ಗ್ರಾಮವಾಸ್ತವ್ಯದ ಮಹತ್ವವನ್ನು ಅಧಿಕಾರಿಗಳೇ ಅರಿತಿಲ್ಲ: ಡಿಸಿ ಕಿಡಿ

ಮಲವಂತಿಗೆಯಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

Team Udayavani, Dec 17, 2022, 10:11 PM IST

ಗ್ರಾಮವಾಸ್ತವ್ಯದ ಮಹತ್ವವನ್ನು ಅಧಿಕಾರಿಗಳೇ ಅರಿತಿಲ್ಲ: ಡಿಸಿ ಕಿಡಿ

ಬೆಳ್ತಂಗಡಿ: ಇಲಾಖೆಗೆ ಸಂಬಂಧಪಟ್ಟ ಮಾಹಿತಿ ಇಲ್ಲದ ಗ್ರಾಮದ ಸ್ಥಳಗಳ ಪರಿಚಯ ವಿವರ, ಸಮಸ್ಯೆಗಳ ಕುರಿತು ಅರಿವಿಲ್ಲದ ಅಧಿಕಾರಿಗಳು ಸಭೆಗಳಲ್ಲಿ ಕಾಟಾಚಾರಕ್ಕೆ ಭಾಗವಹಿಸುತ್ತಿರುವುದು ವಿಷಾದನೀಯ ಎಂದು ಜಿಲ್ಲಾಧಿಕಾರಿ ರವಿ ಕುಮಾರ್‌ ಎಂ.ಆರ್‌. ಅವರು ಅಧಿಕಾರಿಗಳ ವಿರುದ್ಧವೇ ಗರಂ ಆದರು.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕಜಕ್ಕೆ ಹಿ.ಪ್ರಾ. ಶಾಲೆಯಲ್ಲಿ ಡಿ. 17ರಂದು ಜರಗಿದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಸಾರ್ವಜನಿಕರನ್ನು ಪದೆ ಪದೇ ಕಚೇರಿಗಳಿಗೆ ಅಲೆದಾಡುವಂತೆ ಮಾಡಬೇಡಿ. ಅವರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆಯ ಜತೆ ಯೋಜನೆಗಳ ಕುರಿತು ಸರಿಯಾದ ಮಾಹಿತಿ ಒದಗಿಸುವಂತೆ ಖಡಕ್‌ ಸೂಚನೆ ನೀಡಿದರು. ಸಭೆಗೆ ಹಾಜರಾಗದ ಇಲಾಖೆ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಲವಂತಿಗೆಯಲ್ಲಿ ಕಂದಾಯ, ಅರಣ್ಯ ಇಲಾಖೆಯ ಜಾಗಗಳು ಅಕ್ಕ ಪಕ್ಕವೇ ಇರುವುದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ರೆಖ್ಯ ಗ್ರಾಮದ ಮಾದರಿಯಲ್ಲಿ ಜಿಪಿಎಸ್‌ ಆಧರಿತ ಡ್ರೋನ್‌ನಲ್ಲಿ ಸಮೀಕ್ಷೆ ನಡೆಸಿ ಪರಿಹಾರ ಕಲ್ಪಿಸಲಾಗುವುದು ಎಂದು ಪುತ್ತೂರು ಸಹಾಯಕ ಆಯುಕ್ತ ಗಿರೀಶ್‌ ನಂದನ್‌ ಹೇಳಿದರು.

ಎಲೆಚುಕ್ಕಿ ರೋಗಕ್ಕೆ ಎಕ್ರೆ ಆಧಾರದಲ್ಲಿ ಪರಿಹಾರ
ಎಲೆಚುಕ್ಕಿ ರೋಗ ವ್ಯಾಪಕವಾಗಿದ್ದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಮೀಕ್ಷೆಗೆ ಬರುವಾಗ ತೋಟಗಳಲ್ಲಿ ಅಡಿಕೆ ಮರಗಳು ಇಲ್ಲದ ಸ್ಥಿತಿ ಇದ್ದು ಸರಿಯಾದ ಮೌಲ್ಯಮಾಪನ ಸಿಗದೇ ಪರಿಹಾರಕ್ಕೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರಿದರು. ಇದಕ್ಕೆ ಎಕ್ರೆ ಆಧಾರದಲ್ಲಿ ಪರಿಹಾರ ನೀಡುವ ಯೋಜನೆ ಬಗ್ಗೆ ಸರಕಾರದ ಗಮನ ಸೆಳೆಯುವ ಕುರಿತು ಅಭಿಪ್ರಾಯ ವ್ಯಕ್ತವಾಯಿತು.

