ಬೆಳೆಯುತ್ತಿದೆ ಬೆಳ್ಳಾರೆ: ಪಾರ್ಕಿಂಗ್‌ ಜಾಗವೆಲ್ಲಿದೆ?


Team Udayavani, Oct 12, 2017, 5:04 PM IST

12-Mng-16.jpg

ಬೆಳ್ಳಾರೆ: ವಾಣಿಜ್ಯ ಕೇಂದ್ರವಾಗಿ ಬೆಳೆಯುತ್ತಿರುವ ಬೆಳ್ಳಾರೆ ಪಟ್ಟಣದಲ್ಲಿ ಪಾರ್ಕಿಂಗ್‌ ಸಮಸ್ಯೆಯೂ ಹೆಚ್ಚುತ್ತಿದೆ. 
ಇಲ್ಲಿಗೆ ಬರುವ ಜನರ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. ಇದರಿಂದ ಪಟ್ಟಣದಲ್ಲಿ ಜನ ಹಾಗೂ ವಾಹನ ದಟ್ಟಣೆ ತೀವ್ರವಾಗುತ್ತಿದೆ. ಆದರೆ, ಪಟ್ಟಣದ ಯಾವ ಪ್ರದೇಶದಲ್ಲೂ ಸಮರ್ಪಕ ಪಾರ್ಕಿಂಗ್‌ ವ್ಯವಸ್ಥೆ ಇಲ್ಲ. ವಾಹನ ಚಾಲಕರು-ಮಾಲಕರು ಬೆಳ್ಳಾರೆ ಪೇಟೆಯ ಮುಖ್ಯರಸ್ತೆಯ ಎರಡೂ ಬದಿಗಳಲ್ಲಿ ಅಸ್ತವ್ಯಸ್ತವಾಗಿ ಪಾರ್ಕಿಂಗ್‌ ಮಾಡುತ್ತಿದ್ದಾರೆ.

ಕೆಲವು ಖಾಸಗಿ ವಾಹನಗಳನ್ನು ಬಸ್‌ ನಿಲ್ದಾಣದಲ್ಲಿ ತಂದು ನಿಲ್ಲಿಸುವುದು ಮಾಮೂಲಾಗಿದೆ. ಇದರಿಂದ ಬಸ್‌ಗಳ ತಿರುಗಾಟಕ್ಕೆ ಅಡ್ಡಿಯಾಗುತ್ತಿದೆ.

ಈಡೇರದ ನಿರ್ಧಾರ 
ಒಂದೂವರೆ ವರ್ಷದ ಹಿಂದೆ ವರ್ತಕರ ಸಂಘ ಹಾಗೂ ರೋಟರಿ ಬೆಳ್ಳಾರೆ ಟೌನ್‌ ನೇತೃತ್ವದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್‌ ಅಧಿಕಾರಿಗಳು ಪೊಲೀಸ್‌ ಇಲಾಖೆ ಸಹಯೋಗದಲ್ಲಿ ವೈಜ್ಞಾನಿಕ ಪಾರ್ಕಿಂಗ್‌ ವ್ಯವಸ್ಥೆಯ ಬಗ್ಗೆ ಚರ್ಚಿಸಿದ್ದರು. ಬೆಳ್ಳಾರೆ ಮಸೀದಿ ಬಳಿ, ಅಂಬೆಡ್ಕರ್‌ ಭವನದ ಬಳಿ, ಲಕ್ಷ್ಮೀ ವೆಂಕಟ್ರಮಣ ದೇವಾಲಯದ ಬಳಿ ಪಾರ್ಕಿಂಗ್‌ ವ್ಯವಸ್ಥೆ ಮಾಡುವುದೆಂದು ಯೋಚಿಸಲಾಗಿತ್ತು. ಆ ಸಮಯಕ್ಕೆ ಲೋಕೊಪಯೋಗಿ ಇಲಾಖೆಯವರು ಸದ್ಯದಲ್ಲಿ ಚರಂಡಿ ಕೆಲಸ ಪ್ರಾರಂಭ ಮಾಡುವ ಕಾರಣ ಪಾರ್ಕಿಂಗ್‌ ವ್ಯವಸ್ಥೆಯನ್ನು ಈಗ ಸಮರ್ಪಕವಾಗಿ ಜಾರಿಗೊಳಿಸುವುದು ಬೇಡ. ಚರಂಡಿ ಕಾಮಗಾರಿ ಮುಗಿಯಲಿ ಎಂದು ತಿಳಿಸಿದ್ದರು.

ಆದರೆ ಈಗ ಬೆಳ್ಳಾರೆ ಅರ್ಧ ಪೇಟೆಯಲ್ಲಿ ಚರಂಡಿ ಕಾಮಗಾರಿ ಪೂರ್ಣಗೊಂಡಿದೆ. ಮತ್ತೆ ಸಮರ್ಪಕವಾದ ಪಾರ್ಕಿಂಗ್‌
ವ್ಯವಸ್ಥೆ ಯಾವಾಗ ಜಾರಿ ಬರುತ್ತದೆ ಎಂದು ಜನರು ಕಾದು ನೋಡುವಂತಾಗಿದೆ.

ಪಾರ್ಕಿಂಗ್‌ ಸಮಸ್ಯೆಯ ಬಗ್ಗೆ ಗ್ರಾಮ ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರಕ್ಕೆ ಬರುವುದಾಗಿ
ಬೆಳ್ಳಾರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶಕುಂತಲಾ ನಾಗರಾಜ್‌ ತಿಳಿಸಿದ್ದಾರೆ. 

ಚಲಿಸದ ಚಲಿಸುವ ಗಾಡಿ
ಬೆಳ್ಳಾರೆ ಪೇಟೆಯಲ್ಲಿ ವ್ಯಾಪಾರಕ್ಕಾಗಿ ಚಲಿಸುವ ಗಾಡಿ ಎಂದು ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಿಗೆ ಪಡೆದುಕೊಂಡು ಹಲವರು ಅಂಗಡಿಗಳನ್ನು ನಡೆಸುತ್ತಿದ್ದಾರೆ. ವಾಸ್ತವದಲ್ಲಿ ಈ ಅಂಗಡಿಗಳು ಚಲಿಸುವುದಿಲ್ಲ. ಅಲ್ಲಲ್ಲಿ ಶಾಶ್ವತವಾಗಿ ನೆಲೆಯೂರಿವೆ. ರಸ್ತೆ ಬದಿಯಲ್ಲೇ ಗಾಡಿ ನಿಲ್ಲಿಸಿಕೊಂಡು ಕೆಲವರುವ್ಯಾಪಾರ ಮಾಡುತ್ತಿರುವುದರಿಂದ ಸಂಚಾರ ಹಾಗೂ ಪಾರ್ಕಿಂಗ್‌ ಸಮಸ್ಯೆ ಉಲ್ಬಣಿಸಿದೆ

ತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Fraud: ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ಹೆಸರಲ್ಲಿ ವಂಚನೆ

Fraud: ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ಹೆಸರಲ್ಲಿ ವಂಚನೆ

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.