ಶೈಕ್ಷಣಿಕ ಗುರಿ ಜ್ಞಾನಾರ್ಜನೆಯಲ್ಲ ಕ್ರಿಯಾಶೀಲತೆ :ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ

ಡಾ| ಹೆಗ್ಗಡೆ, ಗುರುರಾಜ್‌ ಪೂಜಾರಿ, ಶಾಸಕ ಹರೀಶ್‌ ಪೂಂಜರಿಗೆ ಗೌರವ

Team Udayavani, Aug 11, 2022, 9:13 AM IST

ಶೈಕ್ಷಣಿಕ ಗುರಿ ಜ್ಞಾನಾರ್ಜನೆಯಲ್ಲ ಕ್ರಿಯಾಶೀಲತೆ :ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ : ಜ್ಞಾನಾರ್ಜನೆ ಯೊಂದೇ ಶಿಕ್ಷಣದ ಏಕೈಕ ಉದ್ದೇಶವಲ್ಲ. ಪಡೆದ ಜ್ಞಾನವನ್ನು ಅಗತ್ಯವಿರುವಲ್ಲಿ ಬಳಸಿಕೊಳ್ಳದೇ ಇದ್ದರೆ ಪಡೆದ ಶಿಕ್ಷಣ ವ್ಯರ್ಥ. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಕ್ರಿಯಾಶೀಲತೆ, ಕೌಶಲವನ್ನು ಗುರುತಿಸಿ ಪೋಷಿಸಿದಾಗ ಅದು ವರವಾಗಿ ಪರಿಣಮಿಸುತ್ತದೆ ಎಂದು ರಾಜ್ಯಸಭೆಯ ನೂತನ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು.

ಉಜಿರೆ ಎಸ್‌ಡಿಎಂ ಕಾಲೇಜು ವತಿಯಿಂದ ಬುಧವಾರ ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನಲ್ಲಿ 2021-22ನೇ ಸಾಲಿನ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಿ ಮಾತನಾಡಿದರು.

ಅಧ್ಯಯನದಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳುವ ಬದ್ಧತೆಯಿದ್ದಾಗ ಸಾಧನೆಯ ಹಾದಿ ಸ್ಪಷ್ಟವಾಗುತ್ತದೆ. ವ್ಯಕ್ತಿಗತ ಜ್ಞಾನ, ಕೌಶಲಗಳಿಗೆ ಸಂಸ್ಕಾರಯುತ ನಡವಳಿಕೆಯಿಂದ ಹೊಸದೊಂದು ಆಯಾಮ ದೊರಕುತ್ತದೆ. ಖಾಸಗಿ ಅಥವಾ ಸರಕಾರಿ ವಲಯಗಳಲ್ಲಿ ಕಾರ್ಯೋನ್ಮು ಖ ರಾಗಿರುವಾಗ ಇನ್ನೊಬ್ಬರೊಂದಿಗೆ ಹೇಗೆ ನಡೆದುಕೊಳ್ಳುತ್ತೇವೆ ಎನ್ನುವುದೇ ಮುಖ್ಯ ವಾಗುತ್ತದೆ. ಸೌಜನ್ಯದ ನಡವಳಿಕೆ ವೃತ್ತಿ ಜೀವನದ ಬೆಳವಣಿಗೆಗೆ ಪೂರಕವಾಗುತ್ತವೆ. ಈ ಬಗೆಯ ತಿಳುವಳಿಕೆಯಿಂದ ಭವಿಷ್ಯ ಉಜ್ವಲವಾಗುತ್ತದೆ ಎಂದರು.

ಶಾಸಕ ಹರೀಶ್‌ ಪೂಂಜ ಮಾತನಾಡಿ, ಪದವಿ ಪೂರ್ಣಗೊಳ್ಳುವುದಕ್ಕೆ ಮುಂಚೆಯೇ ಸಾಧನೆಯ ಕನಸುಗಳನ್ನು ಸಾಕಾರಗೊಳಿ ಸಿಕೊಳ್ಳುವ ಹಂಬಲಗಳನ್ನಿರಿಸಿಬೇಕು. ಸ್ಪರ್ಧಾತ್ಮಕ ಜಗತ್ತಿನ ವೇಗಕ್ಕೆ ತಕ್ಕಂತೆ ಸಾಮರ್ಥ್ಯ ಹೆಚ್ಚಿಸಿಕೊಂಡಾಗ ಸಾಧನೆ ನಿಶ್ಚಿತವಾಗುತ್ತದೆ. ಉಜಿರೆಯ ಸರ್ವತೋಮುಖ ಪ್ರಗತಿಗೆ ಡಾ| ಬಿ. ಯಶೋವರ್ಮರ ಪ್ರಯೋಗಶೀಲ ಪ್ರಯತ್ನವನ್ನು ಸ್ಮರಿಸುತ್ತೇನೆ ಎಂದರು.

