ದ.ಕ. ಜಿಲ್ಲೆಯಲ್ಲಿ ಕೆಲಸ ಮಾಡಲು ಸಾಕಷ್ಟಿದೆ: ಕೋಟ

ಜಿಲ್ಲೆಯ ಶಾಸಕರಿಂದ ಉಸ್ತುವಾರಿ ಸ್ಥಾನ ತಪ್ಪಿದೆ ಎನ್ನಲಾರೆ

Team Udayavani, Sep 19, 2019, 4:21 AM IST

q-39

ಕೋಟ: ಉಡುಪಿ ಜಿಲ್ಲೆಯ ಐವರು ಶಾಸಕರಿಗೆ ಅವರವರ ಕ್ಷೇತ್ರಗಳಿಗೆ ಸಂಬಂಧಿಸಿದ ಸಾಕಷ್ಟು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕಾಗಿ ಮುಖ್ಯ ಮಂತ್ರಿಗಳನ್ನು ಭೇಟಿಯಾ ಗಿರ ಬಹುದೇ ಹೊರತು ನನಗೆ ಜಿಲ್ಲೆಯ ಉಸ್ತುವಾರಿ ಸ್ಥಾನ ತಪ್ಪಿಸಲು ಭೇಟಿ ಯಾಗಿದ್ದಾರೆ ಎನ್ನುವ ಭಾವನೆ ನನಗಿಲ್ಲ ಎಂದು ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅವರು ಮಂಗಳವಾರ ಚೇಂಪಿಯಲ್ಲಿ ವಿಶ್ವಕರ್ಮ ಯಜ್ಞ ಮಹೋತ್ಸವಕ್ಕೆ ಭೇಟಿ ನೀಡಿದ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದ 30 ಜಿಲ್ಲೆಗಳ ಉಸ್ತುವಾರಿಯನ್ನು 16 ಸಚಿವರಿಗೆ ಹಂಚಬೇಕಾ ಗಿರುವುದರಿಂದ ಒಂದಷ್ಟು ಸಚಿವರಿಗೆ ಅಕ್ಕ-ಪಕ್ಕದ ಜಿಲ್ಲೆಯ ಹೊಣೆಗಾರಿಕೆ ನೀಡಲಾಗಿದೆ. ಇದು ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು ಯಾವುದೇ ಕಾರಣಕ್ಕೆ ಪ್ರಶ್ನಿಸಲಾರೆ; ನೀಡಿದ ಜವಬ್ದಾರಿಯನ್ನು ಪ್ರೀತಿಯಿಂದ ಸ್ವೀಕರಿಸಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದರು.

ಅಭಿವೃದ್ಧಿಗೆ ಸಾಕಷ್ಟು ಅವಕಾಶವಿರುವ ರಾಜ್ಯದ ಜಿಲ್ಲೆಗಳಲ್ಲಿ ಬೆಂಗಳೂರಿನ ಅನಂತರದ ಸ್ಥಾನ ದ.ಕ. ಜಿಲ್ಲೆಗಿದೆ. 250 ಗ್ರಾ.ಪಂ.ಗಳಿವೆ. ನಮ್ಮದೇ ಪಕ್ಷದ 7 ಮಂದಿ ಶಾಸಕರು, ಸಂಸದರಿದ್ದಾರೆ. ರಾಜ್ಯದಲ್ಲೇ ಹೆಚ್ಚಿನ ಸಂಖ್ಯೆಯ ದೇಗುಲಗಳಿದ್ದು ಮುಜರಾಯಿ ಸಚಿವನಾಗಿರುವುದರಿಂದ ಅವುಗಳ ಅಭಿವೃದ್ಧಿಗೆ ಒತ್ತು ನೀಡುತ್ತೇನೆ.

ಅನೇಕ ಕಿರುಬಂದರು, ಬೃಹತ್‌ ಬಂದರುಗಳಿದ್ದು ಅವುಗಳನ್ನು ಅಭಿವೃದ್ಧಿ ಮಾಡುತ್ತೇನೆ. ಮೀನುಗಾರಿಕೆ ಅಭಿವೃದ್ಧಿಗೆ, ಬೋಟ್‌ ಹೌಸ್‌ಗಳ ನಿರ್ಮಾಣಕ್ಕೆ ಒತ್ತು ನೀಡುತ್ತೇನೆ ಎಂದು ಹೇಳಿದರು.

ಒಟ್ಟಾಗಿ ದುಡಿಯುವ
ಉಡುಪಿ ಜಿಲ್ಲೆಯ ಉಸ್ತುವಾರಿ ಸ್ಥಾನ ತಪ್ಪಿದಕ್ಕೆ ಕೆಲವು ಸಂಘಟನೆಗಳು ಪ್ರತಿರೋಧ ವ್ಯಕ್ತಪಡಿಸಿದ ಕುರಿತು ಪ್ರಶ್ನಿಸಿದಾಗ, ಈ ವಿಚಾರ ನನಗೆ ತಿಳಿದಿಲ್ಲ. ಆದರೆ ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಒಟ್ಟಾಗಿ ಒಂದಾಗಿ ಕೆಲಸಗಳನ್ನು ಮಾಡಬೇಕೆಂದು ಬಯಸುತ್ತೇನೆ ಎಂದರು.

ಉಡುಪಿಯನ್ನು ಮರೆಯಲಾರೆ
ನನಗೆ ಉಡುಪಿ ಜಿಲ್ಲೆಯ ಉಸ್ತುವಾರಿ ಸ್ಥಾನ ಸಿಕ್ಕಿಲ್ಲ ಎನ್ನುವ ಕಾರಣಕ್ಕೆ ಈ ಜಿಲ್ಲೆಯನ್ನು ಮರೆಯಲಾರೆ. ನನ್ನ ಖಾತೆಗಳಿಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ. ಮರಳು ಸಮಸ್ಯೆಗೆ ಸಾಕಷ್ಟು ಹೋರಾಟ ನಡೆಸಿದ್ದು ಒಂದು ವಾರದಲ್ಲಿ 171 ಗುತ್ತಿಗೆದಾರರಿಗೆ ಮರಳು ಪರವಾನಿಗೆ ನೀಡಿ ಮನೆಬಾಗಿಲಿಗೆ ಮರಳು ದೊರೆಯುವಷ್ಟು ಕೆಲಸ ಕಾರ್ಯಗಳಾಗಿವೆ ಎಂದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.