ಮಂಗಳೂರು ವಿಶ್ವವಿದ್ಯಾನಿಲಯ: ಅಂಕಪಟ್ಟಿ ಸಿಗದೆ ಪದವಿ ವಿದ್ಯಾರ್ಥಿಗಳಿಗೆ ಸಂಕಷ್ಟ!


Team Udayavani, Feb 18, 2022, 7:22 AM IST

ಮಂಗಳೂರು ವಿಶ್ವವಿದ್ಯಾನಿಲಯ: ಅಂಕಪಟ್ಟಿ ಸಿಗದೆ ಪದವಿ ವಿದ್ಯಾರ್ಥಿಗಳಿಗೆ ಸಂಕಷ್ಟ!

ಮಂಗಳೂರು: ದೇಶ-ವಿದೇಶದ ವಿಶ್ವವಿದ್ಯಾನಿಲಯ, ಪ್ರತಿಷ್ಠಿತ ಕಾಲೇಜುಗಳಲ್ಲಿ ಉನ್ನತ ವ್ಯಾಸಂಗದ ನಿರೀಕ್ಷೆಯಲ್ಲಿರುವ ಮಂಗಳೂರು ವಿ.ವಿ. ವ್ಯಾಪ್ತಿಯ ವಿದ್ಯಾರ್ಥಿಗಳು ಅಂಕಪಟ್ಟಿ ನೀಡುವಂತೆ ದುಂಬಾಲು ಬೀಳುತ್ತಿದ್ದಾರೆ.

ವಿ.ವಿ. ವ್ಯಾಪ್ತಿಯ ಎಲ್ಲ ಫಲಿತಾಂಶಗಳನ್ನು ಪ್ರಕಟಿಸಿದ ಅನಂತರವೇ ಅಂಕಪಟ್ಟಿ ನೀಡಬೇಕು ಎಂಬ ನಿಯಮ ಇರುವುದರಿಂದ ಈ ಅಂಕಪಟ್ಟಿ ಸಮಸ್ಯೆ ಎದುರಾಗಿದೆ. ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ವಿಶೇಷ ಪರೀಕ್ಷೆಯ ಮರುಮೌಲ್ಯಮಾಪನ ಈಗಷ್ಟೇ ನಡೆಯುತ್ತಿರುವುದರಿಂದ ಅದರ ಫಲಿತಾಂಶ ಬಂದ ಬಳಿಕವಷ್ಟೇ ಅಂಕಪಟ್ಟಿ ನೀಡಬೇಕಾ ಗಿದೆ. ಮಾರ್ಚ್‌ ಒಳಗೆ ಅಂಕಪಟ್ಟಿ ಸಿಗದಿದ್ದರೆ ಬಹುತೇಕ ವಿದ್ಯಾರ್ಥಿಗಳ ವಿದೇಶಿ ವಿದ್ಯಾಭ್ಯಾಸದ ಕನಸು ಅಥವಾ ಉನ್ನತ ವ್ಯಾಸಂಗದ ಆಸೆ ಭಗ್ನವಾಗಲಿದೆ.

ಕೊರೊನಾ ಮುನ್ನ ಪರೀಕ್ಷೆ ನಡೆದ 15-20 ದಿನಗಳ ಒಳಗೆ ಅಂಕಪಟ್ಟಿ ಆಯಾ ಕಾಲೇಜಿಗೆ ಬರುತ್ತಿತ್ತು. ಆದರೆ ಕೊರೊನಾ ಬಳಿಕ ಬೇರೆ ಬೇರೆ ಸ್ತರದಲ್ಲಿ ಪರೀಕ್ಷೆ ನಡೆದ ಕಾರಣ ಅಂಕಪಟ್ಟಿ ಕೂಡ ವಿಳಂಬವಾಗುತ್ತಿದೆ. ಅಂಕಪಟ್ಟಿ ಮುದ್ರಣ ವಿಚಾರದಲ್ಲಿಯೂ ಸಮಸ್ಯೆಯಾಗಿದೆ.

ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಬಾರದು ಎಂದು ವಿ.ವಿ.ಯು ಅಂಕಪಟ್ಟಿಯನ್ನು ವೆಬ್‌ಸೈಟ್‌ನಿಂದ ಪಡೆಯಲು ಅವಕಾಶ ನೀಡಿತ್ತು. ಅದಕ್ಕೆ ಆಯಾ ಕಾಲೇಜು ಪ್ರಾಂಶುಪಾಲರ ಸಹಿ ಪಡೆದು ಉನ್ನತ ವ್ಯಾಸಂಗ ಪ್ರವೇಶ ಸಂದರ್ಭ ಬಳಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ದೇಶ-ವಿದೇಶದ ಪ್ರತಿಷ್ಠಿತ ಕಾಲೇಜು, ವಿ.ವಿ.ಗಳಿಗೆ ಇದು ಮಾನ್ಯವಾಗುವುದಿಲ್ಲ. ಅಲ್ಲಿಗೆ ಗ್ರೇಡ್‌ ಆಧಾರಿತ ವಿ.ವಿ.ಯ ಅಧಿಕೃತ ಅಂಕಪಟ್ಟಿಯೇ ಬೇಕು. ಹೀಗಾಗಿ ಸಾವಿರಾರು ವಿದ್ಯಾರ್ಥಿಗಳು ಅಧಿಕೃತ ಅಂಕಪಟ್ಟಿಗಾಗಿ ಕಾಯುತ್ತಿದ್ದಾರೆ. “ವಾರದೊಳಗೆ ಅಂಕಪಟ್ಟಿ ನೀಡಲಾಗುವುದು’ ಎಂದು ವಿ.ವಿ. ಹೇಳಿ 2 ವಾರಗಳು ಕಳೆದಿವೆ. ವಿದೇಶಿ ವಿ.ವಿ.ಗಳ ಸೀಟ್‌ಗಾಗಿ ಲಕ್ಷಾಂತರ ರೂ. ಪಾವತಿಸಿ ವಿದ್ಯಾರ್ಥಿಗಳು ಕಾಯುತ್ತಿ ದ್ದಾರೆ. ವಿಳಂಬವಾದರೆ ಹಣವನ್ನೂ ಕಳೆದುಕೊಳ್ಳುವಂತಾದೀತು ಎದು ಉಪನ್ಯಾಸಕರೊಬ್ಬರು ಹೇಳಿದ್ದಾರೆ.

ವಿಶೇಷ ಪರೀಕ್ಷೆ; ಮರುಮೌಲ್ಯಮಾಪನ ಆರಂಭ :

ಕೊರೊನಾ ಮತ್ತು ಇತರ ಕಾರಣದಿಂದ ಪದವಿ ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದವರಿಗೆ ಡಿಸೆಂಬರ್‌ ಕೊನೆಯಲ್ಲಿ ನಡೆದ ವಿಶೇಷ ಪರೀಕ್ಷೆಯ ಫಲಿತಾಂಶ ವಾರದ ಹಿಂದೆ ಪ್ರಕಟವಾಗಿದೆ. ಸುಮಾರು 30 ಸಾವಿರ ವಿದ್ಯಾರ್ಥಿಗಳ ಫಲಿತಾಂಶ ನೀಡಲಾಗಿದೆ. ಈ ಫಲಿತಾಂಶ ತಿರಸ್ಕರಿಸಿರುವ 3,011 ಮಂದಿಯ ಕೋರಿಕೆ ಮೇರೆಗೆ ಮರುಮೌಲ್ಯಮಾಪನ ಆರಂಭಿಸಲಾಗಿದೆ. ಜತೆಗೆ ಫಲಿತಾಂಶ ಬಗ್ಗೆ ಯಾವುದೇ ಸಮಸ್ಯೆ ಇದ್ದರೆ ವೆಬ್‌ಸೈಟ್‌ನಲ್ಲಿ ಹೆಲ್ಪ್ಲೈನ್‌ ಆರಂಭಿಸಲಾಗಿದೆ ಎಂದು ಪ್ರೊ| ಪಿ.ಎಲ್‌. ಧರ್ಮ “ಉದಯವಾಣಿ’ಗೆ ತಿಳಿಸಿದ್ದಾರೆ.

ಕಾಲೇಜಿನ ಸಂಪೂರ್ಣ ಫಲಿತಾಂಶ ಪ್ರಕಟಿಸಿದ ಅನಂತರವೇ ಅಂಕಪಟ್ಟಿ ನೀಡಬೇಕು ಎಂಬುದು ವಿ.ವಿ. ನಿಯಮಾವಳಿ. ವಿಶೇಷ ಪರೀಕ್ಷೆಯ ಮರುಮೌಲ್ಯಮಾಪನ 3 ದಿನಗಳೊಳಗೆ ಪೂರ್ಣವಾಗಲಿದೆ. ಅದಾದ ಬಳಿಕ 5 ಮತ್ತು 6ನೇ ಸೆಮಿಸ್ಟರ್‌ ಕೊನೆಯ ವರ್ಷದ ವಿದ್ಯಾರ್ಥಿಗಳಿಗೆ ಅಂಕಪಟ್ಟಿಯನ್ನು ಒಂದು ವಾರದೊಳಗೆ ನೀಡಲಾಗುವುದು.ಪ್ರೊ| ಪಿ.ಎಲ್‌. ಧರ್ಮ,  ಕುಲಸಚಿವರು (ಪರೀಕ್ಷಾಂಗ), ಮಂಗಳೂರು ವಿ.ವಿ.

 

ದಿನೇಶ್‌ ಇರಾ

ಟಾಪ್ ನ್ಯೂಸ್

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

Court-Symbol

Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Court-Symbol

Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

Fraud Case ಬಿಟ್‌ ಕಾಯಿನ್‌ ಹೂಡಿಕೆ ಮಾಡಿಸಿ ಲಕ್ಷಾಂತರ ವಂಚನೆ; ದೂರು

Fraud Case ಬಿಟ್‌ ಕಾಯಿನ್‌ ಹೂಡಿಕೆ ಮಾಡಿಸಿ ಲಕ್ಷಾಂತರ ವಂಚನೆ; ದೂರು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

Court-Symbol

Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.