ಊಟದ ಬದಲು ಪೌಷ್ಟಿಕ ಆಹಾರ ಕಿಟ್‌ಗೆ ಬೇಡಿಕೆ


Team Udayavani, Sep 30, 2018, 4:03 PM IST

kit.jpg

ಮಂಗಳೂರು: ಅಂಗನವಾಡಿ ಮೂಲಕ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಮಧ್ಯಾಹ್ನ ವೇಳೆ ಪೌಷ್ಟಿಕ ಬಿಸಿಯೂಟ ನೀಡುವ “ಮಾತೃಪೂರ್ಣ’ ಯೋಜನೆಗೆ ಕರಾವಳಿಯಲ್ಲಿ ನೀರಸ ಸ್ಪಂದನೆ ವ್ಯಕ್ತವಾಗಿದೆ. ಊಟದ ಬದಲು ಪೌಷ್ಟಿಕ ಆಹಾರದ ಕಿಟ್‌ ನೀಡಬೇಕು ಎಂಬ ಆಗ್ರಹವಿದೆ.  

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಪೂರಕ ಪೌಷ್ಟಿಕ ಆಹಾರ ಕಾರ್ಯಕ್ರಮದಡಿ ಅಂಗನವಾಡಿ ಕೇಂದ್ರದಲ್ಲಿಯೇ ಪೌಷ್ಟಿಕ ಅಡುಗೆ ತಯಾರಿಸಿ, ಮಧ್ಯಾಹ್ನ ಉಣಬಡಿಸುವುದು ಮಾತೃಪೂರ್ಣ ಯೋಜನೆ. ಆಹಾರವನ್ನು ಗರ್ಭಿಣಿಯರು ಹಾಗೂ ಬಾಣಂತಿಯರು ನಿತ್ಯ ಅಂಗನವಾಡಿಗೆ ಬಂದು ಸೇವಿಸಬೇಕು.  2017ರ ಅ. 2ರಿಂದ ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಈ ಯೋಜನೆ ಅನುಷ್ಠಾನಗೊಂಡಿತ್ತು.

ಯೋಜನೆಯಡಿ ನೀಡುವ ಊಟದಲ್ಲಿ  ಅನ್ನ, ಸಾಂಬಾರು, ಪಲ್ಯದ ಜತೆಗೆ ಬೇಯಿಸಿದ ಮೊಟ್ಟೆ ಮತ್ತು 200 ಮಿ.ಮೀ. ಹಾಲು ಹಾಗೂ ನೆಲಗಡಲೆ ಚಿಕ್ಕಿ ಒಳಗೊಂಡಿದೆ. ತಿಂಗಳಿಗೆ 25 ದಿನಗಳಂತೆ ಮಗುವಿಗೆ 2 ವರ್ಷ ಪೂರ್ಣಗೊಳ್ಳುವ ತನಕ ಆಹಾರ ನೀಡಲಾಗುತ್ತದೆ. ಮೊಟ್ಟೆ ತಿನ್ನದವರಿಗೆ ಮೊಳಕೆ ಬರಿಸಿದ ಕಾಳು ನೀಡಲಾಗುತ್ತದೆ.

ಇ¨ರಿಂದಾಗಿ ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ದಿನಕ್ಕೆ ಬೇಕಾಗುವ ಶೇ. 40-45 ಪ್ರೊಟೀನ್‌, ಕ್ಯಾಲ್ಸಿಯಂ ಲಭ್ಯವಾಗುತ್ತದೆ. ಹೆರಿಗೆ ಸಮಯದಲ್ಲಿ ತಾಯಂದಿರು ಹಾಗೂ ಶಿಶು ಮರಣ ತಡೆಗಟ್ಟುವುದು, ರಕ್ತಹೀನತೆ ತಡೆ, ಆರೋಗ್ಯ ವೃದ್ಧಿ ಹಾಗೂ ಕಡಿಮೆ ತೂಕದ ಶಿಶುಗಳ ಜನನ ನಿಯಂತ್ರಣ ಈ ಯೋಜನೆಯ ಉದ್ದೇಶ.

