ಆಸ್ಟ್ರೇಲಿಯಾದಲ್ಲಿ “ದಂಡ’ವೇ ಅಸ್ತ್ರ !


Team Udayavani, Apr 21, 2020, 5:30 AM IST

ಆಸ್ಟ್ರೇಲಿಯಾದಲ್ಲಿ “ದಂಡ’ವೇ ಅಸ್ತ್ರ !

ಮಂಗಳೂರು: ಕೋವಿಡ್-19 ನಿಗ್ರಹಕ್ಕೆ ಸಾಮಾಜಿಕ ಅಂತರವೇ ಬಹುಮುಖ್ಯ ಔಷಧ. ಆಸ್ಟ್ರೇಲಿಯಾದಲ್ಲಿ ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿದರೆ ನಾವು ವೈಯಕ್ತಿಕವಾಗಿ 1,652 ಡಾಲರ್‌ ದಂಡ ಪಾವತಿಸಬೇಕು. ಯಾವುದೇ ಸಂಸ್ಥೆ, ಅಂಗಡಿ ನಿಯಮ ಉಲ್ಲಂಘಿಸಿದರೆ 9,900 ಡಾಲರ್‌ ದಂಡ ಪಾವತಿಸಬೇಕು. ಆದ್ದರಿಂದ ಇಲ್ಲಿ ಸಾಮಾಜಿಕ ಅಂತರ ಸರಿಯಾಗಿ ಪಾಲನೆಯಾಗುತ್ತಿದೆ.

ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ 10 ವರ್ಷಗಳಿಂದ ನೆಲೆಸಿರುವ ಮಂಗಳೂರು ಮೂಲದ ರೋಹನ್‌ ಸಲ್ಡಾನ್ಹ ಅವರು ದೂರವಾಣಿ ಮೂಲಕ “ಉದಯವಾಣಿ’ ಜತೆಗೆ ಮಾತನಾಡಿದರು.

ಸರಕಾರದಿಂದ ವೇತನ
ರೋಹನ್‌ ಪ್ರಕಾರ ಆಸ್ಟ್ರೇಲಿಯಾ ಸರಕಾರ ಜನರ ಆರೋಗ್ಯದ ಬಗ್ಗೆ ವಿಶೇಷ ಆದ್ಯತೆ ನೀಡುತ್ತಿದ್ದು, ಕೋವಿಡ್-19 ವಿರುದ್ಧ ಸೂಕ್ತ ರೀತಿ ಕಾರ್ಯಾಚರಿಸುತ್ತಿದೆ. ಅದಕ್ಕಾಗಿ “ಜಾಬ್‌ ಕೀಪರ್‌ ಪೇಮೆಂಟ್‌’ ಎಂಬ ಸ್ಕೀಂ ಆರಂಭಿಸಿದೆ. ನೋಂದಾಯಿತ ಕಂಪೆನಿಗಳು ಬಂದ್‌ ಆಗಿರುವ ಕಾರಣ ಕೆಲಸ ಇಲ್ಲದವರ ಖಾತೆಗೆ ಎರಡು ವಾರಕ್ಕೊಮ್ಮೆ 1,500 ಡಾಲರ್‌ ಜಮೆ ಮಾಡಲಾಗುತ್ತಿದೆ. ಈ ಮೂಲಕ ಜನರು ಮನೆಯಲ್ಲಿ ಇರುವಂತೆ ಸರಕಾರ ವಿಶೇಷ ಪ್ರೋತ್ಸಾಹ ನೀಡಿದೆ’.

ರೈಲು, ಬಸ್‌ ಸಂಚಾರ
ಅನ್ಯ ದೇಶಗಳಲ್ಲಿ ಲಾಕ್‌ಡೌನ್‌ ಎಂದು ಸಾರಿಗೆ ವ್ಯವಸ್ಥೆ ಸಂಪೂರ್ಣವಾಗಿ ಸ್ಥಗಿತವಾಗಿದ್ದರೆ ಇಲ್ಲಿ ಮಾತ್ರ ಸಂಚಾರ ಮಾಮೂಲಾಗಿದೆ. ಆದರೆ ಕಂಪೆನಿ, ಕೈಗಾರಿಕೆಗಳು ಬಂದ್‌ ಆಗಿರುವ ಕಾರಣ ಪ್ರಯಾಣಿಕರ ಸಂಖ್ಯೆ ವಿರಳವಾ ಗಿದೆ. ದಿನಸಿ ಅಂಗಡಿಗಳು, ಶಾಪಿಂಗ್‌ ಸೆಂಟರ್‌ಗಳು ತೆರೆದಿವೆ.