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹಷೇìಂದ್ರ ಕುಮಾರ್‌ ಮತ್ತು ಡಾ| ಎಸ್‌. ಸತೀಶ್ಚಂದ್ರ ಉಪಸ್ಥಿತರಿದ್ದರು.

ಉಪಪ್ರಾಂಶುಪಾಲ ಡಾ| ಎ. ಜಯಕುಮಾರ್‌ ಶೆಟ್ಟಿ ವಾರ್ಷಿಕ ವರದಿ ಸಾದರ ಪಡಿಸಿದರು. ಪ್ರಾಂಶುಪಾಲ ಡಾ| ಪಿ.ಎನ್‌. ಉದಯಚಂದ್ರ ಸ್ವಾಗತಿಸಿದರು. ಕಲಾ ವಿಭಾಗ ಡೀನ್‌ ಡಾ| ಶಲೀಪ್‌ ಕುಮಾರಿ ವಂದಿಸಿದರು. ಪ್ರಾಧ್ಯಾಪಕ ಡಾ| ಕುಮಾರ್‌ ಹೆಗ್ಡೆ ಬಿ.ಎ. ಡಾ| ಚಿತ್ರಾ ಮತ್ತು ಡಾ| ನೆಫಿಸೆತ್‌ ಕಾರ್ಯಕ್ರಮ ನಿರೂಪಿಸಿದರು.

ಸಾಧಕರಿಗೆ ಗೌರವ
ರಾಜ್ಯಸಭಾ ಸದಸ್ಯರಾಗಿರುವ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಉಜಿರೆಯ ರಸ್ತೆಯನ್ನು ಸುಂದರಗೊಳಿಸಿರುವ ಶಾಸಕ ಹರೀಶ್‌ ಪೂಂಜ ಮತ್ತು ಎಸ್‌ಡಿಎಂ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತ ಗುರುರಾಜ್‌ ಪೂಜಾರಿ ಅವ ರನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಗೌರವಿಸಿ ಸಮ್ಮಾನಿಸಲಾಯಿತು.

ಸಾರ್ಥಕ, ಪುಣ್ಯದ ಕ್ಷಣ
ಸಮ್ಮಾನ ಸ್ವೀಕರಿಸಿದ ಗುರುರಾಜ್‌ ಮಾತನಾಡಿ, ನಿರ್ದಿಷ್ಟ ಗುರಿಯೊಂದಿಗೆ ಯಾವುದೇ ಕ್ಷೇತ್ರದಲ್ಲಿ ಕಠಿನ ಪರಿಶ್ರಮ ಮತ್ತು ನಿರಂತರ ಅಭ್ಯಾಸ ಮಾಡಿದಲ್ಲಿ ಯಶಸ್ಸು ಖಚಿತ. ಪದಕ ಗೆದ್ದು ಮರಳಿದಾಗ ಡಾ| ಹೆಗ್ಗಡೆಯವರು ವಿಮಾನ ನಿಲ್ದಾಣದಲ್ಲಿ ಗೌರವಿಸಿದ್ದು ಸಾರ್ಥಕ ಪುಣ್ಯ ಕ್ಷಣವಾಗಿದೆ. 2010ರಿಂದ 5 ವರ್ಷಗಳ ಕಾಲ ನಾನು ಎಸ್‌ಡಿಎಂ ಕಾಲೇಜಿನಲ್ಲಿ ಪಡೆದ ತರಬೇತಿ  ನನ್ನನ್ನು ಈ ಮಟ್ಟಕ್ಕೆ ಬೆಳೆಸಿದೆ. ಇಲ್ಲಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಮೇಶ್‌ ಎಚ್‌., ಶಾರದಾ ಮತ್ತು ರಾಜೇಂದ್ರ ಪ್ರಸಾದ್‌ ಅವರ ನಿರಂತರ ತರಬೇತಿ ಮತ್ತು ಪ್ರೋತ್ಸಾಹವೂ ಇದರ ಹಿಂದೆ ಇದೆ ಎಂದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.