ಅಂತರ್ಜಲ ಕುಸಿತ: ನಿಷ್ಕ್ರಿಯ ಕೊಳವೆಬಾವಿಗಳಿಗೆ ಪುನಶ್ಚೇತನ ಭಾಗ್ಯ

"ನರೇಗಾ' ಯೋಜನೆ; ತಲಾ 5 ನಿಷ್ಕ್ರಿಯ ಕೊಳವೆ ಬಾವಿಗಳ ಮರುಪೂರಣ

Team Udayavani, Jun 25, 2023, 7:46 AM IST

ಅಂತರ್ಜಲ ಕುಸಿತ: ನಿಷ್ಕ್ರಿಯ ಕೊಳವೆಬಾವಿಗಳಿಗೆ ಪುನಶ್ಚೇತನ ಭಾಗ್ಯ

ಮಂಗಳೂರು: ಅಂತರ್ಜಲ ಕುಸಿತ ತಡೆಯಲು ರಾಜ್ಯದ ಪ್ರತೀ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲೂ ಕನಿಷ್ಠ 5 ನಿಷ್ಕ್ರಿಯ ಕೊಳವೆಬಾವಿಗಳನ್ನು ಪುನಶ್ಚೇತನ ಗೊಳಿಸುವ ಯೋಜನೆ “ನರೇಗಾ’ ಮೂಲಕ ಕಾರ್ಯಗತಗೊಳ್ಳಲು ಸಿದ್ಧತೆ ನಡೆದಿದೆ.

ಇತ್ತೀಚಿನ ವರ್ಷಗಳಲ್ಲಿ ಕರಾವಳಿ ಜಿಲ್ಲೆಗಳೂ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನೀರಿಲ್ಲದೇ ಪಾಳು ಬೀಳುವ ಕೊಳವೆಬಾವಿಗಳ ಸಂಖ್ಯೆ ಹೆಚ್ಚುತ್ತಿದೆ. ಅನೇಕ ಕಡೆ ಕೊಳವೆಬಾವಿಗಳೇ ಗ್ರಾ.ಪಂ.ಗಳ ನೀರಿನ ಮೂಲ ಗಳೂ ಆಗಿವೆ. ಆದರೆ ಅಂತ ರ್ಜಲ ಮಟ್ಟದ ತೀವ್ರ ಕುಸಿತ ದಿಂದಾಗಿ ನೀರಿಗೆ ಬರ ಎದು ರಾ ಗಿದೆ. ಈ ಹಿನ್ನೆಲೆಯಲ್ಲಿ ಅಂತಹ ಕೊಳವೆಬಾವಿ ಗಳ ಪುನಶ್ಚೇತನ ಈ ಯೋಜನೆಯ ಉದ್ದೇಶ.

ಒಂದು ಕೊಳವೆಬಾವಿ ಪುನಶ್ಚೇತನಕ್ಕೆ ಅಂದಾಜು ವೆಚ್ಚ 82 ಸಾವಿರ ರೂ. ನಿಗದಿಯಾಗಿದ್ದು ಇದನ್ನು “ನರೇಗಾ(ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ಮೂಲಕವೇ ಭರಿಸಲಾಗುತ್ತದೆ. ಒಂದು ವೇಳೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್‌ಗೆ ಸೇರಿದ 5 ನಿಷ್ಕ್ರಿಯ ಕೊಳವೆ ಬಾವಿಗಳಿಲ್ಲದಿದ್ದರೆ ಖಾಸಗಿ ಕೊಳವೆಬಾವಿಗಳನ್ನೂ ಪರಿಗಣಿಸ ಲಾಗುತ್ತದೆ. ಇದು ಸುಮಾರು 80 ಮಾನವ ದಿನಗಳನ್ನು ಒಳಗೊಂಡಿದ್ದು, ಮಳೆನೀರನ್ನು ವೈಜ್ಞಾನಿಕ ರೀತಿಯಲ್ಲಿ ವ್ಯವಸ್ಥಿತ ವಾಗಿ ಕೊಳವೆಬಾವಿ ಪರಿಸರದಲ್ಲಿ ಮರುಪೂರಣ ಮಾಡಲಾಗುತ್ತದೆ.

