ಉಡುಪಿಯ 259 ಕಿ.ಮೀ.
ದ. ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಟ್ಟು 259.96 ಕಿ.ಮೀ. ರಸ್ತೆಗೆ 610 ಕೋ. ರೂ. ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ 127 ಕಿ.ಮೀ. ರಸ್ತೆಗೆ 170 ಕೋ.ರೂ. ವೆಚ್ಚವಾಗಲಿದೆ ಎಂದು ಪ್ರಾಧಿಕಾರವು ಅಂದು ಅಂದಾಜಿಸಿ ಪ್ರಸ್ತಾವನೆ ಸಿದ್ಧಪಡಿಸಿ ಸರಕಾರಕ್ಕೆ ಕಳುಹಿಸಿತ್ತು. 

ವರದಿ ಸರಕಾರದ ಮಟ್ಟದಲ್ಲಿದೆ
ಕರಾವಳಿಯ ಕಡಲ ತೀರದಲ್ಲಿ ಕಾಂಕ್ರೀಟ್‌ ರಸ್ತೆ ನಿರ್ಮಿಸುವ ಕುರಿತ ಸಾಧ್ಯತಾ ವರದಿಯನ್ನು ಪ್ರಾಧಿಕಾರದ ವತಿಯಿಂದ ಕಳುಹಿಸಲಾಗಿದ್ದು, ಸರಕಾರದ ಪರಿಶೀಲನೆಯಲ್ಲಿದೆ.
– ಪ್ರದೀಪ್‌ ಡಿ’ಸೋಜಾ,
ಕಾರ್ಯದರ್ಶಿ, ಕರಾವಳಿ ಅಭಿವೃದ್ಧಿ
ಪ್ರಾಧಿಕಾರ

ದಿನೇಶ್‌ ಇರಾ

ಟಾಪ್ ನ್ಯೂಸ್

Hospital

Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!

BK-hariprasad

Arkavathi: 25 ವರ್ಷಗಳ ಅಕ್ರಮ ಸುಪ್ರೀಂ ನ್ಯಾಯಮೂರ್ತಿಯವರಿಂದ ತನಿಖೆಯಾಗಲಿ: ಹರಿಪ್ರಸಾದ್‌

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Yashpal1

Thirupathi Laddu: ಹಿಂದೂಗಳ ಭಾವನೆಗೆ ಧಕ್ಕೆ ಹುನ್ನಾರ: ಶಾಸಕ ಯಶ್‌ಪಾಲ್‌

Udupi-Shashti

Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ

shShiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

Shiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

election

Election Schedule: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆ ನೀತಿ ಸಂಹಿತೆ: ಮಾರ್ಗಸೂಚಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

theft-temple

Cash Theft: ಕಾಣಿಯೂರು: ದೇಗುಲದಲ್ಲಿ ಕಾಣಿಕೆ ಡಬ್ಬಿ ಕಳವು

Hospital

Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!

BK-hariprasad

Arkavathi: 25 ವರ್ಷಗಳ ಅಕ್ರಮ ಸುಪ್ರೀಂ ನ್ಯಾಯಮೂರ್ತಿಯವರಿಂದ ತನಿಖೆಯಾಗಲಿ: ಹರಿಪ್ರಸಾದ್‌

Uppinagdy-Miss

Uppinangady: ನೆಲ್ಯಾಡಿಯ ಕಾಲೇಜು ವಿದ್ಯಾರ್ಥಿ ನಾಪತ್ತೆ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.