ಎಳನೀರಿನಲ್ಲಿ ಪ್ರಾ.ಆ. ಉಪಕೇಂದ್ರದಲ್ಲಿ ಆರೋಗ್ಯ ಸಹಾಯಕರು ಇಲ್ಲದೆ ಜನರು ದೂರದ ಕಳಸಕ್ಕೆ ತೆರಳುವ ಸ್ಥಿತಿ ಇದೆ ಎಂದು ಗ್ರಾಮಸ್ಥರು ದೂರಿದರು. ರವಿವಾರ ನೂತನ ಸಿಬಂದಿ ನೇಮಕ ಪ್ರಕ್ರಿಯೆ ನಡೆಯಲಿದ್ದು ಮುಂದಿನ ವಾರದೊಳಗೆ ಸಿಬಂದಿ ನೇಮಿಸಿ ಎರಡು ತಿಂಗಳ ತರಬೇತಿ ಬಳಿಕ ಕಳುಹಿಸಿಕೊಡಲಾಗುವುದು ಎಂದು ಡಿಎಚ್‌ಒ ಭರವಸೆ ನೀಡಿದರು.

ಮಲವಂತಿಗೆ ಭಾಗಕ್ಕೆ ಪಿಯು ಕಾಲೇಜು ನಿರ್ಮಾಣವಾಗಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು. ಕೊಲ್ಲಿ ಅಂಗನವಾಡಿಗೆ ಕಾರ್ಯಕರ್ತೆ ನೇಮಕ, ನರೇಗಾ ಮೂಲಕ ಗ್ರಾಮದ ಅಭಿವೃದ್ಧಿ ಕಾಮಗಾರಿ ನಡೆಸಲು, ನನೆಗುದಿಗೆ ಬಿದ್ದಿರುವ ಕಡತಗಳ ಶೀಘ್ರ ವಿಲೇವಾರಿ ಕುರಿತು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಆದೇಶ ನೀಡಿದರು.

ಗ್ರಾಮದ ಸಮಸ್ಯೆಗೆ ಒತ್ತು ನೀಡಿದ ಡಿಸಿ
ಅಕ್ರಮ ಸಕ್ರಮ ಯೋಜನೆಯಲ್ಲಿ 1992ರಲ್ಲಿ ಕಳೆಂಜ ಗ್ರಾಮದ ಮಾಣಿಗೇರಿಯ ಸುಮಾರು 40 ಕುಟುಂಬಗಳಿಗೆ ಜಾಗ ಮಂಜೂರಾಗಿದ್ದು ಅರಣ್ಯ ಇಲಾಖೆಯ ಎನ್‌ಒಸಿ ಸಿಕ್ಕರೂ ಅಗತ್ಯ ದಾಖಲೆಗಳನ್ನು ನೀಡಲು ಕಂದಾಯ ಇಲಾಖೆ ಸತಾಯಿಸುತ್ತಿರುವ ಕುರಿತು ಗ್ರಾಮಸ್ಥರು ಡಿಸಿ ಗಮನಕ್ಕೆ ತಂದು ಅಗತ್ಯ ದಾಖಲೆ ಒದಗಿಸಿದರು. ಸ್ಥಳದ ಸಮಸ್ಯೆ ಅಲ್ಲದಿದ್ದರೂ ಅಲ್ಲಿನ ಜನರ ಮನವಿ ಮೇರೆಗೆ ದಾಖಲೆ ಪರಿಶೀಲಿಸಿ ಒಂದು ವಾರದೊಳಗೆ ಹಕ್ಕುಪತ್ರ ನೀಡಲು ಆದೇಶ ನೀಡಿದರು.

ಮಲೆಕುಡಿಯ ಸಮುದಾಯ ಭವನ ಪ್ರಸ್ತಾವ
ಜಾಗದ ಸಮಸ್ಯೆಯಿಂದ ಶಿಥಿಲಾವಸ್ಥೆ ತಲುಪಿದ್ದ ದಿಡುಪೆಯ ಮಲೆಕುಡಿಯ ಸಮಾಜ ಮಂದಿರದ ಹಳೆ ಕಟ್ಟಡ ಸ್ಥಳದ ಕುರಿತು ಉದಯವಾಣಿ ಸುದಿನದಲ್ಲಿ ಬೆಳಕು ಚೆಲ್ಲಿತ್ತು. ಸ್ಥಳೀಯರು ಡಿಸಿ ಗಮನಕ್ಕೆ ತಂದಾಗ ಮಲವಂತಿಗೆ ಪಂಚಾಯತ್‌ ಕಟ್ಟಡಕ್ಕೆ ಕಾಯ್ದಿರಿಸಿ ಉಳಿದ ಸ್ಥಳವನ್ನು ಮಲೆಕುಡಿಯ ಸಮುದಾಯ ಭವನಕ್ಕೆ ಕಾಯ್ದಿರಿಸಬೇಕು. ಕುಮ್ಕಿ ಜಾಗದಲ್ಲಿರುವ ಈ ಸ್ಥಳವನ್ನು ಕುಮ್ಕಿ ರಹಿತವಾಗಿ ಸೋಮವಾರ ಆದೇಶ ಮಾಡುವುದಾಗಿ ಡಿಸಿ ಭರವಸೆ ನೀಡಿದರು.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.