ಆನ್‌ಲೈನ್‌ನಲ್ಲೇ ಶಿಕ್ಷಣ
ಫೆಬ್ರವರಿಯಿಂದ ನವೆಂಬರ್‌ ವರೆಗೆ 4 ಹಂತಗಳಲ್ಲಿ ಶಾಲಾ ಕಾಲೇಜು ಇರುತ್ತದೆ. ಪ್ರತಿ ಹಂತದ ನಡುವೆ 2 ವಾರ ರಜೆ ಇರುತ್ತದೆ. ಹೆಚ್ಚಿನ ಮನೆಗಳಲ್ಲಿ ಹೆತ್ತವರಿಬ್ಬರೂ ಉದ್ಯೋಗಿಗಳಾಗಿರುವ ಕಾರಣ ಆರಂಭದಲ್ಲಿ ಮಕ್ಕಳಿಗೆ ರಜೆ ನೀಡಿರಲಿಲ್ಲ. ಆದರೆ ಇತ್ತೀಚೆಗೆ ರಜೆ ನೀಡಿದ್ದು, ಆನ್‌ಲೈನ್‌ ಮೂಲಕ ಶಿಕ್ಷಣ ಮುಂದುವರಿದಿದೆ.

ಮನೆ ಬದಲು ಹೊಟೇಲ್‌ನಲ್ಲೇ ಕ್ವಾರಂಟೈನ್‌!
“ಹೋಂ ಕ್ವಾರಂಟೈನ್‌ ನಿಯಮ ಆಸ್ಟ್ರೇಲಿಯಾದಲ್ಲಿ ಜಾರಿಯಲ್ಲಿತ್ತು. ಆದರೆ ಬಹುತೇಕರು ಪಾಲನೆ ಮಾಡುತ್ತಿಲ್ಲ ಎಂಬ ಕಾರಣಕ್ಕೆ ವಿದೇಶದಿಂದ ಬಂದವರಿಗೆ ಹೊಟೇಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗುತ್ತಿದೆ. ಸದ್ಯ ಹೊಟೇಲ್‌ಗ‌ಳು ಬಂದ್‌ ಆಗಿರುವ ಕಾರಣ ಹೊಟೇಲ್‌ಗ‌ಳನ್ನೇ ಕ್ವಾರಂಟೈನ್‌ ಕೇಂದ್ರಗಳಾಗಿ ಸರಕಾರ ಬಳಕೆ ಮಾಡುತ್ತಿದೆ. ಸರಕಾರವೇ ಇದರ ಉಸ್ತುವಾರಿ ನೋಡಿಕೊಳ್ಳುತ್ತಿದೆ’ ಎನ್ನುತ್ತಾರೆ ರೋಹನ್‌.

ಸರಕಾರ ಸ್ಪಂದನೆ
ಕರ್ನಾಟಕ ಕರಾವಳಿಯ ಹಲವರು ಆಸ್ಟ್ರೇಲಿಯಾದಲ್ಲಿದ್ದಾರೆ. ಎಲ್ಲರಿಗೂ ಇಲ್ಲಿನ ಸರಕಾರ ಸೂಕ್ತವಾಗಿ ಸ್ಪಂದಿಸಿದೆ. ಸರಕಾರದ ಸೂಚನೆಗಳನ್ನು ನಾಗರಿಕರು ಚಾಚೂ ತಪ್ಪದೆ ಪಾಲಿಸುತ್ತಾರೆ.
– ರೋಹನ್‌ ಸಲ್ಡಾನ್ಹ , ಮಂಗಳೂರು

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

8(3)

Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು

5

Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.