ದ.ಕ., ಉಡುಪಿಯಲ್ಲಿ 1,890
ದ.ಕ. ಜಿಲ್ಲೆಯಲ್ಲಿ 223 ಮತ್ತು ಉಡುಪಿ ಜಿಲ್ಲೆಯಲ್ಲಿ 155 ಗ್ರಾ.ಪಂ.ಗಳಿದ್ದು ತಲಾ 5ರಂತೆ ದ.ಕ. ಜಿಲ್ಲೆಯಲ್ಲಿ ಒಟ್ಟು 1,115 ಮತ್ತು ಉಡುಪಿ ಜಿಲ್ಲೆಯಲ್ಲಿ 775 ಕೊಳವೆಬಾವಿಗಳಿಗೆ ಕಾಯಕಲ್ಪ ಸಿಗುವ ಸಾಧ್ಯತೆ ಇದೆ. ಎರಡು ವರ್ಷಗಳ ಹಿಂದೆ ದ.ಕ. ಜಿಲ್ಲೆಯಲ್ಲಿ ಸುಮಾರು 600 ಹಾಗೂ ಉಡುಪಿ ಜಿಲ್ಲೆಯಲ್ಲಿ ಸುಮಾರು 400 ನಿಷ್ಕ್ರಿಯ ಕೊಳವೆ ಬಾವಿಗಳನ್ನು ಗುರುತಿಸಲಾಗಿತ್ತು. ಪ್ರಸ್ತುತ ಈ ಸಂಖ್ಯೆ ಹೆಚ್ಚಾಗಿರುವ ಸಾಧ್ಯತೆ ಇದ್ದು, ನಿಖರವಾಗಿ ಗುರುತಿಸಲು ಸೂಚಿಸಲಾಗಿದೆ. ನೀರಿನ ಲಭ್ಯತೆಯೇ ಇರದ ಕೊಳವೆಬಾವಿಗಳ ಬದಲು ಬೇಸಗೆಯ ಎರಡು-ಮೂರು ತಿಂಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿತ ಕಾಣುವ ಕೊಳವೆ ಬಾವಿಗಳನ್ನು ಪರಿಗಣಿಸಲಾಗುತ್ತಿದೆ.

ಪರಿಣಾಮ ಪರಿಶೀಲನೆ
ಇದುವರೆಗೆ ಗ್ರಾ.ಪಂ.ಗಳ ಪ್ರಸ್ತಾವ ಪ್ರಕಾರ ನರೇಗಾದಡಿ ಕೊಳವೆಬಾವಿಗಳ ಪುನಶ್ಚೇತನ ಕಾಮಗಾರಿ ನಡೆಸಲಾಗುತ್ತಿತ್ತು. ಆದರೆ ಈ ಬಾರಿ ಕನಿಷ್ಠ 5 ಕೊಳವೆಬಾವಿಗಳ ಪುನಶ್ಚೇತನಕ್ಕೆ ನಿರ್ಧರಿಸಲಾಗಿದೆ. 2021-22 ಹಾಗೂ 2022-23ರಲ್ಲಿ ಉಡುಪಿ ಜಿಲ್ಲೆಯಲ್ಲಿ 71 ಹಾಗೂ ದ.ಕ. ಜಿಲ್ಲೆಯಲ್ಲಿ 95 ನಿಷ್ಕ್ರಿಯ ಕೊಳವೆಬಾವಿಗಳನ್ನು ಪುನಶ್ಚೇತನಗೊಳಿಸಲಾಗಿತ್ತು. ಇವುಗಳಲ್ಲಿ ಕೆಲವೆಡೆ ಅಂತರ್ಜಲ ಪ್ರಮಾಣ ಏರಿಕೆಯಾಗಿದೆ. ಕರಾವಳಿ ಭಾಗದ ಮಣ್ಣಿನ ಸ್ವರೂಪ, ಕೊಳವೆಬಾವಿ ಬಳಿ ಕಾಮಗಾರಿಗೆ ಸೂಕ್ತ ಸ್ಥಳ ಹೊಂದಿಸುವುದೇ ದೊಡ್ಡ ಸವಾಲು ಎನ್ನುತ್ತಾರೆ ಅಧಿಕಾರಿಗಳು.

ಅಂತರ್ಜಲ ಹೆಚ್ಚಳಕ್ಕೆ ಕೊಳವೆಬಾವಿ ಪುನಶ್ಚೇತನ ಕಾಮಗಾರಿ ಅನುಷ್ಠಾನಕ್ಕೆ ವೇಗ ಒದಗಿಸಿದ್ದು, ನರೇಗಾ ವತಿಯಿಂದ ಕೈಗೊಳ್ಳಲಾಗುತ್ತಿದೆ. ಹಲವೆಡೆ ಯಶಸ್ವಿಯಾಗಿದ್ದು, ಈ ಬಾರಿ ಒಂದು ಗ್ರಾ.ಪಂ.ನಿಂದ ತಲಾ 5 ನಿಷ್ಕ್ರಿಯ ಕೊಳವೆ ಬಾವಿ ಗುರುತಿಸಿ ಪುನಶ್ಚೇತನಗೊಳಿಸಲಾಗುತ್ತಿದೆ.
– ಆನಂದ ಕುಮಾರ್‌, ಉಪಕಾರ್ಯದರ್ಶಿ, ದ.ಕ. ಜಿ.ಪಂ.
– ಪ್ರಸನ್ನಎಚ್‌., ಜಿ.ಪಂ. ಸಿಇಒ, ಉಡುಪಿ

– ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.