ಆರೋಗ್ಯ ಸುರಕ್ಷಾ ಯೋಜನೆ: ಖಾಸಗಿ ಆಸ್ಪತ್ರೆಗಳಿಗೆ ಕೋಟ್ಯಂತರ ರೂ. ಬಾಕಿ


Team Udayavani, Nov 26, 2017, 12:27 PM IST

26-Nov-9.jpg

ಮಹಾನಗರ: ‘ಸುವರ್ಣ ಆರೋಗ್ಯ ಸುರಕ್ಷಾ’ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ಬಡರೋಗಿಗಳ ಚಿಕಿತ್ಸಾ ವೆಚ್ಚಕ್ಕೆ ಮರುಪಾವತಿಸಬೇಕಾದ ಕೋಟ್ಯಂತರ ರೂ. ಅನ್ನು ರಾಜ್ಯ ಸರಕಾರ ಬಾಕಿ ಉಳಿಸಿಕೊಂಡಿದ್ದು, ಆಸ್ಪತ್ರೆಗಳು ಸಂಕಷ್ಟಕ್ಕೆ ಸಿಲುಕಿವೆ. ಜಿಲ್ಲೆಯಲ್ಲಿ ಸುಮಾರು ಏಳು ತಿಂಗಳಿನಿಂದ ಸರಕಾರದಿಂದ ಹಣ ಪಾವತಿಯಾಗಿಲ್ಲ. ಪ್ರತಿ ಖಾಸಗಿ ಆಸ್ಪತ್ರೆಗೂ ಸುಮಾರು 1ರಿಂದ 2 ಕೋಟಿ ರೂ.ಗೂ ಅಧಿಕ ಹಣ ಬಾಕಿ ಇದೆ.

ಸರಕಾರವು ಖಾಸಗಿ ಆಸ್ಪತ್ರೆಗಳಲ್ಲಿ ಬಿಪಿಎಲ್‌ ಕಾರ್ಡ್‌ದಾರರಿಗೆ ಗುಣಮಟ್ಟದ ಉಚಿತ ಚಿಕಿತ್ಸೆ ಪಡೆದುಕೊಳ್ಳುವುದಕ್ಕೆ ಮತ್ತು ಎಪಿಎಲ್‌ ಕುಟುಂಬದ ಚಿಕಿತ್ಸಾ ವೆಚ್ಚದ ಶೇ.70ರಷ್ಟು ಭರಿಸುವ ಉದ್ದೇಶದಿಂದ ಸುವರ್ಣ ಆರೋಗ್ಯ ಸುರಕ್ಷಾ ಎಂಬ ಯೋಜನೆ ಜಾರಿಗೆ ತಂದಿದೆ. ಈ ಸಂಬಂಧ ಪ್ರತಿ ಜಿಲ್ಲೆಯಲ್ಲೂ ನಿಗದಿತ ಖಾಸಗಿ ಆಸ್ಪತ್ರೆಗಳ ಜತೆಗೆ ಒಪ್ಪಂದ ಮಾಡಿಕೊಂಡಿದ್ದು, ಬಡರೋಗಿಗಳ ಚಿಕಿತ್ಸೆಯ ವೆಚ್ಚವನ್ನು ಆಸ್ಪತ್ರೆಗಳಿಗೆ ಸರಕಾರ ಪಾವತಿಸುತ್ತದೆ.

ಈಗ ಖಾಸಗಿ ಆಸ್ಪತ್ರೆಗಳಿಗೆ ಈ ಯೋಜನೆಯಡಿ ಚಿಕಿತ್ಸಾ ವೆಚ್ಚ ಮರುಪಾವತಿ ವಿಳಂಬವಾಗಿದ್ದು, ಕೋಟ್ಯಂತರ ರೂ.ಬಾಕಿ ಇರುವುದರಿಂದ ಸಂಕಷ್ಟ ಎದುರಾಗಿದೆ.

