ಗಿಡಮರ ಬೆಳೆಸಿ, ಪರಿಸರ ಉಳಿವಿಗೆ ಶ್ರಮಿಸಿ: ಶ್ರೀಧರ್
Team Udayavani, Jul 7, 2017, 3:45 AM IST
ಜಪ್ಪಿನಮೊಗರು: ಪ್ರಸ್ತುತ ನಮ್ಮ ಪರಿಸರವು ಬಹಳ ಮಾಲಿನ್ಯದಿಂದ ಕೂಡಿದ್ದು, ಪರಿಸರವನ್ನು ರಕ್ಷಿಸಲು ಪಣ ತೊಡಬೇಕಾಗಿದೆ. ಪರಿಸರ ಉಳಿಸಿ ಗಿಡಗಳನ್ನು ಬೆಳೆಸಿ ನೀರನ್ನು ಸಂರಕ್ಷಿಸುವುದು ನಮೆಲ್ಲರ ಕರ್ತವ್ಯವಾಗಿದೆ. ಪ್ರತಿಯೊಂದು ಮನೆಯವರು ಇಂತಹ ವನಮಹೋತ್ಸವದಲ್ಲಿ ಭಾಗವಹಿಸಿ ಸಸಿಗಳನ್ನು ಪಡೆದು ಬೆಳೆಸಿ ಪರಿಸರ ಉಳಿ ಸಲು ತಮ್ಮ ಕೊಡುಗೆ ನೀಡಬೇಕು ಎಂದು ಜಿಲ್ಲಾ ಅರಣ್ಯಾಧಿಕಾರಿ ಶ್ರೀಧರ್ ಹೇಳಿದರು.
ಅವರು ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ವತಿಯಿಂದ ಗುರು ಮಂದಿರದಲ್ಲಿ ಜರಗಿದ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರಿಸರದ ಅಮೂಲ್ಯ ಸಂಪತ್ತು ಗಳಲ್ಲಿ ಮರಗಿಡಗಳಿಗೆ ಬಹಳ ಪ್ರಾಮುಖ್ಯ ವಿದೆ. ಹೆಚ್ಚಿನ ಮರಗಳು ಹಾಗೂ ಸಸ್ಯಗಳು ಔಷಧೀಯ ಗುಣಗಳನ್ನು ಹೊಂದಿದ್ದು, ಅವುಗಳನ್ನು ಬೆಳೆಸಿದಾಗ ಮಾತ್ರ ಅವುಗಳ ಪ್ರಾಮುಖ್ಯವನ್ನು ತಿಳಿಯಬಹುದು. ಇಂದಿನ ಪೀಳಿಗೆಗೆ ಇದನ್ನು ತಿಳಿಯಪಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.
ಗುರು ಮಂದಿರದ ಆವರಣ ಮತ್ತು ಜಪ್ಪಿನಮೊಗರು ಕಂರ್ಭಿಸ್ಥಾನದ ಕಂರ್ಭಿ ಕೆರೆಯ ಪರಿಸರದಲ್ಲಿ ಸಸಿಗಳನ್ನು ನೆಡಲಾಯಿತು ಹಾಗೂ ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸಲಾಯಿತು.
ಬ್ರಹ್ಮಶೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಜೆ. ದಿನೇಶ್ ಅಂಚನ್ ಅಧ್ಯಕ್ಷತೆ ವಹಿಸಿದ್ದರು.
ಮಹಾನಗರಪಾಲಿಕೆಯ ಸ್ಥಳೀಯ ಸದಸ್ಯರಾದ ಜೆ. ಸುರೇಂದ್ರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಗರ ಪ್ರಮುಖರಾದ ಚೆನ್ನಯ ಸ್ವಾಮಿ, ನಾರಾಯಣಗುರು ಸೇವಾ ಸಂಘದ ಉಪಾಧ್ಯಕ್ಷ ಚಿತ್ತರಂಜನ್ ಬೋಳಾರ್, ಮಹಿಳಾ ಸಮಿತಿಯ ಅಧ್ಯಕ್ಷೆ ಉಷಾ ಸಿ. ಬೋಳಾರ್, ರಮಣಿ ಗಣೇಶ್ ಸಾಲ್ಯಾನ್, ಖಜಾಂಚಿ ಚಂದ್ರಹಾಸ್ ಕಟ್ಟೆಪುಣಿ, ಜತೆ ಕಾರ್ಯದರ್ಶಿ ಚಿತ್ರಾಕ್ಷ ಪೂಜಾರಿ, ಮಹಿಳಾ ಸಮಿತಿಯ ಉಪಾಧ್ಯಕ್ಷೆ ಉಷಾ ಕೆ., ಕಾರ್ಯದರ್ಶಿ ಜಯಲಕ್ಷಿ$¾, ಖಜಾಂಚಿ ಮೋಹಿನಿ ಸುವರ್ಣ, ಜತೆ ಕಾರ್ಯದರ್ಶಿ ಶಕುಂತಳಾ, ಆರೋಗ್ಯ ಸಮಿತಿ ಸಂಚಾಲಕ ರಂಜನ್ ಕೂದೂರ್, ಭಜನ ಸಮಿತಿಯ ಸಂಚಾಲಕ ಗಂಗಾಧರ ಕೋಟ್ಯಾನ್ ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ಮನೋಜ್ ಪೂಜಾರಿ ಸ್ವಾಗತಿಸಿದರು. ಚೇತನ್ ಕುಮಾರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ
FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್ಐಆರ್ ಹಾಕಿದ ಗುರುಗ್ರಾಮ್ ಪೊಲೀಸರು
Mangaluru: ಕೌನ್ ಬನೇಗಾ ಕರೋಡ್ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.