ಹರಿಹರನ್‌ಗೆ “ಆಳ್ವಾಸ್‌ ವಿರಾಸತ್‌-2019′ ಪ್ರಶಸ್ತಿ


Team Udayavani, Dec 20, 2018, 10:41 AM IST

hariharan.png

ಮೂಡುಬಿದಿರೆ: “ಆಳ್ವಾಸ್‌ ವಿರಾಸತ್‌-2019’ರ ಪ್ರಶಸ್ತಿಗೆ ಖ್ಯಾತ ಹಿನ್ನೆಲೆ ಗಾಯಕ, ಗಝಲ್‌ ಹಾಡುಗಾರ, ಫ್ಯೂಶನ್‌ ಸಂಗೀತ ಸಾಧಕ ಹರಿಹರನ್‌ ಅವರನ್ನು ಆರಿಸಲಾಗಿದೆ. ಪ್ರಶಸ್ತಿ 1 ಲಕ್ಷ ರೂ. ನಗದು, ಪ್ರಶಸ್ತಿ ಪತ್ರ ಒಳಗೊಂಡಿದೆ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ತಿರುವನಂತಪುರದ ಹರಿಹರನ್‌ ಅನಂತ ಸುಬ್ರಮಣಿಯನ್‌ ಅವರು ಹರಿಹರನ್‌ ಎಂದೇ ಖ್ಯಾತರು. ಗಝಲ್‌, ಭಕ್ತಿಗೀತೆ ಹಾಗೂ ಭಾರತೀಯ ಶಾಸ್ತ್ರೀಯ ಸಂಗೀತಗಳಲ್ಲಿ ಅಸಾಧಾರಣ ಪ್ರತಿಭೆ. ತಮಿಳು, ಹಿಂದಿ, ಮಲಯಾಳಂ, ಕನ್ನಡ, ಮರಾಠಿ, ಭೋಜ್‌ಪುರಿ ಮತ್ತು ತೆಲುಗು ಚಲನಚಿತ್ರ ರಂಗದ ಹಿನ್ನೆಲೆ ಗಾಯಕರಾಗಿ ಜನಮನ ಗೆದ್ದವರು.

30ಕ್ಕಿಂತಲೂ ಹೆಚ್ಚು ಗಝಲ್‌ ಆಲ್ಬಂಗಳನ್ನು ಬಿಡುಗಡೆ ಮಾಡಿದ್ದಾರೆ. 1996ರಲ್ಲಿ “ಕಲೋನಿಯಲ್‌ ಕಸಿನ್ಸ್‌’ ಆಲ್ಬಂನ್ನು ಲೆಸ್ಲೆ ಲೆವಿಸ್‌ ಅವರೊಂದಿಗೆ ತಯಾರಿಸಿ, ಫ್ಯೂಶನ್‌ ಸಂಗೀತ ಸಾಧಕರಾಗಿಯೂ ಹೊರಹೊಮ್ಮಿದ್ದಾರೆ.

ಬಾರ್ಡರ್‌ ಸಿನೆಮಾದ “ಮೇರೆ ದುಶ್ಮನ್‌ ಮೇರೆ ಭಾಯಿ’ ಹಾಗೂ ಅಜಯ್‌ ಅತುಲ್‌ ಸಂಯೋಜನೆಯ ಮರಾಠಿ ಚಿತ್ರ “ಜೋಗ್ವಾ’ದ “ಜೀವ್‌ ರಾಂಗ್ಳ’ ಹಾಡುಗಳಿಗೆ ರಾಷ್ಟ್ರೀಯ ಪುರಸ್ಕಾರಗಳನ್ನು ಪಡೆದಿದ್ದಾರೆ. 2004ರಲ್ಲಿ ಇವರಿಗೆ ಪದ್ಮಶ್ರೀ ಪ್ರಶಸ್ತಿ ಬಂದಿದೆ.

ಪುತ್ತಿಗೆಯಲ್ಲಿರುವ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್‌ ವೇದಿಕೆಯಲ್ಲಿ ಜ.4ರಿಂದ 6ರ ವರೆಗೆ ಆಳ್ವಾಸ್‌ ವಿರಾಸತ್‌ ನಡೆಯಲಿದ್ದು ಜ. 4ರಂದು ವಿರಾಸತ್‌ ಪ್ರಶಸ್ತಿ ಪ್ರದಾನ ನಡೆಯಲಿದೆ. “ಆಳ್ವಾಸ್‌ ವಿರಾಸತ್‌’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ ಈಗ ರಜತ ಸಂಭ್ರಮ ಎಂದು ಡಾ| ಮೋಹನ ಆಳ್ವ ತಿಳಿಸಿದರು.

ಜ. 4ರಂದು ಹರಿಹರನ್‌ ಮತ್ತು ಲೆಸ್ಲೆ ಲಿವಿಸ್‌ ಅವರ ರಸಸಂಯೋಗ, ಜ. 5ರಂದು ಮುಂಬಯಿಯ ಸುಖೀÌಂದರ್‌ ಸಿಂಗ್‌ ಬಳಗದಿಂದ ಗಾನತರಂಗ, ಬೆಂಗಳೂರಿನ ತಂಡದಿಂದ ಒಡಿಸ್ಸಿ ನೃತ್ಯ, ಚೆನ್ನೈಯ ಶೈಲ ಸುಧಾ ಅಕಾಡೆಮಿಯವರಿಂದ ಕೂಚುಪುಡಿ, ಜ. 6ರಂದು ಹೈದರಾಬಾದ್‌ನ ಸೂರ್ಯಪ್ರಕಾಶ್‌ಗೆ ವರ್ಣವಿರಾಸತ್‌ ಪ್ರದರ್ಶನ, ಶಂಕರ್‌ ಮಹಾದೇವನ್‌ ಚಿತ್ರರಸಸಂಜೆ, ಪರಂಪರ ಕೋಲ್ಕತಾ ಭರತನಾಟ್ಯ ಇತ್ಯಾದಿ ನಡೆಯಲಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.