ಆರ್ಥಿಕ ಹೊರೆ ಹೆಚ್ಚಳ
ಈ ಯೋಜನೆಯಡಿ ಖಾಸಗಿ ಆಸ್ಪತ್ರೆಗಳು ಸಾವಿರಾರು ರೂ. ಔಷಧವನ್ನು ವಿತರಕರಿಂದ ಪಡೆದು ರೋಗಿಗಳಿಗೆ ಚಿಕಿತ್ಸೆ ನೀಡುತ್ತವೆ. ವಿತರಕರಿಗೆ ಈ ಔಷಧ ವೆಚ್ಚವನ್ನು 90 ದಿನಗಳೊಳಗೆ ಮರು ಪಾವತಿಸಬೇಕಾಗಿದ್ದು, ವಿಳಂಬವಾದರೆ ವಿತರಕರಿಂದ ಕಿರಿಕಿರಿ ಅನುಭವಿಸಬೇಕಾಗುತ್ತದೆ. ಸಾಮಾನ್ಯವಾಗಿ, ಸರಕಾರದಿಂದ ಚಿಕಿತ್ಸಾ ವೆಚ್ಚವು ಮರು ಪಾವತಿಯಾಗುವುದಕ್ಕೆ ಏಳೆಂಟು ತಿಂಗಳು ಕಳೆಯುತ್ತಿದ್ದು, ಆಸ್ಪತ್ರೆಗಳ ಆರ್ಥಿಕ ಹೊರೆ ಕೂಡ ಜಾಸ್ತಿಯಾಗುತ್ತಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಅನೇಕ ಬಾರಿ ಇಲ್ಲಸಲ್ಲದ ಸಬೂಬು ಹೇಳಿ ಹಣ ಬಿಡುಗಡೆಗೆ ವಿಳಂಬ ಮಾಡುತ್ತಿದ್ದಾರೆ. ರೋಗಿಯ ಬಗ್ಗೆ ಸೂಕ್ತ ದಾಖಲೆ ಸಲ್ಲಿಸಿದ್ದರೂ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸುತ್ತವೆ.

ಯಾವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ?
ಜಿಲ್ಲೆಯಲ್ಲಿ ಸುಮಾರು 35ರಿಂದ 40 ಆಸ್ಪತ್ರೆಗಳನ್ನು ಆರೋಗ್ಯ ಸುರಕ್ಷಾ ಯೋಜನೆಯಡಿ ಗುರುತಿಸಲಾಗಿದೆ. ಫಾದರ್‌ ಮುಲ್ಲರ್‌ ಆಸ್ಪತ್ರೆ ಕಂಕನಾಡಿ ಮತ್ತು ಕೆ.ಎಸ್‌. ಹೆಗ್ಡೆ ಆಸ್ಪತ್ರೆ, ದೇರಳಕಟ್ಟೆ (ಹೃದ್ರೋಗ, ಕ್ಯಾನ್ಸರ್‌, ನರರೋಗ, ಮೂತ್ರಪಿಂಡದ ಕಾಯಿಲೆ, ಸುಟ್ಟಗಾಯ, ಅಪಘಾತ, ನವಜಾತ ಶಿಶುಗಳಿಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗಳು), ಮಣ್ಣಗುಡ್ಡೆಯ ಗ್ಲೋಬಲ್‌ ಆಸ್ಪತ್ರೆ (ಕ್ಯಾನ್ಸರ್‌, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ, ಅಪಘಾತ, ಸುಟ್ಟಗಾಯಕ್ಕೆ ಚಿಕಿತ್ಸೆ), ಅತ್ತಾವರ ಕೆಎಂಸಿ ಆಸ್ಪತ್ರೆ (ಕ್ಯಾನ್ಸರ್‌, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ, ಅಪಘಾತ), ದೇರಳಕಟ್ಟೆಯ ಯೇನೆಪೊಯ ಆಸ್ಪತ್ರೆ (ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ, ಕ್ಯಾನ್ಸರ್‌, ಅಪಘಾತ) ಕೊಡಿಯಾಲ್‌ಬೈಲ್‌ನ ಯೇನೆಪೊಯ ಆಸ್ಪತ್ರೆ (ಹೃದ್ರೋಗ ಮತ್ತು ಮೂತ್ರಪಿಂಡದ ಕಾಯಿಲೆ), ಪಂಪ್‌ ವೆಲ್‌ನ ಒಮೇಗಾ ಆಸ್ಪತ್ರೆ (ಹೃದ್ರೋಗ, ನರರೋಗ, ಮೂತ್ರಪಿಂಡ ಕಾಯಿಲೆ) ದೇರಳಕಟ್ಟೆಯ ಕಣಚೂರ್‌ ಆಸ್ಪತ್ರೆ (ಮೂತ್ರಪಿಂಡದ ಕಾಯಿಲೆ ಮತ್ತು ಅಪಘಾತದ ಚಿಕಿತ್ಸೆ, ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ), ಪುತ್ತೂರಿನ ಪ್ರಗತಿ ಆಸ್ಪತ್ರೆ (ಮೂತ್ರಪಿಂಡದ ಕಾಯಿಲೆ, ಸುಟ್ಟಗಾಯ ಮತ್ತು ಅಪಘಾತದ ಚಿಕಿತ್ಸೆ, ಜ್ಯೋತಿ ಸರ್ಕಲ್‌ನ ಕೆಎಂಸಿ (ಹೃದ್ರೋಗ) ಬಡರೋಗಿಗಳು ದಾಖಲಾದರೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ಪ್ರತಿಯೊಂದು ಆಸ್ಪತ್ರೆಗೂ ಒಂದರಿಂದ 2 ಕೋ.ರೂ. ಬಾಕಿ ಇರಿಸಿರುವುದರಿಂದ ಈ ಯೋಜನೆಯಡಿ ಬಡರೋಗಿಗಳಿಗೆ ಚಿಕಿತ್ಸೆ ಮುಂದುವರಿಸುವುದಕ್ಕೂ ತುಂಬಾ ತೊಂದರೆಯಾಗುತ್ತಿದೆ. ಸರಕಾರ ಆದಷ್ಟು ಬೇಗ, ಬಾಕಿ ಮೊತ್ತವನ್ನು ಮರುಪಾವತಿಸಬೇಕು ಎಂದು ಹೆಸರು ಹೇಳಲು ಇಚ್ಛಿಸದ ಖಾಸಗಿ ಆಸ್ಪತ್ರೆಯೊಂದರ ಸಿಬಂದಿ ‘ಉದಯವಾಣಿ’ಗೆ ತಿಳಿಸಿದ್ದಾರೆ.

