ದ. ಕ. ಜಿಲ್ಲೆಯಲ್ಲಿ ಬಿರುಸಿನ ಮಳೆ
Team Udayavani, Jul 7, 2022, 11:30 PM IST
ಮಂಗಳೂರು: ಎರಡು ದಿನ ಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಗುರು ವಾರವೂ ಮುಂದುವರಿದಿದ್ದು, ಮತ್ತೆ 2 ದಿನಗಳ ಕಾಲ “ರೆಡ್ ಅಲರ್ಟ್’ ಘೋಷಿಸಲಾಗಿದೆ. ಜಿಲ್ಲೆಯ ಬಹುತೇಕ ಕಡೆ ಕೃತಕ ನೆರೆ, ಅಪಾರ ಹಾನಿ ಸಂಭವಿಸಿದೆ.
ದ.ಕ. ಜಿಲ್ಲೆಯಲ್ಲಿ ಮಳೆಗೆ 2 ಮನೆಗಳಿಗೆ ಸಂಪೂರ್ಣ ಹಾನಿಯಾಗಿದ್ದು, 11 ಮನೆಗಳಿಗೆ ಭಾಗಶಃ ಹಾನಿ ಉಂಟಾಗಿದೆ. ನಗರದಲ್ಲಿ ಬಿರುಸಿನ ಮಳೆಯಾಗಿದ್ದು, ಕೆಲವು ಕಡೆ ಹಾನಿ ಉಂಟಾಗಿದೆ. ಪಡೀಲ್ ಕಣ್ಣೂರು ಸಮೀಪದ ಬಳ್ಳೂರುಗುಡ್ಡೆ ಎಂಬಲ್ಲಿ ಮನೆಯೊಂದರ ಪಕ್ಕದ ಗುಡ್ಡ ಕುಸಿದು ಸುಮಾರು 7ಕ್ಕೂ ಅಧಿಕ ಮನೆಗಳು ಅಪಾಯದ ಅಂಚಿನಲ್ಲಿವೆ. ಮೂರು ಮನೆಗಳು ಯಾವುದೇ ಸಂದರ್ಭದಲ್ಲಿ ಬೀಳುವ ಅಪಾಯದಲ್ಲಿದ್ದು, ಸಮೀಪದ 4ಕ್ಕೂ ಅಧಿಕ ಮನೆಗಳು ಆತಂಕದಲ್ಲಿದೆ. ಈಗಾಗಲೇ ಐದು ಮನೆಯ ಜನರನ್ನು ಸ್ಥಳಾಂತರಿಸಲಾಗಿದೆ. ಅಗತ್ಯವಿರುವವರಿಗೆ ಸಮೀಪದ ಅಂಗನವಾಡಿಯಲ್ಲಿ ಆಶ್ರಯ, ಆಹಾರ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಅಧಿಕಾರಿಗಳು ಪರಿಶೀಲಿಸಿದರು. ನಗರದ ಪಚ್ಚನಾಡಿಯ ಭಟ್ರಕೋಡಿ ಬಳಿ ತಡೆಗೋಡೆ ಕುಸಿದು ಕಾಂಕ್ರಿಟ್ ರಸ್ತೆಗೆ ಹಾನಿ ಉಂಟಾಗಿದೆ. ಕೆಲವು ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಆವರಿಸಿ, ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.
ಸುಳ್ಯ ತಾಲೂಕಿನ ಹರಿಹರ ಗ್ರಾಮದ ಕೊಪ್ಪತ್ತಡ್ಕ ಸೇತುವೆಯ ಸಂಪರ್ಕ ರಸ್ತೆ ಕಡಿತಗೊಂಡಿದೆ. ಬಾಲುಗೋಡು ಬಳಿ ಮರದ ಪಾಳ ಕೊಚ್ಚಿಹೋಗಿ ಸಂಪರ್ಕ ಕಡಿತಗೊಂಡಿದೆ. ಉಪ್ಪಿನಂಗಡಿ-ಪುತ್ತೂರು ರಾಜ್ಯ ಹೆದ್ದಾರಿಯ ಆನೆಮಜಲಿನಲ್ಲಿ ರಸ್ತೆ ಕುಸಿದಿದೆ. ಸೋಮೇಶ್ವರದ ಉಚ್ಚಿಲ ಬಟ್ಟಪ್ಪಾಡಿ ಮತ್ತು ಉಳ್ಳಾಲದ ಸೀ ಗ್ರೌಂಡ್ನಲ್ಲಿ ಕಡಲ್ಕೊರೆತ ಮುಂದುವರಿದಿದೆ.
ಎರಡು ದಿನ “ರೆಡ್ ಅಲರ್ಟ್’ :
ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಜು. 8ರಂದು ಬೆಳಗ್ಗೆ 8.30ರಿಂದ ಜು.9ರ ಬೆಳಗ್ಗೆ 8.30ರವರೆಗೆ “ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ವೇಳೆ 204.5 ಮಿ.ಮೀ.ಗಿಂತಲೂ ಅಧಿಕ ಮಳೆಯಾಗುವ ನಿರೀಕ್ಷೆ ಇದೆ. ಗಾಳಿಯ ಜೊತೆ ಸಮುದ್ರದ ಅಬ್ಬರ ಕೂಡ ಹೆಚ್ಚಾಗುವ ನಿರೀಕ್ಷೆ ಇದೆ.
ಜಿಲ್ಲಾಡಳಿತದಿಂದ ಮುಂಜಾಗ್ರತೆ :
ಭಾರೀ ಮಳೆ ಸುರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ 88 ಕಡೆ ಕಾಳಜಿ ಕೇಂದ್ರ ತೆರೆಯಲಾಗಿದೆ. ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡ ಸನ್ನದ್ಧವಾಗಿದೆ. ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ. ತೆರೆಯಲಾಗಿದೆ. ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರುವಂತೆ ಸೂಚಿಸಲಾಗಿದೆ. ವಿವಿಧ ಪ್ರದೇಶಗಳಿಗೆ ನೋಡೆಲ್ ಅಧಿಕಾರಿ ನೇಮಕ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.