ಕಿಟ್‌ ಮಾದರಿ ವಿತರಣೆಗೆ ಕೋರಿಕೆ 
ಪೌಷ್ಟಿಕ ಆಹಾರವನ್ನು ಹಿಂದೆ ಇದ್ದಂತೆ ಕಿಟ್‌ ರೂಪದಲ್ಲಿ ಪೌಷ್ಟಿಕ ಆಹಾರ ಒದಗಿಸಬೇಕು ಎಂಬ ಅಂಶವನ್ನು ಇಲಾಖೆಯ ಗಮನಕ್ಕೆ ತರಲಾಗಿದೆ. ಈ ಹಿಂದೆ ಅಕ್ಕಿ, ಗೋಧಿ, ಕಾಳು, ಬೆಲ್ಲ ಮುಂತಾದ ಪೌಷ್ಟಿಕ ಪದಾರ್ಥಗಳ ತಿಂಗಳ ಕಿಟ್‌ ನೀಡಲಾಗುತ್ತಿತ್ತು. ಸಚಿವೆ ಜಯಮಾಲಾ ಇತ್ತೀಚೆಗೆ ದ. ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಿದ ಸಂದರ್ಭದಲ್ಲಿ ಅವಶ್ಯ ಬದಲಾವಣೆಗಳ ಬಗ್ಗೆ ಮನವರಿಕೆ ಮಾಡಲಾಗಿತ್ತು. ಸಚಿವೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. 

ಸ್ಪಂದನೆ ಯಾಕಿಲ್ಲ? 
ಕರಾವಳಿಯಲ್ಲಿ ಅಂಗನವಾಡಿ ಮನೆಗಳಿಂದ ದೂರವಿದ್ದು, ಗರ್ಭಿಣಿಯರು, ತಾಯಂದಿರು ಮಧ್ಯಾಹ್ನ ಊಟಕ್ಕೆ ಬರುವುದು ಕಷ್ಟ ಸಾಧ್ಯ. ಇದರೊಂದಿಗೆ ಅಂಗನವಾಡಿಗೆ ಹೋಗಿ ಊಟ ಮಾಡುವ ಬಗ್ಗೆ ಸಮಾಜದಲ್ಲಿ ಅಷ್ಟೊಂದು ಒಲವು ವ್ಯಕ್ತವಾಗಿಲ್ಲ. ಈ ಕಾರಣ ಆಹಾರ ಸ್ವೀಕರಿಸಲು ಬರುವವರ ಸಂಖ್ಯೆ ತೀರ ಕಡಿಮೆಯಿದೆ.

ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಅವಿಭಜಿತ ದ.ಕ. ಜಿಲ್ಲೆಯಲ್ಲಿ  ಮಾತೃಪೂರ್ಣ ಯೋಜನೆ ಸಾಧನೆ ಕಡಿಮೆ ಇದೆ. ಅಂಗನವಾಡಿಗಳಿಗೆ ಬರಲು ಸಾಧ್ಯವಾಗದ ಬಗ್ಗೆ ಮಾಹಿತಿ ನೀಡಿದರೆ ಮನೆಗಳಿಗೆ ಊಟ ಒದಗಿಸಲು ವ್ಯವಸ್ಥೆ ಮಾಡಲಾಗುವುದು. ಇದೂ ಸಾಕಾಗದಿದ್ದರೆ ಕಿಟ್‌ ನೀಡಲಾಗುವುದು. ಒಟ್ಟಾರೆ ಸರಕಾರದ ಉದ್ದೇಶ ಈಡೇರಬೇಕಿದೆ.
-ಡಾ| ಜಯಮಾಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ

– ಕೇಶವ ಕುಂದರ್‌

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.