ದಾಖಲೆ ಇಲ್ಲದಿದ್ದರೆ ಮಾತ್ರ ವಿಳಂಬ
ಆರೋಗ್ಯ ಸುರಕ್ಷಾ ಯೋಜನೆಯಡಿ ದಾಖಲಾದ ರೋಗಿಗಳ ಚಿಕಿತ್ಸಾ ವೆಚ್ಚಕ್ಕೆ ಸಂಬಂಧ ಖಾಸಗಿ ಆಸ್ಪತ್ರೆಗಳು ನೀಡಿರುವ ದಾಖಲೆಗಳನ್ನು ಪ್ರತಿ ತಿಂಗಳು ಇಲಾಖೆ ಮುಖ್ಯ ಕಚೇರಿಗೆ ಕಳುಹಿಸಲಾಗುತ್ತಿದೆ. ಸಾಮಾನ್ಯವಾಗಿ ಮೂರು ತಿಂಗಳೊಳಗೆ ಈ ವೆಚ್ಚ ಆಸ್ಪತ್ರೆಗಳಿಗೆ ಮರುಪಾವತಿಯಾಗುತ್ತಿದೆ. ಸರಿಯಾದ ದಾಖಲೆ ಒದಗಿಸದಿದ್ದರೆ ಮಾತ್ರ ವಿಳಂಬವಾಗಬಹುದು. ಒಂದು ವೇಳೆ ನಮ್ಮಿಂದ ದಾಖಲೆ ಸಲ್ಲಿಸುವುದಕ್ಕೆ ವಿಳಂಬ ಮಾಡಿದರೆ, ಸರಕಾರಕ್ಕೆ ನಮ್ಮ ಮೇಲೆ ಪ್ರಕರಣ ದಾಖಲಿಸುವ ಹಕ್ಕೂ ಇದೆ.
ಜಗನ್ನಾಥ್‌, ಸುವರ್ಣ ಆರೋಗ್ಯ
   ಸುರಕ್ಷಾ ಇಲಾಖೆ ಜಿಲ್ಲಾ ಸಂಯೋಜಕ 

   ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

army

Kashmir;ಕುಲ್ಗಾಮ್‌ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ

puttige

Udupi; ಗೀತಾರ್ಥ ಚಿಂತನೆ-49: ಕೊನೆಯಲ್ಲೂ ಧೃತರಾಷ್ಟ್ರನ ಲಾಭದ ದೃಷ್ಟಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.